<p><strong>ಬೆಂಗಳೂರು:</strong> ಕಾರ್ಮಿಕರ ಕೌಶಲ ಅಭಿವೃದ್ಧಿಗಾಗಿ ಧಾರವಾಡ ಹಾಗೂ ಮೈಸೂರಿನ ಭಾಗದಲ್ಲಿ ‘ಸೆಂಟರ್ ಫಾರ್ ಎಕ್ಸಲೆನ್ಸ್’ ಆರಂಭಿಸಿ, ಸುಮಾರು ಏಳು ಸಾವಿರ ಜನರಿಗೆ ತರಬೇತಿ ನೀಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಎನ್. ರವಿಕುಮಾರ್, ಕೆ.ಎಸ್. ನವೀನ್, ಡಿ.ಎಸ್. ಅರುಣ್ ಅವರು ನಿಯಮ 330ರಡಿ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ₹750 ಕೋಟಿ ವೆಚ್ಚದಲ್ಲಿ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸುವ ಬದಲು ಕಾರ್ಮಿಕರಿಗೆ ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಆಗ್ರಹಿಸಿದರು.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಲಾಡ್, ‘ಆಟೊಮೊಬೈಲ್, ಕಟ್ಟಡ ನಿರ್ಮಾಣ, ಎಲೆಕ್ಟ್ರಿಕಲ್ ಸೇರಿದಂತೆ 28 ರೀತಿಯ ತರಬೇತಿಗಳನ್ನು ಕೈಗಾರಿಕೆ ಅಗತ್ಯವಾಗಿರುವ ಕೌಶಲಗಳನ್ನು ಆ ಕ್ಷೇತ್ರದ ತಜ್ಞರೇ ‘ಸೆಂಟರ್ ಫಾರ್ ಎಕ್ಸಲೆನ್ಸ್’ನಲ್ಲಿ ನೀಡುತ್ತಾರೆ. ನೋಡಲ್ ಏಜೆನ್ಸಿಯನ್ನು ಸ್ಥಾಪಿಸಿ ಅತ್ಯುತ್ತಮ ಕೌಶಲ ಒದಗಿಸಲಾಗುತ್ತದೆ’ ಎಂದರು.</p>.<p>‘ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕವಾಗಿ ಶ್ರಮಿಕ ವಸತಿ ಶಾಲೆ ನಿರ್ಮಿಸುವುದರಿಂದ ಅವರನ್ನು ಪ್ರತ್ಯೇಕಗೊಳಿಸಿದರೆ ಅವರಿಗೆ ಕೀಳರಿಮೆ ಬರುವಂತಾಗುತ್ತದೆ’ ಎಂದು ಬಿಜೆಪಿಯ ಸಿ.ಟಿ. ರವಿ ಹೇಳಿದರು.</p>.<p>‘ಕೇಂದ್ರ ಸರ್ಕಾರದ ಕಾಯ್ದೆಯಂತೆ ಕಾರ್ಮಿಕರ ಕಲ್ಯಾಣಕ್ಕೆ ಮಾತ್ರ ಈ ನಿಧಿಯನ್ನು ಬಳಸಬೇಕು. ಬೇರೆ ಇಲಾಖೆಗಳಿಗೆ ವರ್ಗಾಯಿಸುವಂತಿಲ್ಲ. ಅದಕ್ಕಾಗಿ ವಸತಿ ಶಾಲೆ ನಿರ್ಮಿಸಲಾಗುತ್ತಿದೆ’ ಎಂದು ಸಂತೋಷ್ ಲಾಡ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕಾರ್ಮಿಕರ ಕೌಶಲ ಅಭಿವೃದ್ಧಿಗಾಗಿ ಧಾರವಾಡ ಹಾಗೂ ಮೈಸೂರಿನ ಭಾಗದಲ್ಲಿ ‘ಸೆಂಟರ್ ಫಾರ್ ಎಕ್ಸಲೆನ್ಸ್’ ಆರಂಭಿಸಿ, ಸುಮಾರು ಏಳು ಸಾವಿರ ಜನರಿಗೆ ತರಬೇತಿ ನೀಡಲಾಗುತ್ತದೆ ಎಂದು ಕಾರ್ಮಿಕ ಸಚಿವ ಸಂತೋಷ್ ಲಾಡ್ ತಿಳಿಸಿದರು.</p>.<p>ವಿಧಾನ ಪರಿಷತ್ನಲ್ಲಿ ಬಿಜೆಪಿಯ ಎನ್. ರವಿಕುಮಾರ್, ಕೆ.ಎಸ್. ನವೀನ್, ಡಿ.ಎಸ್. ಅರುಣ್ ಅವರು ನಿಯಮ 330ರಡಿ ಮಾತನಾಡಿ, ಕಾರ್ಮಿಕ ಇಲಾಖೆಯಿಂದ ₹750 ಕೋಟಿ ವೆಚ್ಚದಲ್ಲಿ 31 ಜಿಲ್ಲೆಗಳಲ್ಲಿ ಶ್ರಮಿಕ ವಸತಿ ಶಾಲೆಗಳನ್ನು ಆರಂಭಿಸುವ ಬದಲು ಕಾರ್ಮಿಕರಿಗೆ ಕೌಶಲ ಅಭಿವೃದ್ಧಿ ಕಾರ್ಯಕ್ರಮಗಳನ್ನು ಕೈಗೊಳ್ಳಿ ಎಂದು ಆಗ್ರಹಿಸಿದರು.</p>.<p>ಅದಕ್ಕೆ ಪ್ರತಿಕ್ರಿಯಿಸಿದ ಲಾಡ್, ‘ಆಟೊಮೊಬೈಲ್, ಕಟ್ಟಡ ನಿರ್ಮಾಣ, ಎಲೆಕ್ಟ್ರಿಕಲ್ ಸೇರಿದಂತೆ 28 ರೀತಿಯ ತರಬೇತಿಗಳನ್ನು ಕೈಗಾರಿಕೆ ಅಗತ್ಯವಾಗಿರುವ ಕೌಶಲಗಳನ್ನು ಆ ಕ್ಷೇತ್ರದ ತಜ್ಞರೇ ‘ಸೆಂಟರ್ ಫಾರ್ ಎಕ್ಸಲೆನ್ಸ್’ನಲ್ಲಿ ನೀಡುತ್ತಾರೆ. ನೋಡಲ್ ಏಜೆನ್ಸಿಯನ್ನು ಸ್ಥಾಪಿಸಿ ಅತ್ಯುತ್ತಮ ಕೌಶಲ ಒದಗಿಸಲಾಗುತ್ತದೆ’ ಎಂದರು.</p>.<p>‘ಕಾರ್ಮಿಕರ ಮಕ್ಕಳಿಗೆ ಪ್ರತ್ಯೇಕವಾಗಿ ಶ್ರಮಿಕ ವಸತಿ ಶಾಲೆ ನಿರ್ಮಿಸುವುದರಿಂದ ಅವರನ್ನು ಪ್ರತ್ಯೇಕಗೊಳಿಸಿದರೆ ಅವರಿಗೆ ಕೀಳರಿಮೆ ಬರುವಂತಾಗುತ್ತದೆ’ ಎಂದು ಬಿಜೆಪಿಯ ಸಿ.ಟಿ. ರವಿ ಹೇಳಿದರು.</p>.<p>‘ಕೇಂದ್ರ ಸರ್ಕಾರದ ಕಾಯ್ದೆಯಂತೆ ಕಾರ್ಮಿಕರ ಕಲ್ಯಾಣಕ್ಕೆ ಮಾತ್ರ ಈ ನಿಧಿಯನ್ನು ಬಳಸಬೇಕು. ಬೇರೆ ಇಲಾಖೆಗಳಿಗೆ ವರ್ಗಾಯಿಸುವಂತಿಲ್ಲ. ಅದಕ್ಕಾಗಿ ವಸತಿ ಶಾಲೆ ನಿರ್ಮಿಸಲಾಗುತ್ತಿದೆ’ ಎಂದು ಸಂತೋಷ್ ಲಾಡ್ ಉತ್ತರಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>