ನವದೆಹಲಿ: ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲ್ಲೂಕಿನ ಹುಲಿ ಸಂರಕ್ಷಿತ ಪ್ರದೇಶದ ಎಮ್ಮೆದೊಡ್ಡಿಯಲ್ಲಿ 14 ಎಕರೆ ಜಾಗವನ್ನು ನಾಲ್ಕು ವ್ಯಕ್ತಿಗಳಿಗೆ ಅಕ್ರಮವಾಗಿ ಮಂಜೂರು ಮಾಡಿರುವ ಹಿಂದಿನ ತಹಶೀಲ್ದಾರ್ ಜೆ. ಉಮೇಶ್ ವಿರುದ್ಧ ಅರಣ್ಯ ಸಂರಕ್ಷಣಾ ಕಾಯ್ದೆಯಡಿ ಪ್ರಕರಣ ದಾಖಲಿಸಬೇಕು ಎಂದು ಅರಣ್ಯ ಇಲಾಖೆಗೆ ಕೇಂದ್ರ ಅರಣ್ಯ, ಪರಿಸರ ಹಾಗೂ ತಾಪಮಾನ ಬದಲಾವಣೆ ಸಚಿವಾಲಯ ನಿರ್ದೇಶನ ನೀಡಿದೆ.