<p><strong>ಕಲಬುರ್ಗಿ: </strong>‘ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಉತ್ಸಾಹದಿಂದ ಕಾರ್ಯೋನ್ಮುಖವಾಗಿರುವ ಕೇಂದ್ರ ಸರ್ಕಾರವು ಭಾರತದ ಬಹುಭಾಷಿಕ ಸೊಗಡನ್ನು ಗೌರವಿಸಲಿ. ಆ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಿ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ನಗರದಲ್ಲಿ ಭಾನುವಾರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಕನ್ನಡದಲ್ಲಿಬರೆದು ಉತ್ತಮ ಅಂಕ ಗಳಿಸಿದ ಕಲಬುರ್ಗಿ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು ಏಕರೂಪ ಶಿಕ್ಷಣದ ವರದಿಯನ್ನು ಪ್ರಕಟಿಸಿದ್ದು, ಅದಕ್ಕೆ ಜುಲೈ 31ರೊಳಗೆ ಪ್ರತಿಕ್ರಿಯೆ ನೀಡಲು ಸೂಚಿಸಿದೆ. ಕೇಂದ್ರ ಸರ್ಕಾರವು ಸ್ಥಳೀಯ ಭಾಷೆಯಲ್ಲಿಯೂ ಶಿಕ್ಷಣ ನೀಡುವ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಹಾಗಾಗಿ, ಪ್ರತಿಕ್ರಿಯೆ ನೀಡಲು ಕೊಟ್ಟ ಗಡುವನ್ನು ಇನ್ನಷ್ಟು ವಿಸ್ತರಿಸಬೇಕು’ ಎಂದರು.</p>.<p>‘ವಲಸೆ ಸ್ವಾಗತಾರ್ಹ. ಆದರೆ, ಅದು ಅತಿಕ್ರಮಣವಾಗಬಾರದು. ಕೊಡು–ಕೊಳ್ಳುವಿಕೆಯ ಸೌಹಾರ್ದದಂತೆ ಇದು ನಡೆಯಬೇಕು’ ಎಂದರು.‘ರಾಷ್ಟ್ರಮಟ್ಟದ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡುವ ಮೂಲಕ ಪ್ರಾದೇಶಿಕ ಭಾಷೆ ಮಾತನಾಡುವವರ ಬಗ್ಗೆ ಸಹಾನುಭೂತಿ ತೋರಬೇಕು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಕಲಬುರ್ಗಿ: </strong>‘ಏಕರೂಪದ ಶಿಕ್ಷಣ ವ್ಯವಸ್ಥೆ ಜಾರಿಗೊಳಿಸುವ ನಿಟ್ಟಿನಲ್ಲಿ ಉತ್ಸಾಹದಿಂದ ಕಾರ್ಯೋನ್ಮುಖವಾಗಿರುವ ಕೇಂದ್ರ ಸರ್ಕಾರವು ಭಾರತದ ಬಹುಭಾಷಿಕ ಸೊಗಡನ್ನು ಗೌರವಿಸಲಿ. ಆ ನಿಟ್ಟಿನಲ್ಲಿ ಕ್ರಮಗಳನ್ನು ಕೈಗೊಳ್ಳಲಿ’ ಎಂದು ಕನ್ನಡ ಅಭಿವೃದ್ಧಿ ಪ್ರಾಧಿಕಾರದ ಅಧ್ಯಕ್ಷ ಪ್ರೊ.ಎಸ್.ಜಿ.ಸಿದ್ದರಾಮಯ್ಯ ಆಗ್ರಹಿಸಿದರು.</p>.<p>ನಗರದಲ್ಲಿ ಭಾನುವಾರ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆ ಕನ್ನಡದಲ್ಲಿಬರೆದು ಉತ್ತಮ ಅಂಕ ಗಳಿಸಿದ ಕಲಬುರ್ಗಿ ವಿಭಾಗದ ವಿದ್ಯಾರ್ಥಿಗಳಿಗೆ ಕನ್ನಡ ಭಾಷಾ ಮಾಧ್ಯಮ ಪ್ರಶಸ್ತಿ ವಿತರಿಸಿ ಅವರು ಮಾತನಾಡಿದರು.</p>.<p>‘ಕೇಂದ್ರ ಸರ್ಕಾರವು ಏಕರೂಪ ಶಿಕ್ಷಣದ ವರದಿಯನ್ನು ಪ್ರಕಟಿಸಿದ್ದು, ಅದಕ್ಕೆ ಜುಲೈ 31ರೊಳಗೆ ಪ್ರತಿಕ್ರಿಯೆ ನೀಡಲು ಸೂಚಿಸಿದೆ. ಕೇಂದ್ರ ಸರ್ಕಾರವು ಸ್ಥಳೀಯ ಭಾಷೆಯಲ್ಲಿಯೂ ಶಿಕ್ಷಣ ನೀಡುವ ಬೇಡಿಕೆ ಬಗ್ಗೆ ಸಕಾರಾತ್ಮಕವಾಗಿ ಸ್ಪಂದಿಸಬೇಕು. ಹಾಗಾಗಿ, ಪ್ರತಿಕ್ರಿಯೆ ನೀಡಲು ಕೊಟ್ಟ ಗಡುವನ್ನು ಇನ್ನಷ್ಟು ವಿಸ್ತರಿಸಬೇಕು’ ಎಂದರು.</p>.<p>‘ವಲಸೆ ಸ್ವಾಗತಾರ್ಹ. ಆದರೆ, ಅದು ಅತಿಕ್ರಮಣವಾಗಬಾರದು. ಕೊಡು–ಕೊಳ್ಳುವಿಕೆಯ ಸೌಹಾರ್ದದಂತೆ ಇದು ನಡೆಯಬೇಕು’ ಎಂದರು.‘ರಾಷ್ಟ್ರಮಟ್ಟದ ಪರೀಕ್ಷೆಗಳನ್ನು ಕನ್ನಡ ಭಾಷೆಯಲ್ಲಿಯೂ ಬರೆಯಲು ಕೇಂದ್ರ ಸರ್ಕಾರ ಅವಕಾಶ ನೀಡುವ ಮೂಲಕ ಪ್ರಾದೇಶಿಕ ಭಾಷೆ ಮಾತನಾಡುವವರ ಬಗ್ಗೆ ಸಹಾನುಭೂತಿ ತೋರಬೇಕು’ ಎಂದು ಅವರು ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>