<p><strong>ಶ್ರೀರಂಗಪಟ್ಟಣ:</strong> ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲು ನಿರಾಕರಿಸಿ ಪ್ರಸಕ್ತ ಲೋಕಸಭಾ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿರುವ ಕಾಂಗ್ರೆಸ್ ಮುಖಂಡರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಪಟ್ಟಣದಲ್ಲಿ ಚರ್ಚೆ ನಡೆಸಿದರು.</p>.<p>ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದ ಸಮಯದಲ್ಲೇ ಇಲ್ಲಿನ ಹೋಟೆಲ್ನಲ್ಲಿ ಇಬ್ಬರು ಅರ್ಧ ಗಂಟೆ ಚರ್ಚೆ ನಡೆಸಿದ್ದು ಮಹತ್ವ ಪಡೆದುಕೊಂಡಿದೆ. ಸುಮಲತಾಗೆ ಪರೋಕ್ಷ ಬೆಂಬಲ ನೀಡಿದ್ದು, ಮಂಡ್ಯದ ಸ್ವಾಭಿಮಾನಿ ಸಮಾವೇಶದ ಯಶಸ್ಸಿನ ಬಗ್ಗೆ ಈ ಇಬ್ಬರೂ ಮುಖಂಡರು ತಮ್ಮ ಆಪ್ತರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದರು.</p>.<p>ಮನ್ಮುಲ್ ನಿರ್ದೇಶಕ ಬಿ.ಬೋರೇಗೌಡ, ಗುತ್ತಿಗೆದಾರ ಜಿ.ಎಲ್.ಲಕ್ಷ್ಮೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬಿ.ಎಸ್.ರಾಮಚಂದ್ರು ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಶ್ರೀರಂಗಪಟ್ಟಣ:</strong> ಮೈತ್ರಿ ಅಭ್ಯರ್ಥಿಗೆ ಬೆಂಬಲ ನೀಡಲು ನಿರಾಕರಿಸಿ ಪ್ರಸಕ್ತ ಲೋಕಸಭಾ ಚುನಾವಣಾ ಪ್ರಕ್ರಿಯೆಯಿಂದ ದೂರ ಉಳಿದಿರುವ ಕಾಂಗ್ರೆಸ್ ಮುಖಂಡರಾದ ಎನ್.ಚಲುವರಾಯಸ್ವಾಮಿ, ರಮೇಶ ಬಂಡಿಸಿದ್ದೇಗೌಡ ಮಂಗಳವಾರ ಪಟ್ಟಣದಲ್ಲಿ ಚರ್ಚೆ ನಡೆಸಿದರು.</p>.<p>ಮಂಡ್ಯದಲ್ಲಿ ಸುಮಲತಾ ಅಂಬರೀಷ್ ಅವರು ಸ್ವಾಭಿಮಾನಿ ಸಮಾವೇಶ ನಡೆಸುತ್ತಿದ್ದ ಸಮಯದಲ್ಲೇ ಇಲ್ಲಿನ ಹೋಟೆಲ್ನಲ್ಲಿ ಇಬ್ಬರು ಅರ್ಧ ಗಂಟೆ ಚರ್ಚೆ ನಡೆಸಿದ್ದು ಮಹತ್ವ ಪಡೆದುಕೊಂಡಿದೆ. ಸುಮಲತಾಗೆ ಪರೋಕ್ಷ ಬೆಂಬಲ ನೀಡಿದ್ದು, ಮಂಡ್ಯದ ಸ್ವಾಭಿಮಾನಿ ಸಮಾವೇಶದ ಯಶಸ್ಸಿನ ಬಗ್ಗೆ ಈ ಇಬ್ಬರೂ ಮುಖಂಡರು ತಮ್ಮ ಆಪ್ತರಿಗೆ ಮೊಬೈಲ್ ಕರೆ ಮಾಡಿ ಮಾಹಿತಿ ಪಡೆಯುತ್ತಿದ್ದರು.</p>.<p>ಮನ್ಮುಲ್ ನಿರ್ದೇಶಕ ಬಿ.ಬೋರೇಗೌಡ, ಗುತ್ತಿಗೆದಾರ ಜಿ.ಎಲ್.ಲಕ್ಷ್ಮೇಗೌಡ, ಟಿಎಪಿಸಿಎಂಎಸ್ ನಿರ್ದೇಶಕ ಬಿ.ಎಸ್.ರಾಮಚಂದ್ರು ಜತೆಗಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>