<p><strong>ಮೈಸೂರು</strong>: 'ಕಾಂಗ್ರೆಸ್ ಹೈಕಮಾಂಡ್ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ. ದಲಿತ ನಾಯಕರು ಸಚಿವ ಸ್ಥಾನ ಪಡೆಯದೆ ಪ್ರತಿಭಟಿಸಲಿ' ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.</p><p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ಡಿಕೆಶಿ ಮುಖ್ಯಮಂತ್ರಿಯಾದರೆ ನೋವಿಲ್ಲ. ಆದರೆ ದಲಿತರನ್ನು ವೋಟ್ ಬ್ಯಾಂಕ್ ಮಾಡಿ, ನಿಮ್ಮ ನಾಯಕರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಂಚನೆ ಮಾಡಿರುವ ಬಗ್ಗೆ ಬೇಸರವಿದೆ' ಎಂದರು.</p><p>'ಕಾಂಗ್ರೆಸ್ನಲ್ಲಿರುವ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೇಳುವ ತಾಕತ್ತು ಇಲ್ಲ. ಹೀಗಾಗಿ ಕಾಂಗ್ರೆಸ್ ದಲಿತರಿಗೆ ಬಗನಿಗೂಟ ಇಟ್ಟಿದೆ. ಅಂಬೇಡ್ಕರ್ ಮೇಲೆ ಗೌರವ ಇದ್ದರೆ, ಸ್ವಾಭಿಮಾನಿಗಳಾಗಿ ಕ್ಯಾಬಿನೆಟ್ ಸ್ಥಾನ ತಿರಸ್ಕರಿಸಿ. ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರಿ' ಎಂದು ಸಲಹೆ ನೀಡಿದರು.</p><p>ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತ ಮುಖ್ಯಮಂತ್ರಿಗೆ ಬೇಡಿಕೆ ಇಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, 'ನಮ್ಮಲ್ಲಿ ಕೇಳದೆಯೇ ಅನೇಕ ಸ್ಥಾನಮಾನ ದಲಿತರಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನೂ ನೀಡುತ್ತಾರೆ. ಪವಾಡಗಳು ನಡೆಯಬೇಕಿದ್ದರೆ ಬಿಜೆಪಿಯಲ್ಲಿ ಮಾತ್ರವೇ ಸಾಧ್ಯ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು</strong>: 'ಕಾಂಗ್ರೆಸ್ ಹೈಕಮಾಂಡ್ ದಲಿತರಿಗೆ ಮುಖ್ಯಮಂತ್ರಿ ಸ್ಥಾನ ನೀಡದಿದ್ದರೆ. ದಲಿತ ನಾಯಕರು ಸಚಿವ ಸ್ಥಾನ ಪಡೆಯದೆ ಪ್ರತಿಭಟಿಸಲಿ' ಎಂದು ವಿಧಾನ ಪರಿಷತ್ ವಿರೋಧ ಪಕ್ಷದ ನಾಯಕ ಛಲವಾದಿ ನಾರಾಯಣಸ್ವಾಮಿ ತಿಳಿಸಿದರು.</p><p>ಇಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿ, 'ಡಿಕೆಶಿ ಮುಖ್ಯಮಂತ್ರಿಯಾದರೆ ನೋವಿಲ್ಲ. ಆದರೆ ದಲಿತರನ್ನು ವೋಟ್ ಬ್ಯಾಂಕ್ ಮಾಡಿ, ನಿಮ್ಮ ನಾಯಕರನ್ನು ಮುಖ್ಯಮಂತ್ರಿ ಮಾಡುತ್ತೇವೆ ಎಂದು ವಂಚನೆ ಮಾಡಿರುವ ಬಗ್ಗೆ ಬೇಸರವಿದೆ' ಎಂದರು.</p><p>'ಕಾಂಗ್ರೆಸ್ನಲ್ಲಿರುವ ನಾಯಕರಿಗೆ ಮುಖ್ಯಮಂತ್ರಿ ಸ್ಥಾನ ಕೇಳುವ ತಾಕತ್ತು ಇಲ್ಲ. ಹೀಗಾಗಿ ಕಾಂಗ್ರೆಸ್ ದಲಿತರಿಗೆ ಬಗನಿಗೂಟ ಇಟ್ಟಿದೆ. ಅಂಬೇಡ್ಕರ್ ಮೇಲೆ ಗೌರವ ಇದ್ದರೆ, ಸ್ವಾಭಿಮಾನಿಗಳಾಗಿ ಕ್ಯಾಬಿನೆಟ್ ಸ್ಥಾನ ತಿರಸ್ಕರಿಸಿ. ಕಾರ್ಯಕರ್ತರು ಕಾಂಗ್ರೆಸ್ ತೊರೆದು ಬೇರೆ ಪಕ್ಷ ಸೇರಿ' ಎಂದು ಸಲಹೆ ನೀಡಿದರು.</p><p>ಬಿಜೆಪಿ ಅಧಿಕಾರಕ್ಕೆ ಬಂದರೆ ದಲಿತ ಮುಖ್ಯಮಂತ್ರಿಗೆ ಬೇಡಿಕೆ ಇಡುತ್ತೀರಾ ಎಂಬ ಪ್ರಶ್ನೆಗೆ ಉತ್ತರಿಸಿ, 'ನಮ್ಮಲ್ಲಿ ಕೇಳದೆಯೇ ಅನೇಕ ಸ್ಥಾನಮಾನ ದಲಿತರಿಗೆ ನೀಡಿದ್ದಾರೆ. ಮುಖ್ಯಮಂತ್ರಿ ಸ್ಥಾನವನ್ನೂ ನೀಡುತ್ತಾರೆ. ಪವಾಡಗಳು ನಡೆಯಬೇಕಿದ್ದರೆ ಬಿಜೆಪಿಯಲ್ಲಿ ಮಾತ್ರವೇ ಸಾಧ್ಯ' ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>