<p><strong>ಬೆಳಗಾವಿ</strong>: ‘ವಿದ್ಯಾವಂತ ಎಂಬ ಕಾರಣಕ್ಕೆ ಪರಿಶಿಷ್ಟ ಸಮುದಾಯದ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಪಿತೂರಿ ಮಾಡಿ, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈ ಕುತಂತ್ರಕ್ಕೆ ಅದೇ ಸಮುದಾಯದ ವ್ಯಕ್ತಿ ಬಳಸಿಕೊಳ್ಳಲಾಗಿದೆ. ಈ ಅನ್ಯಾಯದ ವಿರುದ್ಧ ನಾನೂ ಧ್ವನಿ ಎತ್ತುತ್ತೇನೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p><p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರನ್ನು ತುಳಿಯುವ ಕೆಲಸ ಇಂದು, ನಿನ್ನೆಯಿಂದ ಅಲ್ಲ; 20 ವರ್ಷಗಳಿಂದಲೂ ನಡೆಯುತ್ತ ಬಂದಿದೆ. ಶೇ 74ರಷ್ಟು ಮತದಾರರನ್ನು ಹೊಂದಿದ ಸಮುದಾಯ ತುಳಿಯುವ ಪ್ರಯತ್ನ ನಡೆದಿದೆ. ಅಹಿಂದ ನಾಯಕರೆಂದು ಎಂದು ಹೇಳಿಕೊಳ್ಳುವ ನಾವೆಲ್ಲರೂ ಇದರ ವಿರುದ್ಧ ಹೋರಾಟ ಮಾಡುವ ಅಗತ್ಯವಿದೆ’ ಎಂದರು.</p><p>‘ಚಂದ್ರು ಲಮಾಣಿ ಅವರಿಗೆ ನ್ಯಾಯ ಕೋರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸುತ್ತೇವೆ. ಪಾರದರ್ಶಕ ತನಿಖೆಗೆ ಒತ್ತಾಯಿಸುತ್ತೇವೆ’ ಎಂದರು.</p><p>‘ನಾನು ಭ್ರಷ್ಟಾಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ, ವ್ಯವಸ್ಥೆ ಬಗ್ಗೆ ಪ್ರಶ್ನಿಸುತ್ತೇವೆ. ನಮ್ಮದು ಪರಿಶಿಷ್ಟರ ಪರ ಸರ್ಕಾರ ಎನ್ನುವವರು ಅಧಿಕಾರಕ್ಕೆ ಇರುವಾಗಲೇ, ಇಂಥ ಘಟನೆ ನಡೆಯುತ್ತಿವೆ. ವೈ.ಸಂಪಂಗಿ ಅವರನ್ನು ಇದೇ ರೀತಿಯಾಗಿ ಪ್ರಕರಣದಲ್ಲಿ ಸಿಲುಕಿಸಿದರು’ ಎಂದು ಆರೋಪಿಸಿದರು.</p><p>‘ಪರಿಶಿಷ್ಟ ಸಮುದಾಯದ ಮತ್ತು ಅಹಿಂದ ಶಾಸಕರೇ ಏಕೆ ಇಂಥ ಬಲೆಗೆ ಬೀಳುತ್ತಾರೆ ಎಂಬುದು ನನ್ನ ಪ್ರಶ್ನೆ. ಚಂದ್ರು ಲಮಾಣಿ ಅವರ ಭ್ರಷ್ಟಾಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಒಬ್ಬ ಸ್ವಾಮೀಜಿ ಪರಿಶಿಷ್ಟ ಸಮುದಾಯದ ವ್ಯಕ್ತಿಯನ್ನು ಬಳಸಿ ಈ ಕೃತ್ಯ ಮಾಡಿಸಿದ್ದಾರೆ. ಈ ಹಿಂದೆ ನನ್ನ ಮೇಲೆಯೂ ಏನು ಮಾಡಿದ್ದಾರೆ ಗೊತ್ತಲ್ಲವೇ. ನಾನೂ ಸಂತ್ರಸ್ತನೇ. ಆದರೆ, ಆ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಹಾಗಾಗಿ ಹೆಚ್ಚು ಪ್ರತಿಕ್ರಿಯಿಸಲಾರೆ’ ಎಮದರು.</p><p>‘ಭ್ರಷ್ಟಾಚಾರ ಆರೋಪ ಬಂದಾಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡುವುದು ಕಷ್ಟ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಬಿಜೆಪಿಯಲ್ಲಿ ಇರುವ ಗೊಂದಲವನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಪಕ್ಷಕ್ಕೆ ಹಾನಿಯಾಗಲಿದೆ’ ಎಂದರು.</p><p>‘ಸಿದ್ದರಾಮಯ್ಯ ಈಗಲೂ ನಮ್ಮ ನಾಯಕ. ಈ ಹಿಂದೆ ಅವರ ಸಂಪುಟದಲ್ಲಿ ಕೆಲಸ ಮಾಡಿದ್ದೇನೆ. ಆದರೆ, ಅವರು ಈ ಹಿಂದಿನ ಮುಖ್ಯಮಂತ್ರಿಯಾಗಿ ಈಗ ಉಳಿದಿಲ್ಲ. ಸಿದ್ದರಾಮಯ್ಯ ಕುರುಬ ನಾಯಕರಲ್ಲ. ಅಹಿಂದ ವರ್ಗದ ನಾಯಕ ಎಂಬುದು ನನ್ನ ಅಭಿಮತ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಳಗಾವಿ</strong>: ‘ವಿದ್ಯಾವಂತ ಎಂಬ ಕಾರಣಕ್ಕೆ ಪರಿಶಿಷ್ಟ ಸಮುದಾಯದ ಶಾಸಕ ಡಾ.ಚಂದ್ರು ಲಮಾಣಿ ವಿರುದ್ಧ ಪಿತೂರಿ ಮಾಡಿ, ಭ್ರಷ್ಟಾಚಾರ ಪ್ರಕರಣದಲ್ಲಿ ಸಿಲುಕಿಸಲಾಗಿದೆ. ಈ ಕುತಂತ್ರಕ್ಕೆ ಅದೇ ಸಮುದಾಯದ ವ್ಯಕ್ತಿ ಬಳಸಿಕೊಳ್ಳಲಾಗಿದೆ. ಈ ಅನ್ಯಾಯದ ವಿರುದ್ಧ ನಾನೂ ಧ್ವನಿ ಎತ್ತುತ್ತೇನೆ’ ಎಂದು ಶಾಸಕ ರಮೇಶ ಜಾರಕಿಹೊಳಿ ಹೇಳಿದರು.</p><p>ಇಲ್ಲಿ ಸೋಮವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಪರಿಶಿಷ್ಟ ಸಮುದಾಯಕ್ಕೆ ಸೇರಿದ ಶಾಸಕರನ್ನು ತುಳಿಯುವ ಕೆಲಸ ಇಂದು, ನಿನ್ನೆಯಿಂದ ಅಲ್ಲ; 20 ವರ್ಷಗಳಿಂದಲೂ ನಡೆಯುತ್ತ ಬಂದಿದೆ. ಶೇ 74ರಷ್ಟು ಮತದಾರರನ್ನು ಹೊಂದಿದ ಸಮುದಾಯ ತುಳಿಯುವ ಪ್ರಯತ್ನ ನಡೆದಿದೆ. ಅಹಿಂದ ನಾಯಕರೆಂದು ಎಂದು ಹೇಳಿಕೊಳ್ಳುವ ನಾವೆಲ್ಲರೂ ಇದರ ವಿರುದ್ಧ ಹೋರಾಟ ಮಾಡುವ ಅಗತ್ಯವಿದೆ’ ಎಂದರು.</p><p>‘ಚಂದ್ರು ಲಮಾಣಿ ಅವರಿಗೆ ನ್ಯಾಯ ಕೋರಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಚರ್ಚಿಸುತ್ತೇವೆ. ಪಾರದರ್ಶಕ ತನಿಖೆಗೆ ಒತ್ತಾಯಿಸುತ್ತೇವೆ’ ಎಂದರು.</p><p>‘ನಾನು ಭ್ರಷ್ಟಾಚಾರದ ಬಗ್ಗೆ ಪ್ರತಿಕ್ರಿಯಿಸುವುದಿಲ್ಲ. ಆದರೆ, ವ್ಯವಸ್ಥೆ ಬಗ್ಗೆ ಪ್ರಶ್ನಿಸುತ್ತೇವೆ. ನಮ್ಮದು ಪರಿಶಿಷ್ಟರ ಪರ ಸರ್ಕಾರ ಎನ್ನುವವರು ಅಧಿಕಾರಕ್ಕೆ ಇರುವಾಗಲೇ, ಇಂಥ ಘಟನೆ ನಡೆಯುತ್ತಿವೆ. ವೈ.ಸಂಪಂಗಿ ಅವರನ್ನು ಇದೇ ರೀತಿಯಾಗಿ ಪ್ರಕರಣದಲ್ಲಿ ಸಿಲುಕಿಸಿದರು’ ಎಂದು ಆರೋಪಿಸಿದರು.</p><p>‘ಪರಿಶಿಷ್ಟ ಸಮುದಾಯದ ಮತ್ತು ಅಹಿಂದ ಶಾಸಕರೇ ಏಕೆ ಇಂಥ ಬಲೆಗೆ ಬೀಳುತ್ತಾರೆ ಎಂಬುದು ನನ್ನ ಪ್ರಶ್ನೆ. ಚಂದ್ರು ಲಮಾಣಿ ಅವರ ಭ್ರಷ್ಟಾಚಾರದ ಬಗ್ಗೆ ನಾನು ಮಾತನಾಡುವುದಿಲ್ಲ. ಆದರೆ, ಒಬ್ಬ ಸ್ವಾಮೀಜಿ ಪರಿಶಿಷ್ಟ ಸಮುದಾಯದ ವ್ಯಕ್ತಿಯನ್ನು ಬಳಸಿ ಈ ಕೃತ್ಯ ಮಾಡಿಸಿದ್ದಾರೆ. ಈ ಹಿಂದೆ ನನ್ನ ಮೇಲೆಯೂ ಏನು ಮಾಡಿದ್ದಾರೆ ಗೊತ್ತಲ್ಲವೇ. ನಾನೂ ಸಂತ್ರಸ್ತನೇ. ಆದರೆ, ಆ ಪ್ರಕರಣವೀಗ ನ್ಯಾಯಾಲಯದಲ್ಲಿದೆ. ಹಾಗಾಗಿ ಹೆಚ್ಚು ಪ್ರತಿಕ್ರಿಯಿಸಲಾರೆ’ ಎಮದರು.</p><p>‘ಭ್ರಷ್ಟಾಚಾರ ಆರೋಪ ಬಂದಾಗ ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಬಿ.ವೈ.ವಿಜಯೇಂದ್ರ ಮಾತನಾಡುವುದು ಕಷ್ಟ’ ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.</p><p>‘ಬಿಜೆಪಿಯಲ್ಲಿ ಇರುವ ಗೊಂದಲವನ್ನು ಬಗೆಹರಿಸಬೇಕು. ಇಲ್ಲದಿದ್ದರೆ ಪಕ್ಷಕ್ಕೆ ಹಾನಿಯಾಗಲಿದೆ’ ಎಂದರು.</p><p>‘ಸಿದ್ದರಾಮಯ್ಯ ಈಗಲೂ ನಮ್ಮ ನಾಯಕ. ಈ ಹಿಂದೆ ಅವರ ಸಂಪುಟದಲ್ಲಿ ಕೆಲಸ ಮಾಡಿದ್ದೇನೆ. ಆದರೆ, ಅವರು ಈ ಹಿಂದಿನ ಮುಖ್ಯಮಂತ್ರಿಯಾಗಿ ಈಗ ಉಳಿದಿಲ್ಲ. ಸಿದ್ದರಾಮಯ್ಯ ಕುರುಬ ನಾಯಕರಲ್ಲ. ಅಹಿಂದ ವರ್ಗದ ನಾಯಕ ಎಂಬುದು ನನ್ನ ಅಭಿಮತ’ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>