<p><strong>ಬೆಂಗಳೂರು: </strong>ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.</p>.<p>ಮಧ್ಯಾಹ್ನ ಊಟದ ಬಳಿಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಯಡಿಯೂರಪ್ಪ ಗದ್ಗದಿತರಾಗಿ ಹೇಳಿದರು.</p>.<p>ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿಆರಂಭದಿಂದಲೂ ಭಾವನಾತ್ಮಕವಾಗಿ ಮಾತನಾಡಿದ ಅವರು, ಯಾರೂ ಇಲ್ಲದ ಕಾಲದಿಂದಲೂ ಪಕ್ಷಕ್ಕಾಗಿ ದುಡಿದಿರುವೆ. ಎಲ್ಲ ಸಂದರ್ಭದಲ್ಲೂ ಅಗ್ನಿ ಪರೀಕ್ಷೆ ಎದುರಿಸಿರುವೆ. 75 ವರ್ಷ ವಯಸ್ಸಾದರೂ ಎರಡುವರ್ಷ ಅಧಿಕಾರ ನಡೆಸಲು ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವರಿಷ್ಠರಿಗೆ ನಾನು ಚಿರ ಋಣಿ ಎಂದು ಕಣ್ಣೀರು ಹಾಕುತ್ತಾ ಹೇಳಿದರು.</p>.<p>ಎರಡು ವರ್ಷಗಳ ಹಿಂದೆ ಅಧಿಕಾರ ಸ್ವೀಕರಿಸಿದಾಗ ಎರಡು ತಿಂಗಳ ಕಾಲ ಸಂಪುಟ ರಚಿಸದಂತೆ ಕೇಂದ್ರ ನಾಯಕರು ತಡೆದಿದ್ದರು. ನಂತರ ಸಂಪುಟ ರಚಿಸಿ ಸರ್ಕಾರ ಮುನ್ನಡೆಸಿದೆ ಎಂದು ಯಡಿಯೂರಪ್ಪ ಹೇಳಿದರು</p>.<p>ಅಟಲ್ ಬಿಹಾರಿ ವಾಜಪೇಯಿ ಅವರು ಕೇಂದ್ರ ಸಂಪುಟದಲ್ಲಿ ಸಚಿವನಾಗುವಂತೆ ಆಹ್ವಾನ ನೀಡಿದ್ದರು. ರಾಜ್ಯದಲ್ಲಿ ಪಕ್ಷ ಕಟ್ಟದೇ ಕೇಂದ್ರಕ್ಕೆ ಬರುವುದಿಲ್ಲ ಎಂದು ಇಲ್ಲಿಯೇ ಉಳಿದಿದ್ದೆ ಎಂದು ನೋವಿನಿಂದ ಹೇಳಿದರು.</p>.<p>ಹಿಂದೆ ಬಿಜೆಪಿ ಜತೆ ಯಾರೂ ಇರಲಿಲ್ಲ. ಸಭೆ ನಡೆಸಿದರೆ 300-400 ಜನ ಸೇರುತ್ತಿರಲಿಲ್ಲ. ಆದರೂ ಎದೆಗುಂದದೆ ಪಕ್ಷ ಕಟ್ಟಿದೆ. ಇಬ್ಬರು ಶಾಸಕರು ಗೆದ್ದಾಗ ವಸಂತ ಬಂಗೇರ ಪಕ್ಷ ತೊರೆದರು. ಆಗಲೂ ಧೈರ್ಯಗೆಡದೆ ಪಕ್ಷ ಕಟ್ಟಿದ್ದೆ ಎಂದು ನೆನಪಿಸಿಕೊಂಡರು.</p>.<p>ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಶಿಕಾರಿಪುರಕ್ಕೆ ಬಂದೆ. ಶಿವಮೊಗ್ಗದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನಾಗಿ, ಪ್ರಚಾರಕನಾಗಿ ದುಡಿದೆ. ಓಡಾಡಲು ಕಾರು ಇಲ್ಲದ ಕಾಲದಿಂದಲೂ ಪಕ್ಷ ಕಟ್ಟಿದ್ದೇನೆ. ಮತ್ತೆ ಪಕ್ಷವನ್ನುಅಧಿಕಾರಕ್ಕೆ ತರುವುದೇ ನನ್ನ ಆಸೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಧ್ಯಾಹ್ನ ರಾಜಭವನಕ್ಕೆ ತೆರಳಿ ರಾಜ್ಯಪಾಲರನ್ನು ಭೇಟಿ ಮಾಡಿ ರಾಜೀನಾಮೆ ಸಲ್ಲಿಸುವುದಾಗಿ ಸಿಎಂ ಯಡಿಯೂರಪ್ಪ ಘೋಷಿಸಿದ್ದಾರೆ.</p>.<p>ಮಧ್ಯಾಹ್ನ ಊಟದ ಬಳಿಕ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರನ್ನು ಭೇಟಿ ಮಾಡಿ ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವೆ ಎಂದು ಯಡಿಯೂರಪ್ಪ ಗದ್ಗದಿತರಾಗಿ ಹೇಳಿದರು.</p>.<p>ಸರ್ಕಾರಕ್ಕೆ ಎರಡು ವರ್ಷ ತುಂಬಿದ ಹಿನ್ನೆಲೆಯಲ್ಲಿ ಆಯೋಜಿಸಿದ್ದ ಸಾಧನಾ ಸಮಾವೇಶದಲ್ಲಿಆರಂಭದಿಂದಲೂ ಭಾವನಾತ್ಮಕವಾಗಿ ಮಾತನಾಡಿದ ಅವರು, ಯಾರೂ ಇಲ್ಲದ ಕಾಲದಿಂದಲೂ ಪಕ್ಷಕ್ಕಾಗಿ ದುಡಿದಿರುವೆ. ಎಲ್ಲ ಸಂದರ್ಭದಲ್ಲೂ ಅಗ್ನಿ ಪರೀಕ್ಷೆ ಎದುರಿಸಿರುವೆ. 75 ವರ್ಷ ವಯಸ್ಸಾದರೂ ಎರಡುವರ್ಷ ಅಧಿಕಾರ ನಡೆಸಲು ಅವಕಾಶ ಕಲ್ಪಿಸಿದ ಪ್ರಧಾನಿ ನರೇಂದ್ರ ಮೋದಿ ಮತ್ತು ಬಿಜೆಪಿ ವರಿಷ್ಠರಿಗೆ ನಾನು ಚಿರ ಋಣಿ ಎಂದು ಕಣ್ಣೀರು ಹಾಕುತ್ತಾ ಹೇಳಿದರು.</p>.<p>ಎರಡು ವರ್ಷಗಳ ಹಿಂದೆ ಅಧಿಕಾರ ಸ್ವೀಕರಿಸಿದಾಗ ಎರಡು ತಿಂಗಳ ಕಾಲ ಸಂಪುಟ ರಚಿಸದಂತೆ ಕೇಂದ್ರ ನಾಯಕರು ತಡೆದಿದ್ದರು. ನಂತರ ಸಂಪುಟ ರಚಿಸಿ ಸರ್ಕಾರ ಮುನ್ನಡೆಸಿದೆ ಎಂದು ಯಡಿಯೂರಪ್ಪ ಹೇಳಿದರು</p>.<p>ಅಟಲ್ ಬಿಹಾರಿ ವಾಜಪೇಯಿ ಅವರು ಕೇಂದ್ರ ಸಂಪುಟದಲ್ಲಿ ಸಚಿವನಾಗುವಂತೆ ಆಹ್ವಾನ ನೀಡಿದ್ದರು. ರಾಜ್ಯದಲ್ಲಿ ಪಕ್ಷ ಕಟ್ಟದೇ ಕೇಂದ್ರಕ್ಕೆ ಬರುವುದಿಲ್ಲ ಎಂದು ಇಲ್ಲಿಯೇ ಉಳಿದಿದ್ದೆ ಎಂದು ನೋವಿನಿಂದ ಹೇಳಿದರು.</p>.<p>ಹಿಂದೆ ಬಿಜೆಪಿ ಜತೆ ಯಾರೂ ಇರಲಿಲ್ಲ. ಸಭೆ ನಡೆಸಿದರೆ 300-400 ಜನ ಸೇರುತ್ತಿರಲಿಲ್ಲ. ಆದರೂ ಎದೆಗುಂದದೆ ಪಕ್ಷ ಕಟ್ಟಿದೆ. ಇಬ್ಬರು ಶಾಸಕರು ಗೆದ್ದಾಗ ವಸಂತ ಬಂಗೇರ ಪಕ್ಷ ತೊರೆದರು. ಆಗಲೂ ಧೈರ್ಯಗೆಡದೆ ಪಕ್ಷ ಕಟ್ಟಿದ್ದೆ ಎಂದು ನೆನಪಿಸಿಕೊಂಡರು.</p>.<p>ಮಂಡ್ಯ ಜಿಲ್ಲೆಯ ಬೂಕನಕೆರೆಯಲ್ಲಿ ಹುಟ್ಟಿ ಶಿಕಾರಿಪುರಕ್ಕೆ ಬಂದೆ. ಶಿವಮೊಗ್ಗದಲ್ಲಿ ಆರ್ ಎಸ್ ಎಸ್ ಕಾರ್ಯಕರ್ತನಾಗಿ, ಪ್ರಚಾರಕನಾಗಿ ದುಡಿದೆ. ಓಡಾಡಲು ಕಾರು ಇಲ್ಲದ ಕಾಲದಿಂದಲೂ ಪಕ್ಷ ಕಟ್ಟಿದ್ದೇನೆ. ಮತ್ತೆ ಪಕ್ಷವನ್ನುಅಧಿಕಾರಕ್ಕೆ ತರುವುದೇ ನನ್ನ ಆಸೆ ಎಂದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>