<figcaption>""</figcaption>.<p><strong>ಚಾಮರಾಜನಗರ:</strong> ರಾಮನಗರದಲ್ಲೂ ಕೋವಿಡ್-19 ಪ್ರಕರಣ ದಾಖಲಾಗುವುದರೊಂದಿಗೆ, ಇಡೀ ರಾಜ್ಯದಲ್ಲೇ ಗಡಿ ಜಿಲ್ಲೆ ಚಾಮರಾಜನಗರ ಕೋವಿಡ್-19 ಮುಕ್ತ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿದೆ.</p>.<p>ಈ ವಿಚಾರವಾಗಿ ವಾಟ್ಸ್ಆ್ಯಪ್ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಹಾಸ್ಯಭರಿತ ಹಾಗೂ ಜಿಲ್ಲೆಯ ಜನರು ಹೆಮ್ಮೆ ಪಡುವ ಸಂದೇಶಗಳು, ಮೀಮ್ಗಳು ಹರಿದಾಡುತ್ತಿವೆ.</p>.<p>'ಕೊನೆಗೂ ಕೊರೊನಾ ಕಪ್ ಗೆದ್ದ ಚಾಮರಾಜನಗರ' 'ಈ ಸಲ ಕಪ್ ನಮ್ದೇ', 'ಮುಖ್ಯಮಂತ್ರಿ, ರಾಜಕಾರಣಿಗಳಿಗೆ ಮಾತ್ರವಲ್ಲ, ಕೊರೊನಾಗೂ ನಮ್ಮ ಜಿಲ್ಲೆ ಕಂಡರೆ ಭಯ' ಎಂಬಂತಹ ಸಂದೇಶಗಳು ವಾಟ್ಸ್ಆ್ಯಪ್ಗಳಲ್ಲಿ ಹರಿದಾಡುತ್ತಿದೆ.</p>.<p>ಚಿಕ್ಕಮಗಳೂರಿನಲ್ಲಿ ಕೋವಿಡ್-19 ದೃಢ ಪಟ್ಟ ಸಂದರ್ಭದಲ್ಲೂ, 'ಫೈನಲ್ಗೆ ಚಾಮರಾಜನಗರ, ರಾಮನಗರ, ಚಿಕ್ಕಮಗಳೂರು ರನ್ ಔಟ್' ಎಂಬ ಸಂದೇಶ ವೈರಲ್ ಆಗಿತ್ತು.</p>.<p>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಕೂಡ ಫೇಸ್ಬುಕ್ನಲ್ಲಿ, 'ಇಡೀ ರಾಜ್ಯದಲ್ಲೇ ಚಾಮರಾಜನಗರ ಹಸಿರು ವಲಯದಲ್ಲಿರುವ ಏಕೈಕ ಜಿಲ್ಲೆಯಾಗಿದೆ. ಇದೇ ಸ್ಥಿತಿಯಲ್ಲಿ ಮುಂದುವರಿಯಲು ಎಲ್ಲರ ಸಹಕಾರ ಬೇಕು' ಎಂದು ಮನವಿ ಮಾಡಿದ್ದಾರೆ.<br />ಕೋವಿಡ್-19 ತಡೆಗೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಸರ್ಕಾರ ಹಾಗೂ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<figcaption>""</figcaption>.<p><strong>ಚಾಮರಾಜನಗರ:</strong> ರಾಮನಗರದಲ್ಲೂ ಕೋವಿಡ್-19 ಪ್ರಕರಣ ದಾಖಲಾಗುವುದರೊಂದಿಗೆ, ಇಡೀ ರಾಜ್ಯದಲ್ಲೇ ಗಡಿ ಜಿಲ್ಲೆ ಚಾಮರಾಜನಗರ ಕೋವಿಡ್-19 ಮುಕ್ತ ಏಕೈಕ ಜಿಲ್ಲೆ ಎಂಬ ಹೆಗ್ಗಳಿಕೆ ಪಡೆದಿದೆ.</p>.<p>ಈ ವಿಚಾರವಾಗಿ ವಾಟ್ಸ್ಆ್ಯಪ್ ಹಾಗೂ ಸೋಷಿಯಲ್ ಮೀಡಿಯಾಗಳಲ್ಲಿ ಹಾಸ್ಯಭರಿತ ಹಾಗೂ ಜಿಲ್ಲೆಯ ಜನರು ಹೆಮ್ಮೆ ಪಡುವ ಸಂದೇಶಗಳು, ಮೀಮ್ಗಳು ಹರಿದಾಡುತ್ತಿವೆ.</p>.<p>'ಕೊನೆಗೂ ಕೊರೊನಾ ಕಪ್ ಗೆದ್ದ ಚಾಮರಾಜನಗರ' 'ಈ ಸಲ ಕಪ್ ನಮ್ದೇ', 'ಮುಖ್ಯಮಂತ್ರಿ, ರಾಜಕಾರಣಿಗಳಿಗೆ ಮಾತ್ರವಲ್ಲ, ಕೊರೊನಾಗೂ ನಮ್ಮ ಜಿಲ್ಲೆ ಕಂಡರೆ ಭಯ' ಎಂಬಂತಹ ಸಂದೇಶಗಳು ವಾಟ್ಸ್ಆ್ಯಪ್ಗಳಲ್ಲಿ ಹರಿದಾಡುತ್ತಿದೆ.</p>.<p>ಚಿಕ್ಕಮಗಳೂರಿನಲ್ಲಿ ಕೋವಿಡ್-19 ದೃಢ ಪಟ್ಟ ಸಂದರ್ಭದಲ್ಲೂ, 'ಫೈನಲ್ಗೆ ಚಾಮರಾಜನಗರ, ರಾಮನಗರ, ಚಿಕ್ಕಮಗಳೂರು ರನ್ ಔಟ್' ಎಂಬ ಸಂದೇಶ ವೈರಲ್ ಆಗಿತ್ತು.</p>.<p>ಜಿಲ್ಲಾಧಿಕಾರಿ ಡಾ.ಎಂ.ಆರ್.ರವಿ ಅವರು ಕೂಡ ಫೇಸ್ಬುಕ್ನಲ್ಲಿ, 'ಇಡೀ ರಾಜ್ಯದಲ್ಲೇ ಚಾಮರಾಜನಗರ ಹಸಿರು ವಲಯದಲ್ಲಿರುವ ಏಕೈಕ ಜಿಲ್ಲೆಯಾಗಿದೆ. ಇದೇ ಸ್ಥಿತಿಯಲ್ಲಿ ಮುಂದುವರಿಯಲು ಎಲ್ಲರ ಸಹಕಾರ ಬೇಕು' ಎಂದು ಮನವಿ ಮಾಡಿದ್ದಾರೆ.<br />ಕೋವಿಡ್-19 ತಡೆಗೆ ಜಿಲ್ಲಾಡಳಿತ ಕೈಗೊಂಡ ಕ್ರಮಗಳ ಬಗ್ಗೆ ಸರ್ಕಾರ ಹಾಗೂ ಜನರಿಂದ ಮೆಚ್ಚುಗೆ ವ್ಯಕ್ತವಾಗಿದೆ</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>