ಅನ್ನ ಭಾಗ್ಯ ಗ್ಯಾರಂಟಿಯ ಅನುಷ್ಢಾನಕ್ಕೆ ಅಗತ್ಯವಿರುವ ೫ ಕೆಜಿ ಅಕ್ಕಿ ನೀಡಲು ಕೇಂದ್ರ ಆಹಾರ ಸಚಿವ ಪೀಯೂಷ್ ಗೋಯಲ್ ನಿರಾಕರಿಸಿದ್ದಾರೆ ಎಂದು ಆಹಾರ ಸಚಿವ ಕೆ.ಎಚ್.ಮುನಿಯಪ್ಪ ಆರೋಪಿಸಿದರು. ನವದೆಹಲಿಯಲ್ಲಿ ಶುಕ್ರವಾರ ಕೇಂದ್ರ ಸಚಿವರನ್ನು ಭೇಟಿ ಮಾಡಿದ ಬಳಿಕ ಸುದ್ದಿಗಾರರ ಜತೆಗೆ ಮಾತನಾಡಿದ ಅವರು, ಕೇಂದ್ರ ಸರ್ಕಾರದಲ್ಲಿ ಸಾಕಷ್ಟು ಅಕ್ಕಿ ದಾಸ್ತಾನು ಇದ್ದರೂ ರಾಜಕೀಯ ದುರುದ್ದೇಶದಿಂದ ಸಚಿವರು ನಮ್ಮ ಬೇಡಿಕೆಯನ್ನು ನಿರಾಕರಿಸಿದ್ದಾರೆ ಎಂದರು.