<p><strong>ಬೆಂಗಳೂರು:</strong> ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಸಂಬಂಧ ಎಂಟು ಆರೋಪಿಗಳ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ.</p>.<p>ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಚೆನ್ನೈ ಹಾಗೂ ಬೆಂಗಳೂರು ತಂಡ, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಇದೀಗ ಪ್ರಕರಣದ ದೋಷಾರೋಪ ಪಟ್ಟಿಯನ್ನು ಧಾರವಾಡದ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>.<p>ಸಂತೋಷ ಸವದತ್ತಿ, ಎಂ.ದಿನೇಶ್, ಕೆ.ಎಸ್.ಸುನೀಲ್, ಹರ್ಷಿತ್, ಎಸ್.ಅಶ್ವತ್, ನಜೀರ್ ಅಹ್ಮದ್, ಶಹನವಾಜ್ ಹಾಗೂ ಕೆ.ಎಸ್. ನೂತನ್ನನ್ನು ಆರೋಪಿಯನ್ನಾಗಿ ಮಾಡಲಾಗಿದೆ.</p>.<p>'ಇವರೆಲ್ಲರೂ ಒಳಸಂಚು ಮಾಡಿ ಯೋಗೀಶಗೌಡ ಅವರನ್ನು ಹತ್ಯೆ ಮಾಡಿದ್ದರು. ಹತ್ಯೆಯಲ್ಲಿ ಮತ್ತಷ್ಟು ಆರೋಪಿಗಳು ಇದ್ದಾರೆ. ಸಾಕ್ಷ್ಯ ನಾಶಕ್ಕೂ ಕೆಲವರು ಪ್ರಯತ್ನಿಸಿದ್ದಾರೆ. ಅವರೆಲ್ಲರ ಬಗ್ಗೆಯೂ ತನಿಖೆ ಮುಂದುವರಿಯಲಿದೆ' ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಹಳಬರ ಹೆಸರಿಲ್ಲ:</strong> ಹತ್ಯೆ ಸಂಬಂಧ ಧಾರವಾಡ ಉಪನಗರ ಪೊಲೀಸರು, ಬಸವರಾಜ್ ಮುತ್ತಗಿ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದರು. ಅವರ ವಿರುದ್ದ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಆದರೆ, ಈಗ ಸಿಬಿಐ ಸಲ್ಲಿಸಿರುವ ಪಟ್ಟಿಯಲ್ಲಿ ಮುತ್ತಗಿ ಹೆಸರಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಧಾರವಾಡ ಜಿಲ್ಲಾ ಪಂಚಾಯಿತಿ ಸದಸ್ಯರಾಗಿದ್ದ ಯೋಗೀಶಗೌಡ ಗೌಡರ ಹತ್ಯೆ ಸಂಬಂಧ ಎಂಟು ಆರೋಪಿಗಳ ವಿರುದ್ಧ ಸಿಬಿಐ ದೋಷಾರೋಪ ಪಟ್ಟಿ ಸಲ್ಲಿಸಿದೆ.</p>.<p>ತನಿಖೆ ಕೈಗೆತ್ತಿಕೊಂಡಿದ್ದ ಸಿಬಿಐ ಚೆನ್ನೈ ಹಾಗೂ ಬೆಂಗಳೂರು ತಂಡ, ಆರೋಪಿಗಳನ್ನು ಬಂಧಿಸಿ ವಿಚಾರಣೆ ನಡೆಸಿತ್ತು. ಇದೀಗ ಪ್ರಕರಣದ ದೋಷಾರೋಪ ಪಟ್ಟಿಯನ್ನು ಧಾರವಾಡದ ನ್ಯಾಯಾಲಯಕ್ಕೆ ಸಲ್ಲಿಸಿದೆ.</p>.<p>ಸಂತೋಷ ಸವದತ್ತಿ, ಎಂ.ದಿನೇಶ್, ಕೆ.ಎಸ್.ಸುನೀಲ್, ಹರ್ಷಿತ್, ಎಸ್.ಅಶ್ವತ್, ನಜೀರ್ ಅಹ್ಮದ್, ಶಹನವಾಜ್ ಹಾಗೂ ಕೆ.ಎಸ್. ನೂತನ್ನನ್ನು ಆರೋಪಿಯನ್ನಾಗಿ ಮಾಡಲಾಗಿದೆ.</p>.<p>'ಇವರೆಲ್ಲರೂ ಒಳಸಂಚು ಮಾಡಿ ಯೋಗೀಶಗೌಡ ಅವರನ್ನು ಹತ್ಯೆ ಮಾಡಿದ್ದರು. ಹತ್ಯೆಯಲ್ಲಿ ಮತ್ತಷ್ಟು ಆರೋಪಿಗಳು ಇದ್ದಾರೆ. ಸಾಕ್ಷ್ಯ ನಾಶಕ್ಕೂ ಕೆಲವರು ಪ್ರಯತ್ನಿಸಿದ್ದಾರೆ. ಅವರೆಲ್ಲರ ಬಗ್ಗೆಯೂ ತನಿಖೆ ಮುಂದುವರಿಯಲಿದೆ' ಎಂದು ಸಿಬಿಐ ಅಧಿಕಾರಿಯೊಬ್ಬರು ತಿಳಿಸಿದರು.</p>.<p><strong>ಹಳಬರ ಹೆಸರಿಲ್ಲ:</strong> ಹತ್ಯೆ ಸಂಬಂಧ ಧಾರವಾಡ ಉಪನಗರ ಪೊಲೀಸರು, ಬಸವರಾಜ್ ಮುತ್ತಗಿ ಸೇರಿ ಆರು ಆರೋಪಿಗಳನ್ನು ಬಂಧಿಸಿದ್ದರು. ಅವರ ವಿರುದ್ದ ದೋಷಾರೋಪ ಪಟ್ಟಿಯನ್ನು ಸಲ್ಲಿಸಿದ್ದರು. ಆದರೆ, ಈಗ ಸಿಬಿಐ ಸಲ್ಲಿಸಿರುವ ಪಟ್ಟಿಯಲ್ಲಿ ಮುತ್ತಗಿ ಹೆಸರಿಲ್ಲ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>