‘ರಾಜ್ಯದಲ್ಲಿ ತೀವ್ರವಾದ ಬರಗಾಲವಿದ್ದು, ತೋರಿಕೆಗಾಗಿ ಬರಪರಿಹಾರಕ್ಕಾಗಿ ಒತ್ತಾಯಿಸುವ ರಾಜ್ಯದ ಬಿಜೆಪಿ ನಾಯಕರು ಮತ್ತು ಆ ಪಕ್ಷದ ಸಂಸದರು, ಕೇಂದ್ರ ಸರ್ಕಾರ ನಿಯಮಾನುಸಾರ ನೀಡಬೇಕಿದ್ದ ಅನುದಾನ ಬಿಡುಗಡೆ ಮಾಡುವಂತೆ ಒತ್ತಾಯಿಸಿಲ್ಲ. ಕಾನೂನಿನ ಪ್ರಕಾರ ಅವಕಾಶವಿರುವ ಹಣವನ್ನೇ ಬಳಸದ ರಾಜ್ಯ ಬಿಜೆಪಿ ಸಂಸದರು ಮತ್ತು ರಾಜ್ಯದಿಂದ ರಾಜ್ಯಸಭೆಗೆ ಆಯ್ಕೆಯಾಗಿ ಕೇಂದ್ರ ಹಣಕಾಸು ಸಚಿವರಾಗಿರುವ ನಿರ್ಮಲ ಸೀತಾರಾಮನ್ ಅವರು ಕರ್ನಾಟಕಕ್ಕೆ ಮೋಸ ಎಸಗಿದ್ದಾರೆ’ ಎಂದರು.