‘ಪ್ರತಿ ವಿಶ್ವವಿದ್ಯಾನಿಲಯದಲ್ಲೂ ಆಯಾ ವಿಭಾಗಗಳಲ್ಲಿ ಲಭ್ಯವಿರುವ ಸೀಟುಗಳ ಆಧಾರದ ಮೇಲೆ ಪ್ರತ್ಯೇಕವಾಗಿ ಪರೀಕ್ಷೆ ನಡೆಸಿ, ಅಭ್ಯರ್ಥಿಗಳನ್ನು ಆಯ್ಕೆ ಮಾಡಿಕೊಳ್ಳುತ್ತಿವೆ. ಇದರಿಂದ ಭ್ರಷ್ಟಾಚಾರ, ಸ್ವಜನ ಪಕ್ಷಪಾತಕ್ಕೆ ದಾರಿಯಾಗಿದೆ ಎಂಬ ಆರೋಪಗಳು ಪದೇ ಪದೇ ಎದುರಾಗುತ್ತಿರುವುದರಿಂದ ಇಲಾಖೆ ಇಂತಹ ಕ್ರಮಕ್ಕೆ ಮುಂದಾಗಿದೆ’ ಎಂದು ಇಲಾಖೆಯ ಅಧಿಕಾರಿಯೊಬ್ಬರು ತಿಳಿಸಿದರು.