ಬೆಂಗಳೂರು: ‘ನೂತನ ಸಚಿವರಿಗೆ ಎರಡು ದಿನಗಳಲ್ಲಿ ಖಾತೆ ಹಂಚಿಕೆ ಮಾಡಲಾಗುವುದು’ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹೇಳಿದರು.
ಸಚಿವರ ಪ್ರಮಾಣ ವಚನದ ಬಳಿಕ ಮೊದಲ ಸಚಿವ ಸಂಪುಟ ಸಭೆ ನಡೆಸಿ, ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ‘ಈ ಹಿಂದಿನ ಖಾತೆಯಲ್ಲೇ ಮುಂದುವರಿಸಿ ಅಥವಾ ಇಂಥದ್ದೇ ಖಾತೆ ಕೊಡಿ ಎಂದು ಯಾರೂ ಕೇಳಿಲ್ಲ’ ಎಂದರು.
‘ಖಾತೆ ಹಂಚಿಕೆ ಬಗ್ಗೆ ನಾನೇ ತೀರ್ಮಾಬ ಮಾಡುತ್ತೇನೆ’ ಎಂದೂ ತಿಳಿಸಿದರು.
‘ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಸಂಖ್ಯೆ ಹೆಚ್ಚುತ್ತಿರುವುದರಿಂದ ಕಾರ್ಯಪಡೆಯನ್ನು ಪುನರ್ರಚನೆ ಮಾಡಲಾಗುವುದು. ಪ್ರವಾಹದಿಂದ ಹಾನಿಗೆ ಒಳಗಾದ ಪ್ರದೇಶಗಳಿಗೆ ತೆರಳುವಂತೆ ಸಚಿವರಿಗೆ ಸೂಚನೆ ನೀಡಲಾಗಿದೆ’ ಎಂದರು.