<p><strong>ಬೆಂಗಳೂರು</strong>: ಜನಗಣತಿ ಪ್ರಕ್ರಿಯೆಗೆ ಸಿದ್ಧಪಡಿಸಲಾಗಿರುವ ಮೊಬೈಲ್ ಆ್ಯಪ್ ಅನ್ನು ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರೀಕ್ಷಾರ್ಥವಾಗಿ ಬಳಸಲಾಗುತ್ತಿದೆ. </p>.<p>ಬೆಂಗಳೂರು ಉತ್ತರ ನಗರ ಪಾಲಿಕೆಯ ಜೆ.ಪಿ. ಪಾರ್ಕ್ ವಾರ್ಡ್, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ 46 ಹಳ್ಳಿಗಳು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ 27 ಹಳ್ಳಿಗಳಲ್ಲಿ ಜನಗಣತಿ ಪ್ರಕ್ರಿಯೆಗೆ ಮನೆಪಟ್ಟಿ ಸಿದ್ಧಪಡಿಸುವ ಕಾರ್ಯ ಆ್ಯಪ್ನಲ್ಲಿ ನಡೆಯುತ್ತಿದೆ.</p>.<p>ಕೇಂದ್ರ ಸರ್ಕಾರವು 2027ರಲ್ಲಿ ದೇಶವ್ಯಾಪಿ ಜನಗಣತಿ ಕಾರ್ಯಾಚರಣೆ ನಡೆಸಲಿದೆ. ಇದರ ಪೂರ್ವ ತಯಾರಿಗಾಗಿ 2026ರಲ್ಲಿ ಮನೆಪಟ್ಟಿ ಸಿದ್ಧಪಡಿಸುವ ಕಾರ್ಯವನ್ನು ತಂತ್ರಜ್ಞಾನಾಧಾರಿತವಾಗಿ ಪೂರ್ಣಗೊಳಿಸಲು ನಿರ್ಧರಿಸಿದೆ. ಇದಕ್ಕಾಗಿ ಅಭಿವೃದ್ಧಿಪಡಿಸಲಾಗಿರುವ ಮೊಬೈಲ್ ಆ್ಯಪ್ನ ಕಾರ್ಯಕ್ಷಮತೆ ಮತ್ತು ಬಳಕೆಯನ್ನು ಪರಿಶೀಲಿಸಲು, ‘ಪರೀಕ್ಷಾರ್ಥ ಮನೆಪಟ್ಟಿ ತಯಾರಿ ಕಾರ್ಯ’ವನ್ನು ನಡೆಸಲಾಗುತ್ತಿದೆ.</p>.<p>‘ಜೆ.ಪಿ. ಪಾರ್ಕ್ ವಾರ್ಡ್ನಲ್ಲಿ ಮನೆಪಟ್ಟಿ ಮೊಬೈಲ್ ಆ್ಯಪ್ ಪರೀಕ್ಷಾರ್ಥ ಕಾರ್ಯಾಚರಣೆಗೆ 83 ಗಣತಿದಾರರು, 16 ಮೇಲ್ವಿಚಾರಕರು ಹಾಗೂ ವಾರ್ಡ್ ಮಟ್ಟದಲ್ಲಿ ಸಮಗ್ರ ಮೇಲ್ವಿಚಾರಣೆಗೆ ಒಬ್ಬ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ’ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಿಳಿಸಿದರು.</p>.<p>‘ಗಣತಿದಾರರು ತಮಗೆ ಹಂಚಿಕೆಯಾದ ‘ಗಣತಿ ಬ್ಲಾಕ್’ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಜನಗಣತಿ ಪ್ರಧಾನ ನೋಂದಣಿ ಕಚೇರಿಯ ಸಹಾಯಕ ನಿರ್ದೇಶಕರಾದ ಜಿತೇಂದ್ರ ಶರ್ಮಾ, ಆಕಾಶ್ ದೇವ್ರಾ ಅವರು ಜೆ.ಪಿ ಪಾರ್ಕ್ ವಾರ್ಡ್ನಲ್ಲಿ ನಡೆಯುತ್ತಿರುವ ಈ ಪ್ರಕ್ರಿಯೆಯನ್ನು ಮಂಗಳವಾರ ಪರಿಶೀಲಿಸಿದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಜನಗಣತಿ ಪ್ರಕ್ರಿಯೆಗೆ ಸಿದ್ಧಪಡಿಸಲಾಗಿರುವ ಮೊಬೈಲ್ ಆ್ಯಪ್ ಅನ್ನು ರಾಜ್ಯದ ಮೂರು ಜಿಲ್ಲೆಗಳಲ್ಲಿ ಪರೀಕ್ಷಾರ್ಥವಾಗಿ ಬಳಸಲಾಗುತ್ತಿದೆ. </p>.<p>ಬೆಂಗಳೂರು ಉತ್ತರ ನಗರ ಪಾಲಿಕೆಯ ಜೆ.ಪಿ. ಪಾರ್ಕ್ ವಾರ್ಡ್, ಉತ್ತರ ಕನ್ನಡ ಜಿಲ್ಲೆಯ ಜೋಯಿಡಾ ತಾಲ್ಲೂಕಿನ 46 ಹಳ್ಳಿಗಳು, ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ ತಾಲ್ಲೂಕಿನ 27 ಹಳ್ಳಿಗಳಲ್ಲಿ ಜನಗಣತಿ ಪ್ರಕ್ರಿಯೆಗೆ ಮನೆಪಟ್ಟಿ ಸಿದ್ಧಪಡಿಸುವ ಕಾರ್ಯ ಆ್ಯಪ್ನಲ್ಲಿ ನಡೆಯುತ್ತಿದೆ.</p>.<p>ಕೇಂದ್ರ ಸರ್ಕಾರವು 2027ರಲ್ಲಿ ದೇಶವ್ಯಾಪಿ ಜನಗಣತಿ ಕಾರ್ಯಾಚರಣೆ ನಡೆಸಲಿದೆ. ಇದರ ಪೂರ್ವ ತಯಾರಿಗಾಗಿ 2026ರಲ್ಲಿ ಮನೆಪಟ್ಟಿ ಸಿದ್ಧಪಡಿಸುವ ಕಾರ್ಯವನ್ನು ತಂತ್ರಜ್ಞಾನಾಧಾರಿತವಾಗಿ ಪೂರ್ಣಗೊಳಿಸಲು ನಿರ್ಧರಿಸಿದೆ. ಇದಕ್ಕಾಗಿ ಅಭಿವೃದ್ಧಿಪಡಿಸಲಾಗಿರುವ ಮೊಬೈಲ್ ಆ್ಯಪ್ನ ಕಾರ್ಯಕ್ಷಮತೆ ಮತ್ತು ಬಳಕೆಯನ್ನು ಪರಿಶೀಲಿಸಲು, ‘ಪರೀಕ್ಷಾರ್ಥ ಮನೆಪಟ್ಟಿ ತಯಾರಿ ಕಾರ್ಯ’ವನ್ನು ನಡೆಸಲಾಗುತ್ತಿದೆ.</p>.<p>‘ಜೆ.ಪಿ. ಪಾರ್ಕ್ ವಾರ್ಡ್ನಲ್ಲಿ ಮನೆಪಟ್ಟಿ ಮೊಬೈಲ್ ಆ್ಯಪ್ ಪರೀಕ್ಷಾರ್ಥ ಕಾರ್ಯಾಚರಣೆಗೆ 83 ಗಣತಿದಾರರು, 16 ಮೇಲ್ವಿಚಾರಕರು ಹಾಗೂ ವಾರ್ಡ್ ಮಟ್ಟದಲ್ಲಿ ಸಮಗ್ರ ಮೇಲ್ವಿಚಾರಣೆಗೆ ಒಬ್ಬ ಉಸ್ತುವಾರಿ ಅಧಿಕಾರಿಯನ್ನು ನಿಯೋಜಿಸಲಾಗಿದೆ’ ಎಂದು ಬೆಂಗಳೂರು ಉತ್ತರ ನಗರ ಪಾಲಿಕೆಯ ಆಯುಕ್ತ ಪೊಮ್ಮಲ ಸುನೀಲ್ ಕುಮಾರ್ ತಿಳಿಸಿದರು.</p>.<p>‘ಗಣತಿದಾರರು ತಮಗೆ ಹಂಚಿಕೆಯಾದ ‘ಗಣತಿ ಬ್ಲಾಕ್’ಗಳಲ್ಲಿ ಮನೆ ಮನೆಗೆ ಭೇಟಿ ನೀಡಿ ಸಾರ್ವಜನಿಕರಿಂದ ಅಗತ್ಯ ಮಾಹಿತಿಗಳನ್ನು ಪಡೆದುಕೊಳ್ಳುತ್ತಿದ್ದಾರೆ. ಕೇಂದ್ರ ಜನಗಣತಿ ಪ್ರಧಾನ ನೋಂದಣಿ ಕಚೇರಿಯ ಸಹಾಯಕ ನಿರ್ದೇಶಕರಾದ ಜಿತೇಂದ್ರ ಶರ್ಮಾ, ಆಕಾಶ್ ದೇವ್ರಾ ಅವರು ಜೆ.ಪಿ ಪಾರ್ಕ್ ವಾರ್ಡ್ನಲ್ಲಿ ನಡೆಯುತ್ತಿರುವ ಈ ಪ್ರಕ್ರಿಯೆಯನ್ನು ಮಂಗಳವಾರ ಪರಿಶೀಲಿಸಿದರು’ ಎಂದು ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>