‘ಈ ಮೈದಾನಕ್ಕೆ ಸಂಬಂಧಿಸಿದಂತೆ ವಿವಾದ ಇರುವುದರಿಂದ ಅಲ್ಲಿ ಧ್ವಜಾರೋಹಣ, ಗಣೇಶೋತ್ಸವ, ನಮಾಜ್, ಪ್ರಾರ್ಥನೆ ಹೀಗೆ ಏನೇ ಮಾಡುವುದಿದ್ದರೂ ಅನುಮತಿಗಾಗಿ ಕಂದಾಯ ಇಲಾಖೆಗೆ ಮನವಿ ಸಲ್ಲಿಸಬೇಕು. ಮನವಿ ಬಂದರೆ ಇಲಾಖೆ ತೀರ್ಮಾನ ತೆಗೆದುಕೊಳ್ಳುತ್ತದೆ. ಈವರೆಗೆ ಯಾರೂ ಮನವಿ ಸಲ್ಲಿಸಿಲ್ಲ. ಈ ಹಿಂದೆ ಬಿಬಿಎಂಪಿಯಿಂದ ಅನುಮತಿ ಪಡೆದುಕೊಳ್ಳುತ್ತಿದ್ದರು’ ಎಂದು ಆವರು ಸುದ್ದಿಗೋಷ್ಠಿಯಲ್ಲಿ ತಿಳಿಸಿದರು.