ಮೈಸೂರು: ಚಾಮುಂಡಿಬೆಟ್ಟದ ಚಾಮುಂಡೇಶ್ವರಿ ದೇವಸ್ಥಾನ ಸೇರಿದಂತೆ ಸಮೂಹ ದೇಗುಲಗಳ ನೌಕರರು ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಡಿ. 14ರಿಂದ ಅನಿರ್ದಿಷ್ಟಾವಧಿ ಪ್ರತಿಭಟನೆ ನಡೆಸಲು ನಿರ್ಧರಿಸಿದ್ದಾರೆ. ಇದರಿಂದ ಭಕ್ತಾದಿಗಳಿಗೆ ತೊಂದರೆಯಾಗುವ ಸಾಧ್ಯತೆ ಇದೆ.
ದೇವಸ್ಥಾನ ನೌಕರರ ಸಂಘದ ಪದಾಧಿಕಾರಿಗಳೊಂದಿಗೆ ಜಿಲ್ಲಾಡಳಿತ ಗುರುವಾರ ನಡೆಸಿದ ಮೊದಲ ಸುತ್ತಿನ ಮಾತುಕತೆ ವಿಫಲಗೊಂಡಿದೆ.
ಕೇವಲ ಮೌಖಿಕ ಭರವಸೆಗಳನ್ನಷ್ಟೇ ನೀಡಲಾಗುತ್ತಿದೆ. ಲಿಖಿತ ಭರವಸೆ ಬೇಕು. ದೇಗುಲಗಳ ಪೂಜೆಗೆ ಅಡ್ಡಿ ಮಾಡುವುದಿಲ್ಲ. ಬೆಳಿಗ್ಗೆ ಪೂಜೆ ಮುಗಿಸಿದ ನಂತರ ದೇವಸ್ಥಾನಗಳ ಮುಂದೆ ಸಂಜೆಯವರೆಗೂ ಧರಣಿ ನಡೆಸಲಾಗುವುದು ಎಂದು ಸಂಘದ ಕಾರ್ಯದರ್ಶಿ ವಿಶ್ವನಾಥ್ ತಿಳಿಸಿದರು.
24 ದೇವಸ್ಥಾನಗಳ 181 ಮಂದಿ ನೌಕರರು ಮುಷ್ಕರ ನಡೆಸಲಿದ್ದಾರೆ.