<p><strong>ಬೆಂಗಳೂರು: </strong>ಮಂಡ್ಯ ಜಿಲ್ಲೆಯ ಸಂಸದರು ಹಾಗೂ ಶಾಸಕರು ಶುಕ್ರವಾರ ಇಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮೈಶುಗರ್ ಕಾರ್ಖಾನೆಯ ಬಗ್ಗೆ ಚರ್ಚಿಸಿದರು.</p>.<p>ಐತಿಹಾಸಿಕ ಮಹತ್ವವುಳ್ಳ ಮಂಡ್ಯದ ಮೈ ಶುಗುರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು ಹಾಗೂ ಜಿಲ್ಲೆಯ ರೈತರನ್ನು ಕಾಪಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.</p>.<p>ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುಶ್ಚೇತನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಹಾಗೂ ಸರ್ಕಾರವೇ ಕಾರ್ಖಾನೆಯ ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ ಬಾಧಕಗಳ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.</p>.<p>ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ತೋಟಗಾರಿಕೆ ಸಚಿವ ನಾರಾಯಣಗೌಡ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕರಾದ ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ರೈತ ನಾಯಕಿ ಸುನಂದಾ ಜಯರಾಂ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮಂಡ್ಯ ಜಿಲ್ಲೆಯ ಸಂಸದರು ಹಾಗೂ ಶಾಸಕರು ಶುಕ್ರವಾರ ಇಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿಯಾಗಿ ಮೈಶುಗರ್ ಕಾರ್ಖಾನೆಯ ಬಗ್ಗೆ ಚರ್ಚಿಸಿದರು.</p>.<p>ಐತಿಹಾಸಿಕ ಮಹತ್ವವುಳ್ಳ ಮಂಡ್ಯದ ಮೈ ಶುಗುರ್ ಕಾರ್ಖಾನೆ ಸರ್ಕಾರಿ ಸ್ವಾಮ್ಯದಲ್ಲಿಯೇ ಉಳಿಯಬೇಕು ಹಾಗೂ ಜಿಲ್ಲೆಯ ರೈತರನ್ನು ಕಾಪಾಡಬೇಕು ಎಂದು ನಿಯೋಗವು ಮುಖ್ಯಮಂತ್ರಿಗಳಿಗೆ ಮನವಿ ಮಾಡಿತು.</p>.<p>ಮೈ ಶುಗರ್ ಸಕ್ಕರೆ ಕಾರ್ಖಾನೆಯನ್ನು ಪುಶ್ಚೇತನಗೊಳಿಸಲು ಸರ್ಕಾರ ಬದ್ಧವಾಗಿದ್ದು, ಕಾರ್ಯಾಚರಣೆ ಮತ್ತು ನಿರ್ವಹಣೆಗೆ ಹಾಗೂ ಸರ್ಕಾರವೇ ಕಾರ್ಖಾನೆಯ ಸಂಪೂರ್ಣ ನಿರ್ವಹಣೆ ಮಾಡುವುದರ ಸಾಧಕ ಬಾಧಕಗಳ ಬಗ್ಗೆ ಸಚಿವ ಸಂಪುಟದ ಸಹೋದ್ಯೋಗಿಗಳೊಂದಿಗೆ ಚರ್ಚಿಸಿ ತೀರ್ಮಾನಕ್ಕೆ ಬರುವುದಾಗಿ ಮುಖ್ಯಮಂತ್ರಿಗಳು ಭರವಸೆ ನೀಡಿದರು.</p>.<p>ಕಾರ್ಮಿಕ ಸಚಿವ ಶಿವರಾಮ್ ಹೆಬ್ಬಾರ್, ತೋಟಗಾರಿಕೆ ಸಚಿವ ನಾರಾಯಣಗೌಡ, ಮಾಜಿ ಸಚಿವರಾದ ಸಿ.ಎಸ್. ಪುಟ್ಟರಾಜು, ಡಿ.ಸಿ.ತಮ್ಮಣ್ಣ, ಶಾಸಕರಾದ ಅನ್ನದಾನಿ, ಕೆ.ಟಿ. ಶ್ರೀಕಂಠೇಗೌಡ, ರವೀಂದ್ರ ಶ್ರೀಕಂಠಯ್ಯ, ರೈತ ನಾಯಕಿ ಸುನಂದಾ ಜಯರಾಂ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>