<p><strong>ಬೆಂಗಳೂರು: </strong>ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಆಯ್ಕೆಯಾಗಿದ್ದಾರೆ.</p>.<p>ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶನಿವಾರ ಈ ಆಯ್ಕೆ ನಡೆದಿದೆ. ಜೈನ ಸಾಹಿತ್ಯದಲ್ಲಿ ಕೃಷಿ ಮಾಡಿದ ಲೇಖಕರಿಗೆ ನೀಡಲಾಗುತ್ತಿರುವ ಈ ಪ್ರಶಸ್ತಿಯು ₹ 30 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ. ಆಯ್ಕೆ ಸಮಿತಿಯ ಸಭೆಯಲ್ಲಿ ಲೇಖಕಿ ಡಾ. ಪದ್ಮಿನಿ ನಾಗರಾಜ್, ಪರಿಷತ್ತಿನ<br />ಗೌರವ ಕಾರ್ಯದರ್ಶಿಗಳಾದ ರಾಜಶೇಖರ ಹತಗುಂದಿ ಹಾಗೂ ವ.ಚ. ಚನ್ನೇಗೌಡ ಇದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಕನ್ನಡ ಸಾಹಿತ್ಯ ಪರಿಷತ್ತು ಕೊಡಮಾಡುವ ‘ಚಾವುಂಡರಾಯ ದತ್ತಿ ಪ್ರಶಸ್ತಿ’ಗೆ ಸಾಹಿತಿ ಡಾ. ಬಾಳಾಸಾಹೇಬ ಲೋಕಾಪುರ ಆಯ್ಕೆಯಾಗಿದ್ದಾರೆ.</p>.<p>ಪರಿಷತ್ತಿನ ಅಧ್ಯಕ್ಷ ಮನು ಬಳಿಗಾರ್ ನೇತೃತ್ವದಲ್ಲಿ ಶನಿವಾರ ಈ ಆಯ್ಕೆ ನಡೆದಿದೆ. ಜೈನ ಸಾಹಿತ್ಯದಲ್ಲಿ ಕೃಷಿ ಮಾಡಿದ ಲೇಖಕರಿಗೆ ನೀಡಲಾಗುತ್ತಿರುವ ಈ ಪ್ರಶಸ್ತಿಯು ₹ 30 ಸಾವಿರ ನಗದು ಬಹುಮಾನ ಹಾಗೂ ಫಲಕವನ್ನು ಒಳಗೊಂಡಿದೆ. ಆಯ್ಕೆ ಸಮಿತಿಯ ಸಭೆಯಲ್ಲಿ ಲೇಖಕಿ ಡಾ. ಪದ್ಮಿನಿ ನಾಗರಾಜ್, ಪರಿಷತ್ತಿನ<br />ಗೌರವ ಕಾರ್ಯದರ್ಶಿಗಳಾದ ರಾಜಶೇಖರ ಹತಗುಂದಿ ಹಾಗೂ ವ.ಚ. ಚನ್ನೇಗೌಡ ಇದ್ದರು ಎಂದು ಪ್ರಕಟಣೆ ತಿಳಿಸಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>