<p><strong>ಬೆಂಗಳೂರು</strong>: ‘ಕರ್ನಾಟಕ ಸಿಇಟಿ ಪರೀಕ್ಷೆಗಳಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ’ ಎಂಬ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸುವ ನಿರ್ಧಾರದ ಸಿಂಧುತ್ವ ಪರಿಶೀಲನೆ ಕೋರಿಕೆಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.</p>.<p>ಈ ಸಂಬಂಧ ದಾಸರಹಳ್ಳಿಯ ಯು.ತನ್ಮಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡುವುದು ಪ್ರಾಯೋಗಿಕ ಎನಿಸುವುದಿಲ್ಲ’ ಎಂದು ಅಭಿಪ್ರಾಯದೊಂದಿಗೆ ಅರ್ಜಿದಾರರ ಮನವಿ ಮಾನ್ಯ ಮಾಡಲು ನಿರಾಕರಿಸಿದೆ.</p>.<p>‘ಸರ್ಕಾರದ ನಿರ್ಧಾರ ತಜ್ಞರ ಅಭಿಪ್ರಾಯದಿಂದ ರೂಪುಗೊಂಡಿದೆ. ಹೀಗಾಗಿ, ಕೋರ್ಟ್ ಇದರಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸೂಚಿಸಿದೆ.</p>.<p>‘ಕಳೆದ ಏಪ್ರಿಲ್ನಲ್ಲಿ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯಲ್ಲಿ ಸುಮಾರು ಮೂರು ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯಲ್ಲಿ, ಸಿಇಟಿ ಪಠ್ಯಕ್ರಮದ ಹೊರತಾದ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ’ ಎಂಬ ಪೋಷಕರು ಮತ್ತು ಶಿಕ್ಷಕರ ದೂರಿನ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚನೆ ನಿರ್ಧಾರ ಕೈಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ‘ಕರ್ನಾಟಕ ಸಿಇಟಿ ಪರೀಕ್ಷೆಗಳಲ್ಲಿ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ’ ಎಂಬ ಆರೋಪಗಳನ್ನು ಪರಿಶೀಲಿಸಲು ಸಮಿತಿ ರಚಿಸುವ ನಿರ್ಧಾರದ ಸಿಂಧುತ್ವ ಪರಿಶೀಲನೆ ಕೋರಿಕೆಯನ್ನು ಹೈಕೋರ್ಟ್ ತಳ್ಳಿ ಹಾಕಿದೆ.</p>.<p>ಈ ಸಂಬಂಧ ದಾಸರಹಳ್ಳಿಯ ಯು.ತನ್ಮಯ ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಎಸ್.ಸುನೀಲ್ ದತ್ ಯಾದವ್ ಅವರಿದ್ದ ಏಕಸದಸ್ಯ ನ್ಯಾಯಪೀಠ, ‘ಪ್ರಸಕ್ತ ಸಾಲಿಗೆ ಸಂಬಂಧಿಸಿದಂತೆ ಯಾವುದೇ ನಿರ್ದೇಶನ ನೀಡುವುದು ಪ್ರಾಯೋಗಿಕ ಎನಿಸುವುದಿಲ್ಲ’ ಎಂದು ಅಭಿಪ್ರಾಯದೊಂದಿಗೆ ಅರ್ಜಿದಾರರ ಮನವಿ ಮಾನ್ಯ ಮಾಡಲು ನಿರಾಕರಿಸಿದೆ.</p>.<p>‘ಸರ್ಕಾರದ ನಿರ್ಧಾರ ತಜ್ಞರ ಅಭಿಪ್ರಾಯದಿಂದ ರೂಪುಗೊಂಡಿದೆ. ಹೀಗಾಗಿ, ಕೋರ್ಟ್ ಇದರಲ್ಲಿ ಮಧ್ಯ ಪ್ರವೇಶಿಸಲು ಸಾಧ್ಯವಿಲ್ಲ. ಭವಿಷ್ಯದಲ್ಲಿ ಇಂತಹ ತಪ್ಪುಗಳು ಮರುಕಳಿಸದಂತೆ ಸೂಕ್ತ ಕ್ರಮ ಕೈಗೊಳ್ಳಬೇಕು’ ಎಂದು ಕರ್ನಾಟಕ ಪರೀಕ್ಷಾ ಪ್ರಾಧಿಕಾರಕ್ಕೆ (ಕೆಇಎ) ಸೂಚಿಸಿದೆ.</p>.<p>‘ಕಳೆದ ಏಪ್ರಿಲ್ನಲ್ಲಿ ನಡೆಸಲಾಗಿದ್ದ ಸಿಇಟಿ ಪರೀಕ್ಷೆಯಲ್ಲಿ ಸುಮಾರು ಮೂರು ಲಕ್ಷ ವಿದ್ಯಾರ್ಥಿಗಳು ಹಾಜರಾಗಿದ್ದರು. ಈ ಪರೀಕ್ಷೆಯಲ್ಲಿ, ಸಿಇಟಿ ಪಠ್ಯಕ್ರಮದ ಹೊರತಾದ ಪಠ್ಯೇತರ ಪ್ರಶ್ನೆಗಳನ್ನು ಕೇಳಲಾಗಿದೆ’ ಎಂಬ ಪೋಷಕರು ಮತ್ತು ಶಿಕ್ಷಕರ ದೂರಿನ ಹಿನ್ನೆಲೆಯಲ್ಲಿ ಸರ್ಕಾರ ಸಮಿತಿ ರಚನೆ ನಿರ್ಧಾರ ಕೈಗೊಂಡಿತ್ತು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>