<p><strong>ಬೆಳಗಾವಿ:</strong>'ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸಲ್ಲಿಸಿರುವ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ' ಎಂದು ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>'ರಾಜ್ಯದ ಪ್ರಸ್ತಾವ ಹಾಗೂ ಕೇಂದ್ರ ತಂಡದ ವರದಿ ಹೊಂದಾಣಿಕೆ ಆಗುತ್ತಿಲ್ಲ. ಈ ಕಾರಣಕ್ಕೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ' ಎಂದು ಸಮರ್ಥಿಸಿಕೊಂಡರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/flood-losses-centre-671410.html" target="_blank">ಪ್ರವಾಹ ನಷ್ಟದ ಅಂದಾಜು: ರಾಜ್ಯದ ವರದಿ ತಿರಸ್ಕರಿಸಿದ ಕೇಂದ್ರ</a></p>.<p>'ಸ್ಪಷ್ಟನೆ ಹಾಗೂ ಮಾಹಿತಿ ನೀಡಲೆಂದೇನಮ್ಮ ಇಬ್ಬರು ಅಧಿಕಾರಿಗಳನ್ನು ದೆಹಲಿಗೆ ಕಳಿಸಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ವರದಿಯನ್ನು ತಿರಸ್ಕರಿಸಿದೆ ಎಂಬುದು ಸುಳ್ಳು. ಕೇಂದ್ರದ ಎಲ್ಲ ಸಚಿವರೊಂದಿಗೂ ಮಾತನಾಡಿದ್ದೇನೆ. ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ಪರಿಹಾರ ಹಣ ಬಿಡುಗಡೆ ಆಗಲಿದೆ'ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ದೇಶದ ಯಾವ ಪ್ರವಾಹಪೀಡಿತ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಆಗುವ ವಿಶ್ವಾಸ ಇದೆ' ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/bs-yediyurappa-karnataka-671412.html" target="_blank">ನೆರೆ ಸಂತ್ರಸ್ತರಿಗೆ ಕೇಂದ್ರಸರ್ಕಾರದಿಂದ ಬಿಡುಗಡೆಯಾಗದ ಪರಿಹಾರ: ಅಸಹಾಯಕರಾದ ಸಿ.ಎಂ</a></p>.<p>'ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ. ಖಾಲಿ ಆಗಿದ್ದರೆ ಪ್ರವಾಹ ಪರಿಹಾರಕ್ಕೆ ಇಷ್ಟೊಂದು ಹಣ ನೀಡಲು ಆಗುತ್ತಿರಲಿಲ್ಲ. ಮುಂದಿನ ಬಜೆಟ್ ನಲ್ಲಿ ಸಂತ್ರಸ್ತರ ಪುನರ್ವಸತಿಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong>'ಪ್ರವಾಹ ಪರಿಹಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರದಿಂದ ಸಲ್ಲಿಸಿರುವ ವರದಿಯನ್ನು ಕೇಂದ್ರ ಸರ್ಕಾರ ತಿರಸ್ಕರಿಸಿಲ್ಲ' ಎಂದು ಮುಖ್ಯಮಂತ್ರಿಬಿ.ಎಸ್. ಯಡಿಯೂರಪ್ಪ ತಿಳಿಸಿದರು.</p>.<p>'ರಾಜ್ಯದ ಪ್ರಸ್ತಾವ ಹಾಗೂ ಕೇಂದ್ರ ತಂಡದ ವರದಿ ಹೊಂದಾಣಿಕೆ ಆಗುತ್ತಿಲ್ಲ. ಈ ಕಾರಣಕ್ಕೆ ಪರಿಶೀಲಿಸಬೇಕಿದೆ ಎಂದು ಕೇಂದ್ರ ಸರ್ಕಾರ ಹೇಳಿದೆ' ಎಂದು ಸಮರ್ಥಿಸಿಕೊಂಡರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/flood-losses-centre-671410.html" target="_blank">ಪ್ರವಾಹ ನಷ್ಟದ ಅಂದಾಜು: ರಾಜ್ಯದ ವರದಿ ತಿರಸ್ಕರಿಸಿದ ಕೇಂದ್ರ</a></p>.<p>'ಸ್ಪಷ್ಟನೆ ಹಾಗೂ ಮಾಹಿತಿ ನೀಡಲೆಂದೇನಮ್ಮ ಇಬ್ಬರು ಅಧಿಕಾರಿಗಳನ್ನು ದೆಹಲಿಗೆ ಕಳಿಸಲಾಗಿದೆ. ಕೇಂದ್ರ ಸರ್ಕಾರ ರಾಜ್ಯದ ವರದಿಯನ್ನು ತಿರಸ್ಕರಿಸಿದೆ ಎಂಬುದು ಸುಳ್ಳು. ಕೇಂದ್ರದ ಎಲ್ಲ ಸಚಿವರೊಂದಿಗೂ ಮಾತನಾಡಿದ್ದೇನೆ. ಮೂರ್ನಾಲ್ಕು ದಿನಗಳಲ್ಲಿ ರಾಜ್ಯ ಸರ್ಕಾರಕ್ಕೆ ಕೇಂದ್ರದ ಪರಿಹಾರ ಹಣ ಬಿಡುಗಡೆ ಆಗಲಿದೆ'ಎಂದು ವಿಶ್ವಾಸ ವ್ಯಕ್ತಪಡಿಸಿದರು.</p>.<p>'ದೇಶದ ಯಾವ ಪ್ರವಾಹಪೀಡಿತ ರಾಜ್ಯಗಳಿಗೂ ಕೇಂದ್ರದಿಂದ ಪರಿಹಾರ ಬಿಡುಗಡೆಯಾಗಿಲ್ಲ. ರಾಜ್ಯಕ್ಕೆ ಕೇಂದ್ರದಿಂದ ಹೆಚ್ಚಿನ ಪ್ರಮಾಣದಲ್ಲಿ ಪರಿಹಾರ ಬಿಡುಗಡೆ ಆಗುವ ವಿಶ್ವಾಸ ಇದೆ' ಎಂದರು.</p>.<p><strong>ಇದನ್ನೂ ಓದಿ:</strong><a href="https://www.prajavani.net/stories/stateregional/bs-yediyurappa-karnataka-671412.html" target="_blank">ನೆರೆ ಸಂತ್ರಸ್ತರಿಗೆ ಕೇಂದ್ರಸರ್ಕಾರದಿಂದ ಬಿಡುಗಡೆಯಾಗದ ಪರಿಹಾರ: ಅಸಹಾಯಕರಾದ ಸಿ.ಎಂ</a></p>.<p>'ರಾಜ್ಯ ಸರ್ಕಾರದ ಬೊಕ್ಕಸ ಖಾಲಿ ಆಗಿಲ್ಲ. ಖಾಲಿ ಆಗಿದ್ದರೆ ಪ್ರವಾಹ ಪರಿಹಾರಕ್ಕೆ ಇಷ್ಟೊಂದು ಹಣ ನೀಡಲು ಆಗುತ್ತಿರಲಿಲ್ಲ. ಮುಂದಿನ ಬಜೆಟ್ ನಲ್ಲಿ ಸಂತ್ರಸ್ತರ ಪುನರ್ವಸತಿಗೆ ಹೆಚ್ಚಿನ ಹಣ ಮೀಸಲಿಡುತ್ತೇವೆ' ಎಂದು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>