ಆಯ್ಕೆ ಸಮಿತಿಗೆ ಬೇಕಿರುವ ಇಬ್ಬರು ‘ಸಮಾಜದ ಹಿತ ಚಿಂತಕ’ರಾಗಿರಬೇಕು ಎಂದು ಪತ್ರದಲ್ಲಿ ಹೇಳಲಾಗಿದೆ. ಈ ಪತ್ರದ ಬಗ್ಗೆ ತೀರ್ಮಾನ ಕೈಗೊಳ್ಳಲು ವಾಣಿಜ್ಯ ಮಂಡಳಿಯ ಸಭೆ ವಾರಾಂತ್ಯದಲ್ಲಿ ನಡೆಯಿತು. ‘ಡಾ. ರಾಜ್ಕುಮಾರ್, ವಿಷ್ಣುವರ್ಧನ್, ಅಂಬರೀಷ್ ಅವರೆಲ್ಲ ತಮ್ಮ ಪಾತ್ರಗಳ ಮೂಲಕ ಜಾತಿಯನ್ನೇ ಮಿರಿದ್ದಾರೆ. ಅಲ್ಲದೆ, ಕನ್ನಡ ಚಿತ್ರರಂಗಕ್ಕೆ ಜಾತಿಯ ಲೇಪ ಬೇಕಿಲ್ಲ. ಸರ್ಕಾರ ಕೈಗೊಂಡಿರುವ ತೀರ್ಮಾನ ತಪ್ಪು. ಈ ತಪ್ಪಿನಲ್ಲಿ ನಾವು ಭಾಗಿಯಾಗುವುದು ಬೇಡ ಎಂದು ನಾನು ಸಭೆಯಲ್ಲಿ ಹೇಳಿದೆ’ ಎಂದು ಸಮಿತಿ ಸದಸ್ಯ ಉಮೇಶ್ ಬಣಕಾರ್ ‘ಪ್ರಜಾವಾಣಿಗೆ’ ತಿಳಿಸಿದರು.