ಭಾನುವಾರ, 19 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಉಡುಪಿಯಿಂದ ಬೆಂಗಳೂರಿಗೆ ಚೈತ್ರಾ ಕುಂದಾಪುರ ತಂಡವನ್ನು ಕರೆತಂದ ಸಿಸಿಬಿ ಪೊಲೀಸರು

ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆ
Published 13 ಸೆಪ್ಟೆಂಬರ್ 2023, 11:11 IST
Last Updated 13 ಸೆಪ್ಟೆಂಬರ್ 2023, 11:11 IST
ಅಕ್ಷರ ಗಾತ್ರ

ಬೆಂಗಳೂರು: ಉಡುಪಿ ಜಿಲ್ಲೆ ಬೈಂದೂರು ಕ್ಷೇತ್ರಕ್ಕೆ ಎಂಎಲ್‌ಎ ಟಿಕೆಟ್‌ ಕೊಡಿಸುವುದಾಗಿ ಉದ್ಯಮಿ ಗೋವಿಂದ ಪೂಜಾರಿ ಅವರಿಗೆ ವಂಚಿಸಿದ್ದ ಪ್ರಕರಣದಲ್ಲಿ ಬಂಧನಕ್ಕೆ ಒಳಗಾಗಿರುವ ಚೈತ್ರಾ ಕುಂದಾಪುರ ಸೇರಿದಂತೆ ಆರು ಮಂದಿ ಆರೋಪಿಗಳನ್ನು ನಗರಕ್ಕೆ ಬುಧವಾರ ಮಧ್ಯಾಹ್ನ ಕರೆ ತರಲಾಯಿತು.

ಉಡುಪಿ ಕೃಷ್ಣ ಮಠದ ಪಾರ್ಕಿಂಗ್ ಏರಿಯಾದಲ್ಲಿ ಬಂಧಿಸಲಾಗಿತ್ತು. ಸಿಸಿಬಿ ಕಚೇರಿಗೆ ಕರೆತಂದ ಪೊಲೀಸರು ಕೆಲವು ಮಾಹಿತಿ ಪಡೆದುಕೊಂಡು ಕೆಸಿ ಜನರಲ್‌ ಆಸ್ಪತ್ರೆಯಲ್ಲಿ ವೈದ್ಯಕೀಯ ಪರೀಕ್ಷೆಗೆ ಒಳಪಡಿಸಿದರು. 1ನೇ ಎಸಿಎಂಎಂ ನ್ಯಾಯಾಲಯದ ನ್ಯಾಯಾಧೀಶರ ಎದುರು ಚೈತ್ರಾ ಕುಂದಾಪುರ, ಗಗನ್, ಧನರಾಜ್, ಶ್ರೀಕಾಂತ್, ಪ್ರಜ್ವಲ್, ರಮೇಶ್‌ರನ್ನು ಸಿಸಿಬಿ ಪೊಲೀಸರು ಹಾಜರು ಪಡಿಸಲಿದ್ದಾರೆ.

ಎಸಿಪಿ ರೀಣಾ ಸುವರ್ಣ ಅವರ ನೇತೃತ್ವದಲ್ಲಿ ಪ್ರತ್ಯೇಕವಾಗಿ ಆರು ಆರೋಪಿಗಳ ವಿಚಾರಣೆ ನಡೆಸಲಾಗಿದೆ ಎಂದು ಮೂಲಗಳು ಹೇಳಿವೆ. ಹೆಚ್ಚಿನ ವಿಚಾರಣೆಗೆ ಸಿಸಿಬಿ ಪೊಲೀಸರು ಕಸ್ಟಡಿಗೆ ಪಡೆಯುವ ಸಾಧ್ಯತೆಯಿದೆ.

ಧನರಾಜ್

ಧನರಾಜ್

ಶ್ರೀಕಾಂತ್‌

ಶ್ರೀಕಾಂತ್‌

ಗಗನ್

ಗಗನ್

ರಮೇಶ್

ರಮೇಶ್

ಪ್ರಜ್ವಲ್‌

ಪ್ರಜ್ವಲ್‌

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT