<p><strong>ಬೆಳಗಾವಿ:</strong> 'ರಾಜ್ಯ ಸರ್ಕಾರದಿಂದ ಪಾವತಿಸಬೇಕಿರುವ ಅನುದಾನ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ತೊಡಕಾಗಿದೆ. ಬೆಳಗಾವಿ-ಚನ್ನಮ್ಮನ ಕಿತ್ತೂರು-ಧಾರವಾಡ ನಡುವಿನ ನೇರ ರೈಲ್ವೆ ಮಾರ್ಗದ ಯೋಜನಾ ವೆಚ್ಚ ಹೆಚ್ಚಾಗಬಹುದು' ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p><p>ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬೆಳಗಾವಿ-ಚನ್ನಮ್ಮನ ಕಿತ್ತೂರು-ಧಾರವಾಡ ನೇರ ರೈಲ್ವೆ ಮಾರ್ಗ ನಿರ್ಮಾಣಕ್ಕೆ 2019ರಲ್ಲೇ ಕೇಂದ್ರವು ₹927 ಕೋಟಿ ಅನುದಾನ ಮಂಜೂರುಗೊಳಿಸಿದೆ. ಆದರೆ, ಯೋಜನೆಗೆ ಬೆಳಗಾವಿ ಜಿಲ್ಲೆಯಲ್ಲಿ ಸ್ವಾಧೀನ ಪಡಿಸಿಕೊಂಡ 406 ಎಕರೆ ಭೂಮಿ, ಧಾರವಾಡ ಜಿಲ್ಲೆಯಲ್ಲಿ ಸ್ವಾಧೀನ ಪಡಿಸಿಕೊಂಡ 382 ಎಕರೆ ಭೂಮಿಗೆ ₹243 ಕೋಟಿ ಪರಿಹಾರ ಕೋರಿ ಪ್ರಸ್ತಾವ ಸಲ್ಲಿಸಿದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಹಾಗಾಗಿ ಏಳು ವರ್ಷಗಳಿಂದ ಯೋಜನೆಯು ಅನುಷ್ಠಾನ ಹಂತದಲ್ಲೇ ಉಳಿದಿದೆ' ಎಂದು ದೂರಿದರು.</p><p>'ಸ್ಮಾರ್ಟ್ ಸಿಟಿ ಮಿಷನ್ 2 ಅಡಿ ಕೇಂದ್ರವು ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ₹135 ಕೋಟಿ ಬಿಡುಗಡೆ ಮಾಡಿದೆ. ಆದರೆ, ಕೆಲಸಗಳು ಇನ್ನೂ ಆರಂಭವಾಗಿಲ್ಲ' ಎಂದು ದೂರಿದರು.</p><p>ಬೆಳಗಾವಿ ತಾಲ್ಲೂಕಿನ ಹಲಗಾದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸಲು 19 ಎಕರೆ, 9 ಗುಂಟೆ ಭೂಮಿ ಸ್ವಾಧೀನ ಪಡಿಸಿಕೊಂಡು ಕಾಮಗಾರಿ ಮಾಡಲಾಗಿದೆ. ಯೋಜನೆಗೆ ಭೂಮಿ ನೀಡಿದವರಿಗೆ ಹೆಚ್ಚುವರಿಯಾಗಿ ₹21.40 ಕೋಟಿ ಪರಿಹಾರ ನೀಡುವುದಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕೊಟ್ಟಿದೆ. ಆದರೆ, ಈವರೆಗೆ ರಾಜ್ಯ ಸರ್ಕಾರ ಪರಿಹಾರ ಕೊಡದ್ದರಿಂದ ಯೋಜನೆ ತೆವಳುತ್ತ ಸಾಗಿದೆ' ಎಂದು ಆರೋಪಿಸಿದರು. </p><p>'ಅಮೃತ-2 ಯೋಜನೆಯಡಿ ಕೇಂದ್ರವು ಕೆರೆಗಳ ಪುನರುಜ್ಜೀವನಕ್ಕಾಗಿ ₹29 ಕೋಟಿ ಮತ್ತು ಉದ್ಯಾನಗಳ ಅಭಿವೃದ್ಧಿಗೆ ₹39.45 ಕೋಟಿ ಬಿಡುಗಡೆ ಮಾಡಿದೆ. ಆದರೆ, ಹಣ ಬಳಸಲಾಗಿಲ್ಲ. ಅದನ್ನು ಬಳಸದಿದ್ದರೆ ಕೇಂದ್ರ ಹಣ ಹಿಂಪಡೆಯಬಹುದು' ಎಂದು ಹೇಳಿದರು.</p><p>'ಕೇಂದ್ರದ ವಿವಿಧ ಯೋಜನೆಗಳಡಿ ಯಲ್ಲಮ್ಮನಗುಡ್ಡ ಅಭಿವೃದ್ಧಿಗೆ ₹215 ಕೋಟಿ ಬಿಡುಗಡೆ ಆಗಿದೆ. ಆದರೆ, ಈವರೆಗೆೆ ಕಾಮಗಾರಿ ಅನುಷ್ಠಾನಕ್ಕೆ ಬಂದಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.ಅಧಿಕಾರದ ಕಿತ್ತಾಟದಿಂದ ಮೃತದೇಹದಂತಾದ ರಾಜ್ಯ ಸರ್ಕಾರ: ಸಂಸದ ಜಗದೀಶ ಶೆಟ್ಟರ್ ಲೇವಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ:</strong> 'ರಾಜ್ಯ ಸರ್ಕಾರದಿಂದ ಪಾವತಿಸಬೇಕಿರುವ ಅನುದಾನ ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ಕೇಂದ್ರದ ವಿವಿಧ ಯೋಜನೆಗಳ ಅನುಷ್ಠಾನಕ್ಕೆ ತೊಡಕಾಗಿದೆ. ಬೆಳಗಾವಿ-ಚನ್ನಮ್ಮನ ಕಿತ್ತೂರು-ಧಾರವಾಡ ನಡುವಿನ ನೇರ ರೈಲ್ವೆ ಮಾರ್ಗದ ಯೋಜನಾ ವೆಚ್ಚ ಹೆಚ್ಚಾಗಬಹುದು' ಎಂದು ಸಂಸದ ಜಗದೀಶ ಶೆಟ್ಟರ್ ಹೇಳಿದರು.</p><p>ಇಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, 'ಬೆಳಗಾವಿ-ಚನ್ನಮ್ಮನ ಕಿತ್ತೂರು-ಧಾರವಾಡ ನೇರ ರೈಲ್ವೆ ಮಾರ್ಗ ನಿರ್ಮಾಣಕ್ಕೆ 2019ರಲ್ಲೇ ಕೇಂದ್ರವು ₹927 ಕೋಟಿ ಅನುದಾನ ಮಂಜೂರುಗೊಳಿಸಿದೆ. ಆದರೆ, ಯೋಜನೆಗೆ ಬೆಳಗಾವಿ ಜಿಲ್ಲೆಯಲ್ಲಿ ಸ್ವಾಧೀನ ಪಡಿಸಿಕೊಂಡ 406 ಎಕರೆ ಭೂಮಿ, ಧಾರವಾಡ ಜಿಲ್ಲೆಯಲ್ಲಿ ಸ್ವಾಧೀನ ಪಡಿಸಿಕೊಂಡ 382 ಎಕರೆ ಭೂಮಿಗೆ ₹243 ಕೋಟಿ ಪರಿಹಾರ ಕೋರಿ ಪ್ರಸ್ತಾವ ಸಲ್ಲಿಸಿದರೂ ರಾಜ್ಯ ಸರ್ಕಾರ ಹಣ ಬಿಡುಗಡೆ ಮಾಡಿಲ್ಲ. ಹಾಗಾಗಿ ಏಳು ವರ್ಷಗಳಿಂದ ಯೋಜನೆಯು ಅನುಷ್ಠಾನ ಹಂತದಲ್ಲೇ ಉಳಿದಿದೆ' ಎಂದು ದೂರಿದರು.</p><p>'ಸ್ಮಾರ್ಟ್ ಸಿಟಿ ಮಿಷನ್ 2 ಅಡಿ ಕೇಂದ್ರವು ಘನತ್ಯಾಜ್ಯ ನಿರ್ವಹಣಾ ಘಟಕಕ್ಕೆ ₹135 ಕೋಟಿ ಬಿಡುಗಡೆ ಮಾಡಿದೆ. ಆದರೆ, ಕೆಲಸಗಳು ಇನ್ನೂ ಆರಂಭವಾಗಿಲ್ಲ' ಎಂದು ದೂರಿದರು.</p><p>ಬೆಳಗಾವಿ ತಾಲ್ಲೂಕಿನ ಹಲಗಾದಲ್ಲಿ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಸ್ಥಾಪಿಸಲು 19 ಎಕರೆ, 9 ಗುಂಟೆ ಭೂಮಿ ಸ್ವಾಧೀನ ಪಡಿಸಿಕೊಂಡು ಕಾಮಗಾರಿ ಮಾಡಲಾಗಿದೆ. ಯೋಜನೆಗೆ ಭೂಮಿ ನೀಡಿದವರಿಗೆ ಹೆಚ್ಚುವರಿಯಾಗಿ ₹21.40 ಕೋಟಿ ಪರಿಹಾರ ನೀಡುವುದಕ್ಕೆ ಸಂಪುಟ ಸಭೆಯಲ್ಲಿ ಅನುಮೋದನೆ ಕೊಟ್ಟಿದೆ. ಆದರೆ, ಈವರೆಗೆ ರಾಜ್ಯ ಸರ್ಕಾರ ಪರಿಹಾರ ಕೊಡದ್ದರಿಂದ ಯೋಜನೆ ತೆವಳುತ್ತ ಸಾಗಿದೆ' ಎಂದು ಆರೋಪಿಸಿದರು. </p><p>'ಅಮೃತ-2 ಯೋಜನೆಯಡಿ ಕೇಂದ್ರವು ಕೆರೆಗಳ ಪುನರುಜ್ಜೀವನಕ್ಕಾಗಿ ₹29 ಕೋಟಿ ಮತ್ತು ಉದ್ಯಾನಗಳ ಅಭಿವೃದ್ಧಿಗೆ ₹39.45 ಕೋಟಿ ಬಿಡುಗಡೆ ಮಾಡಿದೆ. ಆದರೆ, ಹಣ ಬಳಸಲಾಗಿಲ್ಲ. ಅದನ್ನು ಬಳಸದಿದ್ದರೆ ಕೇಂದ್ರ ಹಣ ಹಿಂಪಡೆಯಬಹುದು' ಎಂದು ಹೇಳಿದರು.</p><p>'ಕೇಂದ್ರದ ವಿವಿಧ ಯೋಜನೆಗಳಡಿ ಯಲ್ಲಮ್ಮನಗುಡ್ಡ ಅಭಿವೃದ್ಧಿಗೆ ₹215 ಕೋಟಿ ಬಿಡುಗಡೆ ಆಗಿದೆ. ಆದರೆ, ಈವರೆಗೆೆ ಕಾಮಗಾರಿ ಅನುಷ್ಠಾನಕ್ಕೆ ಬಂದಿಲ್ಲ' ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.ಅಧಿಕಾರದ ಕಿತ್ತಾಟದಿಂದ ಮೃತದೇಹದಂತಾದ ರಾಜ್ಯ ಸರ್ಕಾರ: ಸಂಸದ ಜಗದೀಶ ಶೆಟ್ಟರ್ ಲೇವಡಿ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>