‘ಉದ್ಯಮಿಯೊಬ್ಬರು ವಿದೇಶದಿಂದ ಕೆಲವು ಸರಕುಗಳನ್ನು ಆಮದು ಮಾಡಿಕೊಂಡಿದ್ದರು. ಅವುಗಳ ಪರಿಶೀಲನೆ ಪೂರ್ಣಗೊಳಿಸಿ, ಸಾಗಣೆಗೆ ಅನುಮತಿ ನೀಡುವಂತೆ ಚಾಮರಾಜಪೇಟೆಯಲ್ಲಿರುವ ಕಸ್ಟಮ್ಸ್ ಇಲಾಖೆಯ ಕಚೇರಿಗೆ ಮನವಿ ಸಲ್ಲಿಸಿದ್ದರು. ಸರಕುಗಳ ಸಾಗಣೆಗೆ ಅನುಮತಿ ನೀಡಲು ಲಂಚ ಕೊಡುವಂತೆ ಅಲ್ಲಿನ ಅಧಿಕಾರಿಗಳು ಬೇಡಿಕೆ ಇಟ್ಟಿದ್ದರು. ಈ ಕುರಿತು ಉದ್ಯಮಿ ಸಿಬಿಐ ಬೆಂಗಳೂರು ಕಚೇರಿಗೆ ದೂರು ನೀಡಿದ್ದರು’ ಎಂದು ತನಿಖಾ ಸಂಸ್ಥೆಯ ಅಧಿಕಾರಿಗಳು ತಿಳಿಸಿದ್ದಾರೆ.