ಕಲಾದಗಿ: ಗ್ರಾಮದ ಗುರುಲಿಂಗೇಶ್ವರ ಪಂಚಗ್ರಹ ಸಂಸ್ಥಾನ ಮಠದ ಪೀಠಾಧಿಪತಿ ಆಯ್ಕೆ ವಿಚಾರಕ್ಕೆ ಸಂಬಂಧಿಸಿದ ವಿವಾದ ತಾರಕಕ್ಕೇರಿದ್ದು, ಬಾಳೆಹೊನ್ನುರು ರಂಭಾಪುರಿ ಪೀಠದ ವೀರಸೋಮೇಶ್ವರ ಶಿವಾಚಾರ್ಯ ಸ್ವಾಮೀಜಿ ವಿರುದ್ಧ ಮಠದ ಭಕ್ತರು ಶನಿವಾರ ಪ್ರತಿಭಟನೆ ನಡೆಸಿದರು.
ಗುರುಲಿಂಗೇಶ್ವರ ಮಠದ ವಿವಾದ ನ್ಯಾಯಾಲಯದಲ್ಲಿರುವಾಗಲೇ ಗಂಗಾಧರ ಸ್ವಾಮಿ ಮಠದ ದುರಸ್ತಿ ಕಾರ್ಯ ಮಾಡುವುದಕ್ಕೆ, ಮಠದ ಹೊಲ ಉಳುಮೆ ಮಾಡಿದ್ದಕ್ಕೆ ಆಕ್ರೋಶ ವ್ಯಕ್ತಪಡಿಸಿದರು. ಈ ಹಿನ್ನಲೆಯಲ್ಲಿ ರಂಭಾಪುರಿ ಶ್ರೀಗಳ ವಿರುದ್ಧ ಕಲಾದಗಿಯಲ್ಲಿ ಮಠದ ಭಕ್ತರು ಪ್ರತಿಭಟನೆ ನಡೆಸಿದರು.