<p><strong>ಬೆಂಗಳೂರು: </strong>ಕಳೆದ ನಾಲ್ಕು ತಿಂಗಳಲ್ಲಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಆಗಿರುವ ಹಾನಿಯನ್ನು ಅಧ್ಯಯನ ಮಾಡಲು ಕೇಂದ್ರದ ತಂಡ ಮಂಗಳವಾರ ರಾಜ್ಯಕ್ಕೆ ಬರಲಿದೆ.</p>.<p>ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ಅವರ ನೇತೃತ್ವದ ಮೂರು ತಂಡಗಳು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ ಅವರ ಜತೆ ಚರ್ಚೆ ನಡೆಸಿದ ನಂತರ ಸೆ. 9 ರವರೆಗೆ ವಿವಿಧ ಜಿಲ್ಲೆಗಳ ಮಳೆ–ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.</p>.<p>ಕೇಂದ್ರ ಜಲ ಆಯೋಗದ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಮತ್ತು ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಕೆ.ಮನೋಹರನ್ ಅವರು ಇನ್ನೆರಡು ತಂಡಗಳಲ್ಲಿ ಇರಲಿದ್ದಾರೆ. ಚಿತ್ರ<br />ದುರ್ಗ, ಚಿಕ್ಕ ಮಗಳೂರು, ಹಾಸನ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ತಂಡಗಳು ನೀಡಲಿವೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕಳೆದ ನಾಲ್ಕು ತಿಂಗಳಲ್ಲಿ ಮಳೆ, ಪ್ರವಾಹ ಮತ್ತು ಭೂಕುಸಿತದಿಂದ ಆಗಿರುವ ಹಾನಿಯನ್ನು ಅಧ್ಯಯನ ಮಾಡಲು ಕೇಂದ್ರದ ತಂಡ ಮಂಗಳವಾರ ರಾಜ್ಯಕ್ಕೆ ಬರಲಿದೆ.</p>.<p>ಕೇಂದ್ರ ಗೃಹ ಇಲಾಖೆ ಜಂಟಿ ಕಾರ್ಯದರ್ಶಿ ಆಶಿಶ್ ಕುಮಾರ್ ಅವರ ನೇತೃತ್ವದ ಮೂರು ತಂಡಗಳು ಬುಧವಾರ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಮತ್ತು ಕಂದಾಯ ಸಚಿವ ಆರ್. ಅಶೋಕ ಅವರ ಜತೆ ಚರ್ಚೆ ನಡೆಸಿದ ನಂತರ ಸೆ. 9 ರವರೆಗೆ ವಿವಿಧ ಜಿಲ್ಲೆಗಳ ಮಳೆ–ಪ್ರವಾಹ ಬಾಧಿತ ಪ್ರದೇಶಗಳಿಗೆ ಭೇಟಿ ನೀಡಲಿವೆ.</p>.<p>ಕೇಂದ್ರ ಜಲ ಆಯೋಗದ ಹಿರಿಯ ಅಧಿಕಾರಿ ಅಶೋಕ್ ಕುಮಾರ್ ಮತ್ತು ಕೃಷಿ ಹಾಗೂ ರೈತರ ಕಲ್ಯಾಣ ಇಲಾಖೆ ನಿರ್ದೇಶಕ ಡಾ.ಕೆ.ಮನೋಹರನ್ ಅವರು ಇನ್ನೆರಡು ತಂಡಗಳಲ್ಲಿ ಇರಲಿದ್ದಾರೆ. ಚಿತ್ರ<br />ದುರ್ಗ, ಚಿಕ್ಕ ಮಗಳೂರು, ಹಾಸನ, ಧಾರವಾಡ, ಗದಗ, ಹಾವೇರಿ, ಬೀದರ್, ಕಲಬುರಗಿ ಮತ್ತು ಯಾದಗಿರಿ ಜಿಲ್ಲೆಗಳಿಗೆ ತಂಡಗಳು ನೀಡಲಿವೆ ಎಂದು ಕಂದಾಯ ಸಚಿವ ಆರ್.ಅಶೋಕ ಹೇಳಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>