<p><strong>ಮೈಸೂರು:</strong> ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಡಿ.ಕೆ. ಶಿವಕುಮಾರ್ ತಾನೇ ಅಭ್ಯರ್ಥಿ ಎಂದು ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. </p><p>ನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ' ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯ ಸಮಿತಿಯು ಸಭೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ವಿವರಗಳನ್ನು ಕೆಪಿಸಿಸಿಗೆ ಸಲ್ಲಿಸಲಿದೆ. ನಂತರವಷ್ಟೇ ಅಭ್ಯರ್ಥಿಗಳ ಆಯ್ಕೆ ಆಗಲಿದೆ' ಎಂದರು. </p><p>ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇದ್ದಂತಿಲ್ಲ. ಪಕ್ದ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೈಸೂರು:</strong> ಚನ್ನಪಟ್ಟಣ ಅಭ್ಯರ್ಥಿ ವಿಚಾರದಲ್ಲಿ ಪಕ್ಷ ತೀರ್ಮಾನ ಕೈಗೊಳ್ಳುತ್ತದೆ. ಡಿ.ಕೆ. ಶಿವಕುಮಾರ್ ತಾನೇ ಅಭ್ಯರ್ಥಿ ಎಂದು ಹೇಳಿಲ್ಲ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಹೇಳಿದರು. </p><p>ನಗರದಲ್ಲಿ ಶನಿವಾರ ಪತ್ರಕರ್ತರ ಜೊತೆ ಅವರು ಮಾತನಾಡಿದರು. ' ಉಪ ಚುನಾವಣೆ ನಡೆಯಲಿರುವ ಮೂರು ಕ್ಷೇತ್ರಗಳಿಗೆ ಪಕ್ಷವು ಉಸ್ತುವಾರಿಗಳನ್ನು ನೇಮಕ ಮಾಡಿದೆ. ಚನ್ನಪಟ್ಟಣ ಕ್ಷೇತ್ರದಲ್ಲಿ ಸಚಿವ ಚಲುವರಾಯಸ್ವಾಮಿ ಅಧ್ಯಕ್ಷತೆಯ ಸಮಿತಿಯು ಸಭೆ ನಡೆಸಿ ಟಿಕೆಟ್ ಆಕಾಂಕ್ಷಿಗಳ ವಿವರಗಳನ್ನು ಕೆಪಿಸಿಸಿಗೆ ಸಲ್ಲಿಸಲಿದೆ. ನಂತರವಷ್ಟೇ ಅಭ್ಯರ್ಥಿಗಳ ಆಯ್ಕೆ ಆಗಲಿದೆ' ಎಂದರು. </p><p>ಮೂರು ಉಪಮುಖ್ಯಮಂತ್ರಿ ಹುದ್ದೆ ಸೃಷ್ಟಿಸಬೇಕು ಎಂಬ ಸತೀಶ ಜಾರಕಿಹೊಳಿ ಹೇಳಿಕೆ ಅವರ ವೈಯಕ್ತಿಕ ಅಭಿಪ್ರಾಯ. ಹಿಂದೆಯೂ ಅವರು ಇದೇ ಅಭಿಪ್ರಾಯ ವ್ಯಕ್ತಪಡಿಸಿದ್ದರು. ಸದ್ಯ ಅಂತಹ ಆಲೋಚನೆ ಇದ್ದಂತಿಲ್ಲ. ಪಕ್ದ ಸೂಕ್ತ ಸಮಯದಲ್ಲಿ ತೀರ್ಮಾನ ಕೈಗೊಳ್ಳಲಿದೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>