<p><strong>ಬೆಂಗಳೂರು: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಎಂಟಿಬಿ ನಾಗರಾಜು, ಗೋವಿಂದ ಕಾರಜೋಳ, ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುಮಾರ ಕೃಪ ರಸ್ತೆಯಲ್ಲಿರುವ ಖಾದಿ ಬಟ್ಟೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿ ಖಾದಿ ಹಾಗೂ ಗ್ರಾಮೋದ್ಯಮ ಉತ್ಪನ್ನಗಳನ್ನು ಖರೀದಿಸಿದರು. </p>.<p>ಬೊಮ್ಮಾಯಿ, ಪತ್ನಿಗೆ ಸಿಲ್ಕ್ ಸೀರೆ ಮತ್ತು ಜುಬ್ಬಾ ಬಟ್ಟೆ ಸೇರಿದಂತೆ ₹ 16,031 ಮೊತ್ತದ ಉತ್ಪನ್ನಗಳ ಖರೀದಿ ಮಾಡಿದರೆ, ನಾಗರಾಜ್ ₹ 3,000 ಹಾಗೂ ಬಿ.ವೈ.ವಿಜಯೇಂದ್ರ ₹ 4,300 ಮೊತ್ತದ ಬಟ್ಟೆ ಖರೀದಿ ಮಾಡಿದರು.</p>.<p>ಈ ಮಳಿಗೆಯನ್ನು ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್. ಆರ್. ಬೊಮ್ಮಾಯಿ (ಅಂದಿನ ಹಣಕಾಸು ಸಚಿವ) 15.11.1984ರಲ್ಲಿ ಉದ್ಘಾಟನೆ ಮಾಡಿದ್ದರು.</p>.<p>ನೋಂದಣಿಯಾದ ಖಾದಿ ಭಂಡಾರಗಳಲ್ಲಿ ಅರಳೆ ಖಾದಿ, ಉಣ್ಣೆ ಖಾದಿ, ಪಾಲಿ ವಸ್ತ್ರಗಳ ಮೇಲೆ ಗರಿಷ್ಠ ಶೇಕಡ 35 ರಷ್ಟು ಮತ್ತು ರೇಷ್ಮೆ ಖಾದಿ ಮೇಲೆ ಶೇಕಡ 20 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.</p>.<p>ರಾಜ್ಯದಲ್ಲಿ 166 ಖಾದಿ ಸಂಘ-ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, 20 ಸಾವಿರಕ್ಕೂ ಅಧಿಕ ನೂಲುವವರು, ನೇಕಾರರು, ಇದ್ದಾರೆ. ಇವರಲ್ಲಿ ಶೇಕಡ 60ಕ್ಕೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರೇ ಇರುವುದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು: </strong>ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಸಚಿವ ಎಂಟಿಬಿ ನಾಗರಾಜು, ಗೋವಿಂದ ಕಾರಜೋಳ, ಸುನೀಲ್ ಕುಮಾರ್, ರಾಜ್ಯ ಬಿಜೆಪಿ ಉಪಾಧ್ಯಕ್ಷ ಬಿ.ವೈ.ವಿಜಯೇಂದ್ರ ಕುಮಾರ ಕೃಪ ರಸ್ತೆಯಲ್ಲಿರುವ ಖಾದಿ ಬಟ್ಟೆಗಳ ಮಾರಾಟ ಮಳಿಗೆಗೆ ಭೇಟಿ ನೀಡಿ ಖಾದಿ ಹಾಗೂ ಗ್ರಾಮೋದ್ಯಮ ಉತ್ಪನ್ನಗಳನ್ನು ಖರೀದಿಸಿದರು. </p>.<p>ಬೊಮ್ಮಾಯಿ, ಪತ್ನಿಗೆ ಸಿಲ್ಕ್ ಸೀರೆ ಮತ್ತು ಜುಬ್ಬಾ ಬಟ್ಟೆ ಸೇರಿದಂತೆ ₹ 16,031 ಮೊತ್ತದ ಉತ್ಪನ್ನಗಳ ಖರೀದಿ ಮಾಡಿದರೆ, ನಾಗರಾಜ್ ₹ 3,000 ಹಾಗೂ ಬಿ.ವೈ.ವಿಜಯೇಂದ್ರ ₹ 4,300 ಮೊತ್ತದ ಬಟ್ಟೆ ಖರೀದಿ ಮಾಡಿದರು.</p>.<p>ಈ ಮಳಿಗೆಯನ್ನು ಬಸವರಾಜ ಬೊಮ್ಮಾಯಿ ಅವರ ತಂದೆ ಎಸ್. ಆರ್. ಬೊಮ್ಮಾಯಿ (ಅಂದಿನ ಹಣಕಾಸು ಸಚಿವ) 15.11.1984ರಲ್ಲಿ ಉದ್ಘಾಟನೆ ಮಾಡಿದ್ದರು.</p>.<p>ನೋಂದಣಿಯಾದ ಖಾದಿ ಭಂಡಾರಗಳಲ್ಲಿ ಅರಳೆ ಖಾದಿ, ಉಣ್ಣೆ ಖಾದಿ, ಪಾಲಿ ವಸ್ತ್ರಗಳ ಮೇಲೆ ಗರಿಷ್ಠ ಶೇಕಡ 35 ರಷ್ಟು ಮತ್ತು ರೇಷ್ಮೆ ಖಾದಿ ಮೇಲೆ ಶೇಕಡ 20 ರಷ್ಟು ರಿಯಾಯಿತಿ ನೀಡಲಾಗುತ್ತಿದೆ.</p>.<p>ರಾಜ್ಯದಲ್ಲಿ 166 ಖಾದಿ ಸಂಘ-ಸಂಸ್ಥೆಗಳು ಕಾರ್ಯ ನಿರ್ವಹಿಸುತ್ತಿದ್ದು, 20 ಸಾವಿರಕ್ಕೂ ಅಧಿಕ ನೂಲುವವರು, ನೇಕಾರರು, ಇದ್ದಾರೆ. ಇವರಲ್ಲಿ ಶೇಕಡ 60ಕ್ಕೂ ಹೆಚ್ಚು ಪ್ರಮಾಣದಲ್ಲಿ ಮಹಿಳೆಯರೇ ಇರುವುದು ವಿಶೇಷ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>