ಸುದ್ದಿಗಾರರ ಜತೆ ಶನಿವಾರ ಮಾತನಾಡಿದ ಅವರು, ʼಮೃತನ ವಿರುದ್ಧ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿತ್ತು. ಆ ಬಗ್ಗೆ ವಿಚಾರಣೆ ನಡೆಸಲು ಆತನನ್ನು ಪೊಲೀಸರು ಠಾಣೆಗೆ ಕರೆತಂದಿದ್ದರು. ಅಲ್ಲಿ ಮೃತಪಟ್ಟಿರುವುದರಿಂದ ಪೊಲೀಸರೇ ಸಾವಿಗೆ ಕಾರಣ ಎಂದು ಆರೋಪಿಸಿ ಆತನ ಕುಟುಂಬದವರು ಪ್ರತಿಭಟನೆ ನಡೆಸಿ, ದಾಂಧಲೆ ಮಾಡಿದ್ದಾರೆʼ ಎಂದರು.
ʼಪೊಲೀಸ್ ಠಾಣೆ ಮೇಲೆ ದಾಳಿ ಮಾಡುವವರು, ಹಲ್ಲೆ ನಡೆಸುವವರು, ತಲೆ ಕತ್ತರಿಸುತ್ತೇವೆ ಎನ್ನುವವರನ್ನು ಸುಮ್ಮನೆ ಬಿಡುವುದಿಲ್ಲ. ಧಮಕಿ ಹಾಕುವವರ ಬಗ್ಗೆ ಮೃದು ಧೋರಣೆ ತಳೆಯುವ ಪ್ರಶ್ನೆ ಇಲ್ಲ. ಪೊಲೀಸರು ಕಾನೂನಿನ ಪ್ರಕಾರ ಕ್ರಮ ಜರುಗಿಸುತ್ತಾರೆʼ ಎಂದು ಹೇಳಿದರು.