<p><strong>ಬೆಂಗಳೂರು</strong>: ಭಾರತೀಯ ರೈಲ್ವೆ ಮಂಡಳಿಯು ದೇಶದ ವಿವಿಧ 100 ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ದರ್ಜೆಯ (ಜಿಎಸ್) ಕೋಚ್ಗಳ ಬಳಿ ಕಡಿಮೆ ದರಲ್ಲಿ ಉತ್ತಮ ಆಹಾರ ನೀಡುವ ಕೌಂಟರ್ಗಳನ್ನು ತೆರೆದಿದೆ. ಅದರಲ್ಲಿ ರಾಜ್ಯದ ಏಳು ನಿಲ್ದಾಣಗಳು ಸೇರಿವೆ.</p>.<p>ದಕ್ಷಿಣ ರೈಲ್ವೆ ವ್ಯಾಪ್ತಿಯ ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳು, ನೈರುತ್ಯ ರೈಲ್ವೆ ವ್ಯಾಪ್ತಿಯ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ನಿಲ್ದಾಣಗಳಲ್ಲಿ ಕೌಂಟರ್ ತೆರೆಯಲಾಗಿದ್ದು, ಆಹಾರ ನೀಡಲಾಗುತ್ತಿದೆ. </p>.<p>ಇಂಡಿಯನ್ ರೈಲ್ವೇಸ್ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಶನ್ (ಐಆರ್ಸಿಟಿಸಿ) ಮತ್ತು ಭಾರತೀಯ ರೈಲ್ವೆ ಜಂಟಿಯಾಗಿ ಈ ಕ್ರಮ ಕೈಗೊಂಡಿದ್ದು, ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಬೇಸಿಗೆ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ನೀಡುವ ಹೊಸ ಉಪಕ್ರಮ ಇದಾಗಿದೆ.</p>.<p>‘ಜನತಾ ಊಟ’ ಎಂದು ನಿಲ್ದಾಣಗಳಲ್ಲಿ ಅಡುಗೆ ಮಳಿಗೆಗಳಲ್ಲಿ ಕಡಿಮೆ ದರದಲ್ಲಿ ಆಹಾರ ಒದಗಿಸಲಾಗಿತ್ತು. ಈಗ ಪ್ಲಾಟ್ಫಾರಂನಲ್ಲಿಯೇ ಕೌಂಟರ್ ತೆರೆಯಲಾಗಿದೆ. 100 ರೈಲ್ವೆ ನಿಲ್ದಾಣಗಳ 150 ಪ್ಲಾಟ್ಫಾರಂಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ₹20ಕ್ಕೆ ಉಪಾಹಾರ, ₹ 50ಕ್ಕೆ ಲಘು ಊಟ, ₹3ಕ್ಕೆ 200 ಎಂ.ಎಲ್. ನೀರು ನೀಡಲಾಗುತ್ತದೆ ಎಂದು ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ಭಾರತೀಯ ರೈಲ್ವೆ ಮಂಡಳಿಯು ದೇಶದ ವಿವಿಧ 100 ರೈಲು ನಿಲ್ದಾಣಗಳಲ್ಲಿ ಸಾಮಾನ್ಯ ದರ್ಜೆಯ (ಜಿಎಸ್) ಕೋಚ್ಗಳ ಬಳಿ ಕಡಿಮೆ ದರಲ್ಲಿ ಉತ್ತಮ ಆಹಾರ ನೀಡುವ ಕೌಂಟರ್ಗಳನ್ನು ತೆರೆದಿದೆ. ಅದರಲ್ಲಿ ರಾಜ್ಯದ ಏಳು ನಿಲ್ದಾಣಗಳು ಸೇರಿವೆ.</p>.<p>ದಕ್ಷಿಣ ರೈಲ್ವೆ ವ್ಯಾಪ್ತಿಯ ಮಂಗಳೂರು ಸೆಂಟ್ರಲ್ ಮತ್ತು ಮಂಗಳೂರು ಜಂಕ್ಷನ್ ರೈಲು ನಿಲ್ದಾಣಗಳು, ನೈರುತ್ಯ ರೈಲ್ವೆ ವ್ಯಾಪ್ತಿಯ ಕೆಎಸ್ಆರ್ ಬೆಂಗಳೂರು, ಯಶವಂತಪುರ, ಮೈಸೂರು, ವಿಜಯಪುರ ಮತ್ತು ಬಳ್ಳಾರಿ ನಿಲ್ದಾಣಗಳಲ್ಲಿ ಕೌಂಟರ್ ತೆರೆಯಲಾಗಿದ್ದು, ಆಹಾರ ನೀಡಲಾಗುತ್ತಿದೆ. </p>.<p>ಇಂಡಿಯನ್ ರೈಲ್ವೇಸ್ ಕೇಟರಿಂಗ್ ಆ್ಯಂಡ್ ಟೂರಿಸಂ ಕಾರ್ಪೊರೇಶನ್ (ಐಆರ್ಸಿಟಿಸಿ) ಮತ್ತು ಭಾರತೀಯ ರೈಲ್ವೆ ಜಂಟಿಯಾಗಿ ಈ ಕ್ರಮ ಕೈಗೊಂಡಿದ್ದು, ಕಾಯ್ದಿರಿಸದ ಬೋಗಿಗಳಲ್ಲಿ ಪ್ರಯಾಣಿಸುವವರಿಗೆ ಬೇಸಿಗೆ ಕಾಲದಲ್ಲಿ ಕೈಗೆಟುಕುವ ಬೆಲೆಯಲ್ಲಿ ಆರೋಗ್ಯಕರ ಊಟ ಮತ್ತು ತಿಂಡಿಗಳನ್ನು ನೀಡುವ ಹೊಸ ಉಪಕ್ರಮ ಇದಾಗಿದೆ.</p>.<p>‘ಜನತಾ ಊಟ’ ಎಂದು ನಿಲ್ದಾಣಗಳಲ್ಲಿ ಅಡುಗೆ ಮಳಿಗೆಗಳಲ್ಲಿ ಕಡಿಮೆ ದರದಲ್ಲಿ ಆಹಾರ ಒದಗಿಸಲಾಗಿತ್ತು. ಈಗ ಪ್ಲಾಟ್ಫಾರಂನಲ್ಲಿಯೇ ಕೌಂಟರ್ ತೆರೆಯಲಾಗಿದೆ. 100 ರೈಲ್ವೆ ನಿಲ್ದಾಣಗಳ 150 ಪ್ಲಾಟ್ಫಾರಂಗಳಲ್ಲಿ ಈ ವ್ಯವಸ್ಥೆ ಮಾಡಲಾಗಿದೆ. ₹20ಕ್ಕೆ ಉಪಾಹಾರ, ₹ 50ಕ್ಕೆ ಲಘು ಊಟ, ₹3ಕ್ಕೆ 200 ಎಂ.ಎಲ್. ನೀರು ನೀಡಲಾಗುತ್ತದೆ ಎಂದು ರೈಲ್ವೆ ಸಾರ್ವಜನಿಕ ಸಂಪರ್ಕ ಅಧಿಕಾರಿ ತಿಳಿಸಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>