ತಾಲ್ಲೂಕಿನ ಬೆಳ್ಳೂಡಿಯ ಕನಕ ಗುರುಪೀಠದ ಶಾಖಾ ಮಠದಲ್ಲಿ ಶಾಖಾ ಮಠದ 6ನೇ ವಾರ್ಷಿಕೋತ್ಸವ ಹಾಗೂ ಕನಕ ಜಯಂತಿ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು. ‘ಶ್ರೀ ರೇವಣಸಿದ್ದೇಶ್ವರ ಜಯಂತಿ ಆಚರಿಸಲು ಆಗ್ರಹಿಸಿ ಮುಖ್ಯಮಂತ್ರಿ ಅವರಿಗೆ ಸಚಿವರ ಮೂಲಕ ಮನವಿ ಸಲ್ಲಿಸಿದ್ದೇನೆ. ಏಕೆ ಈ ಆಗ್ರಹ ಎಂದು ಸಮಯ ಬಂದಾಗ ನೀಡುತ್ತೇನೆ. ಈಗ ವಿವಾದ ಮಾಡುವುದು ಬೇಡ’ ಎಂದು ಅವರು ‘ಪ್ರಜಾವಾಣಿ’ಗೆ ಪ್ರತಿಕ್ರಿಯಿಸಿದರು.