<p class="Subhead"><strong>ಮಂಗಳೂರು/ ಚಿಕ್ಕಮಗಳೂರು: </strong>ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದೇ 7 ಮತ್ತು 8 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.</p>.<p>ಕಡಲಿನಲ್ಲಿ ತೂಫಾನ್ ಏಳುವ ಸಾಧ್ಯತೆ ಇದ್ದು ಕಡಲಿಗೆ ಮೀನುಗಾರಿಕೆಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.</p>.<p>ವಿಪರೀತ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ 2, 3 ಹಾಗೂ 7 ನೇ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಏಳನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿದ್ದರಿಂದ ಎರಡು ಗಂಟೆ ಸಂಚಾರ ಸ್ಥಗಿತಗೊಂಡಿತ್ತು. ಉಳ್ಳಾಲ ಮತ್ತು ಸೋಮೇಶ್ವರ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ, ನ್ಯೂ ಉಚ್ಚಿಲ, ಉಳ್ಳಾಲದ ಕಿಲೇರಿಯಾನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಕಡಲ್ಕೊರೆತ ತೀವ್ರವಾಗಿದೆ.</p>.<p class="Subhead">ಸಂಪರ್ಕ ಕಡಿತ: ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸುರಂಬಡ್ಕ ಕಿಂಡಿ ಅಣೆಕಟ್ಟು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹೆಬ್ರಿ ಸಮೀಪದ ಬಂಡಿಮಠ ಬಳಿ ಸೀತಾನದಿ ಉಕ್ಕಿ ಹರಿಯುತ್ತಿದ್ದು, ಉಡುಪಿ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿದುಕೊಂಡಿದೆ.</p>.<p class="Subhead"><strong>ರೈಲು ಸಂಚಾರ ವ್ಯತ್ಯಯ: </strong>ನೇತ್ರಾವತಿ ಎಕ್ಸ್ಪ್ರೆಸ್ ರೈಲಿನ ಮೇಲೆ ಮರ ಬಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಭೂ ಕುಸಿತದಿಂದಾಗಿ ಕಾರವಾರ–ಯಶವಂತಪುರ ರೈಲನ್ನು ಹಾಸನ ಮತ್ತು ಮಂಗಳೂರು ಮಾರ್ಗಮಧ್ಯೆ ರದ್ದುಪಡಿಸಲಾಗಿದೆ.</p>.<p><strong>ದೇಗುಲದಲ್ಲಿ ಸಿಲುಕಿದ್ದ 40 ಮಂದಿಯ ರಕ್ಷಣೆ</strong></p>.<p><strong>ಚಿಕ್ಕಮಗಳೂರು: </strong>ಮಳೆಯ ಆರ್ಭಟಕ್ಕೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕಲ್ಹತ್ತಿಗಿರಿ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದ್ದು, ಜಲಪಾತದ ಅಂಗಳದ ವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಸಿಲುಕಿಕೊಂಡಿದ್ದ ಸುಮಾರು 40 ಪ್ರವಾಸಿಗರನ್ನು ಪೊಲೀಸರು, ಸ್ಥಳೀಯರು ಮಂಗಳವಾರ ಹಗ್ಗದ ನೆರವಿನಿಂದ ಪಾರು ಮಾಡಿದ್ದಾರೆ.</p>.<p>‘ಮಧ್ಯಾಹ್ನ 1.30ರಿಂದ ಸುಮಾರು 2 ಗಂಟೆ ಕಾರ್ಯಾಚರಣೆ ಮಾಡಿದೆವು. ಸ್ಥಳೀಯ ಆಟೊ ಚಾಲಕರು ನೆರವಾದರು. ಎಲ್ಲರನ್ನು ಸುರಕ್ಷಿತವಾಗಿ ಕರೆತರಲಾಗಿದೆ’ ಎಂದು ಲಿಂಗದಹಳ್ಳಿ ಠಾಣೆ ಪಿಎಸ್ಐ ಬಸವರಾಜಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p class="Subhead"><strong>ಮಂಗಳೂರು/ ಚಿಕ್ಕಮಗಳೂರು: </strong>ದಕ್ಷಿಣ ಕನ್ನಡ, ಉಡುಪಿ, ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಧಾರಾಕಾರ ಮಳೆ ಸುರಿಯುತ್ತಿದೆ. ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳಲ್ಲಿ ಇದೇ 7 ಮತ್ತು 8 ರಂದು ರೆಡ್ ಅಲರ್ಟ್ ಘೋಷಣೆ ಮಾಡಲಾಗಿದೆ.</p>.<p>ಕಡಲಿನಲ್ಲಿ ತೂಫಾನ್ ಏಳುವ ಸಾಧ್ಯತೆ ಇದ್ದು ಕಡಲಿಗೆ ಮೀನುಗಾರಿಕೆಗೆ ಹೋಗದಂತೆ ಎಚ್ಚರಿಕೆ ನೀಡಲಾಗಿದೆ. ಜಿಲ್ಲೆಯಲ್ಲಿ ಗರಿಷ್ಠ ಮುನ್ನೆಚ್ಚರಿಕೆ ವಹಿಸುವಂತೆ ಅಧಿಕಾರಿಗಳಿಗೆ ಸೂಚನೆ ನೀಡಲಾಗಿದೆ.</p>.<p>ವಿಪರೀತ ಮಳೆಯಿಂದಾಗಿ ಚಾರ್ಮಾಡಿ ಘಾಟಿಯ 2, 3 ಹಾಗೂ 7 ನೇ ತಿರುವಿನಲ್ಲಿ ಭೂಕುಸಿತ ಉಂಟಾಗಿದೆ. ಏಳನೇ ತಿರುವಿನ ಬಳಿ ಎರಡು ಮರಗಳು ರಸ್ತೆಗೆ ಉರುಳಿದ್ದರಿಂದ ಎರಡು ಗಂಟೆ ಸಂಚಾರ ಸ್ಥಗಿತಗೊಂಡಿತ್ತು. ಉಳ್ಳಾಲ ಮತ್ತು ಸೋಮೇಶ್ವರ ವ್ಯಾಪ್ತಿಯ ಉಚ್ಚಿಲ ಬಟ್ಟಪ್ಪಾಡಿ, ನ್ಯೂ ಉಚ್ಚಿಲ, ಉಳ್ಳಾಲದ ಕಿಲೇರಿಯಾನಗರ, ಕೈಕೋ, ಮುಕ್ಕಚ್ಚೇರಿಯಲ್ಲಿ ಕಡಲ್ಕೊರೆತ ತೀವ್ರವಾಗಿದೆ.</p>.<p class="Subhead">ಸಂಪರ್ಕ ಕಡಿತ: ವಿಟ್ಲ ಕಸಬಾ ಗ್ರಾಮದ ಒಕ್ಕೆತ್ತೂರು ಸುರಂಬಡ್ಕ ಕಿಂಡಿ ಅಣೆಕಟ್ಟು ಸಂಪೂರ್ಣವಾಗಿ ಮುಳುಗಡೆಯಾಗಿದೆ. ಹೆಬ್ರಿ ಸಮೀಪದ ಬಂಡಿಮಠ ಬಳಿ ಸೀತಾನದಿ ಉಕ್ಕಿ ಹರಿಯುತ್ತಿದ್ದು, ಉಡುಪಿ - ಶಿವಮೊಗ್ಗ ರಾಷ್ಟ್ರೀಯ ಹೆದ್ದಾರಿ ಸಂಪರ್ಕ ಕಡಿದುಕೊಂಡಿದೆ.</p>.<p class="Subhead"><strong>ರೈಲು ಸಂಚಾರ ವ್ಯತ್ಯಯ: </strong>ನೇತ್ರಾವತಿ ಎಕ್ಸ್ಪ್ರೆಸ್ ರೈಲಿನ ಮೇಲೆ ಮರ ಬಿದ್ದು, ರೈಲು ಸಂಚಾರದಲ್ಲಿ ವ್ಯತ್ಯಯವಾಗಿತ್ತು. ಭೂ ಕುಸಿತದಿಂದಾಗಿ ಕಾರವಾರ–ಯಶವಂತಪುರ ರೈಲನ್ನು ಹಾಸನ ಮತ್ತು ಮಂಗಳೂರು ಮಾರ್ಗಮಧ್ಯೆ ರದ್ದುಪಡಿಸಲಾಗಿದೆ.</p>.<p><strong>ದೇಗುಲದಲ್ಲಿ ಸಿಲುಕಿದ್ದ 40 ಮಂದಿಯ ರಕ್ಷಣೆ</strong></p>.<p><strong>ಚಿಕ್ಕಮಗಳೂರು: </strong>ಮಳೆಯ ಆರ್ಭಟಕ್ಕೆ ಜಿಲ್ಲೆಯ ತರೀಕೆರೆ ತಾಲ್ಲೂಕಿನ ಕಲ್ಹತ್ತಿಗಿರಿ ಜಲಪಾತ ಭೋರ್ಗರೆದು ಧುಮ್ಮಿಕ್ಕುತ್ತಿದ್ದು, ಜಲಪಾತದ ಅಂಗಳದ ವೀರಭದ್ರೇಶ್ವರ ಸ್ವಾಮಿ ದೇಗುಲದಲ್ಲಿ ಸಿಲುಕಿಕೊಂಡಿದ್ದ ಸುಮಾರು 40 ಪ್ರವಾಸಿಗರನ್ನು ಪೊಲೀಸರು, ಸ್ಥಳೀಯರು ಮಂಗಳವಾರ ಹಗ್ಗದ ನೆರವಿನಿಂದ ಪಾರು ಮಾಡಿದ್ದಾರೆ.</p>.<p>‘ಮಧ್ಯಾಹ್ನ 1.30ರಿಂದ ಸುಮಾರು 2 ಗಂಟೆ ಕಾರ್ಯಾಚರಣೆ ಮಾಡಿದೆವು. ಸ್ಥಳೀಯ ಆಟೊ ಚಾಲಕರು ನೆರವಾದರು. ಎಲ್ಲರನ್ನು ಸುರಕ್ಷಿತವಾಗಿ ಕರೆತರಲಾಗಿದೆ’ ಎಂದು ಲಿಂಗದಹಳ್ಳಿ ಠಾಣೆ ಪಿಎಸ್ಐ ಬಸವರಾಜಪ್ಪ ‘ಪ್ರಜಾವಾಣಿ’ಗೆ ತಿಳಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>