<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ‘ನರೇಂದ್ರ ಮೋದಿಸುಳ್ಳನ್ನೇಬಂಡವಾಳ ಮಾಡಿಕೊಂಡಿದ್ದಾನೆ. ಇಡೀ ದೇಶವನ್ನೇ ಲೂಟಿ ಮಾಡುತ್ತಿದ್ದಾನೆ. ದೇಶಕ್ಕೆ ಮಾರಕವಾಗಿರುವ ಈ ವ್ಯಕ್ತಿಯನ್ನು ಸೋಲಿಸಿ ಗುಜರಾತಿಗೆ ಓಡಿಸಬೇಕು’ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಏಕವಚನದಲ್ಲಿ ಹರಿಹಾಯ್ದರು.</p>.<p>ತಾಲ್ಲೂಕಿನ ಶ್ರೀರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,‘ಪ್ರಸ್ತುತ ಚುನಾವಣೆಯಲ್ಲಿಯೂ ಕೂಡಾ ಇವಿಎಂ ಮತ್ತು ವಿವಿ ಪ್ಯಾಟ್ ಬಗ್ಗೆ ಅನುಮಾನ ಇದೆ.ಮತದಾನದ ಬಗ್ಗೆಯೂ ಸಂಶಯ ಮೂಡುವಂತೆ ಮಾಡಿದ್ದು ಮೋದಿ ಸಾಧನೆ. ಮೋದಿ ಗೆದ್ದರೆ ಈ ದೇಶ ಸುರಕ್ಷಿತವಾಗಿರಲ್ಲ. ದೌರ್ಜನ್ಯ–ದಬ್ಬಾಳಿಕೆ ಮತ್ತಷ್ಟು ಹೆಚ್ಚಾಗುತ್ತವೆ’ ಎಂದರು.</p>.<p><strong>ಪ್ರಧಾನಿ ರೇಸ್ನಲ್ಲಿ ಇಲ್ಲ:</strong> ‘ನಾನು ಪ್ರಧಾನಿ ರೇಸ್ನಲ್ಲಿ ಇರುವ ವ್ಯಕ್ತಿಯಲ್ಲ. ದೇಶಕ್ಕೆ ಸೂಕ್ತ ಪ್ರಧಾನಿಯ ಅಗತ್ಯವಿದೆ. ಆ ಕಾರಣಕ್ಕೆ ನಾವೆಲ್ಲ ಸೇರಿ ಮಹಾ ಮೈತ್ರಿಕೂಟ ರಚಿಸಿಕೊಂಡಿದ್ದೇವೆ. ರಾಹುಲ್ ಗಾಂಧಿ ಪ್ರಧಾನಿ ಸ್ಥಾನಕ್ಕೆ ಯೋಗ್ಯ ಅಲ್ಲ ಎನ್ನುತ್ತಾರೆ ಮೋದಿ. ಆದರೆ ಆ ಸ್ಥಾನಕ್ಕೆ ಅವರು ಯೋಗ್ಯರಾ’ ಎಂದು ನಾಯ್ಡು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಗಂಗಾವತಿ (ಕೊಪ್ಪಳ ಜಿಲ್ಲೆ):</strong> ‘ನರೇಂದ್ರ ಮೋದಿಸುಳ್ಳನ್ನೇಬಂಡವಾಳ ಮಾಡಿಕೊಂಡಿದ್ದಾನೆ. ಇಡೀ ದೇಶವನ್ನೇ ಲೂಟಿ ಮಾಡುತ್ತಿದ್ದಾನೆ. ದೇಶಕ್ಕೆ ಮಾರಕವಾಗಿರುವ ಈ ವ್ಯಕ್ತಿಯನ್ನು ಸೋಲಿಸಿ ಗುಜರಾತಿಗೆ ಓಡಿಸಬೇಕು’ ಎಂದು ಆಂಧ್ರಪ್ರದೇಶದ ಮುಖ್ಯಮಂತ್ರಿ ಎನ್.ಚಂದ್ರಬಾಬು ನಾಯ್ಡು ಏಕವಚನದಲ್ಲಿ ಹರಿಹಾಯ್ದರು.</p>.<p>ತಾಲ್ಲೂಕಿನ ಶ್ರೀರಾಮನಗರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಪರ ಪ್ರಚಾರ ಸಭೆಯಲ್ಲಿ ಮಾತನಾಡಿದ ಅವರು,‘ಪ್ರಸ್ತುತ ಚುನಾವಣೆಯಲ್ಲಿಯೂ ಕೂಡಾ ಇವಿಎಂ ಮತ್ತು ವಿವಿ ಪ್ಯಾಟ್ ಬಗ್ಗೆ ಅನುಮಾನ ಇದೆ.ಮತದಾನದ ಬಗ್ಗೆಯೂ ಸಂಶಯ ಮೂಡುವಂತೆ ಮಾಡಿದ್ದು ಮೋದಿ ಸಾಧನೆ. ಮೋದಿ ಗೆದ್ದರೆ ಈ ದೇಶ ಸುರಕ್ಷಿತವಾಗಿರಲ್ಲ. ದೌರ್ಜನ್ಯ–ದಬ್ಬಾಳಿಕೆ ಮತ್ತಷ್ಟು ಹೆಚ್ಚಾಗುತ್ತವೆ’ ಎಂದರು.</p>.<p><strong>ಪ್ರಧಾನಿ ರೇಸ್ನಲ್ಲಿ ಇಲ್ಲ:</strong> ‘ನಾನು ಪ್ರಧಾನಿ ರೇಸ್ನಲ್ಲಿ ಇರುವ ವ್ಯಕ್ತಿಯಲ್ಲ. ದೇಶಕ್ಕೆ ಸೂಕ್ತ ಪ್ರಧಾನಿಯ ಅಗತ್ಯವಿದೆ. ಆ ಕಾರಣಕ್ಕೆ ನಾವೆಲ್ಲ ಸೇರಿ ಮಹಾ ಮೈತ್ರಿಕೂಟ ರಚಿಸಿಕೊಂಡಿದ್ದೇವೆ. ರಾಹುಲ್ ಗಾಂಧಿ ಪ್ರಧಾನಿ ಸ್ಥಾನಕ್ಕೆ ಯೋಗ್ಯ ಅಲ್ಲ ಎನ್ನುತ್ತಾರೆ ಮೋದಿ. ಆದರೆ ಆ ಸ್ಥಾನಕ್ಕೆ ಅವರು ಯೋಗ್ಯರಾ’ ಎಂದು ನಾಯ್ಡು ಪ್ರಶ್ನಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>