‘ಯುವತಿಯು ಭಯಗೊಂಡಿರುವುದು ಮತ್ತು ಆತಂಕದಲ್ಲಿರುವುದು ಅವರ ಹೇಳಿಕೆಯಿಂದ ಸ್ಪಷ್ಟವಾಗುತ್ತಿದೆ. ಅವರಿಗೆ ರಕ್ಷಣೆ ಒದಗಿಸುವುದು ಸರ್ಕಾರದ ಜವಾಬ್ದಾರಿ. ಈ ನಿಟ್ಟಿನಲ್ಲಿ ನಾವು ಸ್ವಯಂಪ್ರೇರಿತ ದೂರು ದಾಖಲಿಸಿಕೊಂಡಿದ್ದೇವೆ. ಗೃಹ ಸಚಿವರು ಮತ್ತು ನಗರ ಪೊಲೀಸ್ ಕಮಿಷನರ್ ಕಮಲ್ ಪಂತ್ ಸೇರಿದಂತೆ ಸಂಬಂಧಪಟ್ಟ ಎಲ್ಲರಿಗೂ ಈ ಬಗ್ಗೆ ಆಯೋಗದಿಂದ ಪತ್ರ ಬರೆಯಲಾಗುವುದು. ಯುವತಿಗೆ ರಕ್ಷಣೆ ಒದಗಿಸಬೇಕು ಎಂದು ಕೋರಲಾಗುವುದು’ ಎಂದು ಆಯೋಗದ ಅಧ್ಯಕ್ಷ ಪ್ರಮೀಳಾ ನಾಯ್ಡು ‘ಪ್ರಜಾವಾಣಿ’ಗೆ ತಿಳಿಸಿದರು.