ತಾರತಮ್ಯ ವಿಚಾರವಾಗಿ ಪ್ರತಿಕ್ರಿಯಿಸಿದ ಅಶೋಕ, ‘ರಾಜ್ಯಕ್ಕೆ ಬೆಂಗಳೂರಿನಿಂದ ಶೇ 65 ತೆರಿಗೆ ಬರುತ್ತದೆ. ಆದರೆ, ಬೆಂಗಳೂರಿಗೆ ಸರ್ಕಾರದಿಂದ ಶೇ 5ರಷ್ಟು ಅನುದಾನವೂ ಸಿಗುತ್ತಿಲ್ಲ. ಯಾವ ಜಿಲ್ಲೆಯಿಂದ ಎಷ್ಟು ಬರುತ್ತದೆಯೊ, ಅಷ್ಟು ಅನುದಾನ ಕೊಡಲು ಸಾಧ್ಯವೇ? ಎಲ್ಲಿ ಜನ ಕಷ್ಟದಲ್ಲಿದ್ದಾರೆ, ಎಲ್ಲಿ ಅಭಿವೃದ್ದಿ ಆಗಿಲ್ಲವೋ ಅಲ್ಲಿಗೆ ನೆರವಾಗಬೇಕು ಎಂಬುದು ಸಂವಿಧಾನದ ಆಶಯ. ಯಾವ ಮಕ್ಕಳು ಎಷ್ಟು ಸಂಪಾದನೆ ಮಾಡುತ್ತಾರೆ ಎಂಬುದರ ಮೇಲೆ ತಾಯಿ ಊಟ ನೀಡಲ್ಲ. ಮುಖ್ಯಮಂತ್ರಿಗೆ ಈ ಸಾಮಾನ್ಯ ಜ್ಞಾನ ಇರಬೇಕು’ ಎಂದು ಕಿಡಿಕಾರಿದರು.