<p><strong>ಬೆಂಗಳೂರು:</strong> ಕೋವಿಡ್-19 ಸೋಂಕಿತರ ಚಿಕಿತ್ಸಾ ಸೌಕರ್ಯಗಳಿಗೆ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಸಂಸದ ಪಿ.ಸಿ. ಮೋಹನ್ ₹2 ಕೋಟಿ ಅನುದಾನ ನೀಡಿದ್ದಾರೆ.</p>.<p>ಕೊರೊನಾ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1700 ಹಾಸಿಗೆಗಳ ಪ್ರತ್ಯೇಕ ಘಟಕ ಘೋಷಣೆಯಾದ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲ ಉಪಕರಣಗಳ ಸಿದ್ಧತೆಗೆ ಜನಪ್ರತಿನಿಧಿಗಳು ಕೂಡ ಕೈಜೋಡಿಸಿದ್ದಾರೆ.</p>.<p>ಕೊರೊನಾ ಎದುರಿಸಲು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಶ್ಲಾಘಿಸಿರುವ ಮೋಹನ್, ಈಗಾಗಲೇ ರಾಜ್ಯ ಸರ್ಕಾರ 1700 ಹಾಸಿಗೆಗಳನ್ನೊಳಗೊಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸಮುಚ್ಚಯವನ್ನು ಕೋವಿಡ್-19 ಸೋಂಕಿತರಿಗಾಗಿ ಪ್ರತ್ಯೇಕವಾಗಿರಿಸಿದ್ದು, ಈ ಆಸ್ಪತ್ರೆ ಸಮುಚ್ಚಯಗಳ ತೀವ್ರ ನಿಗಾ ಘಟಕಗಳಲ್ಲಿ ಅತ್ಯಾವಶ್ಯವಾಗಿರುವ ವೆಂಟಿಲೇಟರ್ ಸೌಲಭ್ಯ, ಎನ್-95 ರೆಸ್ಪಿರೇಟರ್ಸ್ ಮತ್ತು ಸರ್ಜಿಕಲ್ ಮಾಸ್ಕ್ ಸೇರಿದಂತೆ ಪರ್ಸನಲ್ ಪ್ರೊಟೆಕ್ಟೀವ್ ಉಪಕರಣಗಳೇ ಮೊದಲಾದ ಅಗತ್ಯ ಪರಿಕರಗಳನ್ನು ತುರ್ತಾಗಿ ಖರೀದಿಸುವಂತೆ ಸೂಚಿಸಿದರು.</p>.<p>ಪ್ರಸಕ್ತ ಬಿಕ್ಕಟ್ಟನ್ನು ಎದುರಿಸಲು ಸಾಧ್ಯವಿರುವ ಎಲ್ಲಾ ಸಹಕಾರವನ್ನು ತಾವು ಸರ್ಕಾರಕ್ಕೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸಚಿವರುಗಳಾದ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ, ಸುರೇಶ್ ಕುಮಾರ್, ಡಾ.ಕೆ. ಸುಧಾಕರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಕೋವಿಡ್-19 ಸೋಂಕಿತರ ಚಿಕಿತ್ಸಾ ಸೌಕರ್ಯಗಳಿಗೆ ತಮ್ಮ ಸಂಸದರ ಪ್ರದೇಶಾಭಿವೃದ್ಧಿ ನಿಧಿಯಿಂದಮುಖ್ಯಮಂತ್ರಿ ಪರಿಹಾರ ನಿಧಿಗೆ ಬೆಂಗಳೂರು ಕೇಂದ್ರ ಕ್ಷೇತ್ರದ ಬಿಜೆಪಿ ಸಂಸದ ಪಿ.ಸಿ. ಮೋಹನ್ ₹2 ಕೋಟಿ ಅನುದಾನ ನೀಡಿದ್ದಾರೆ.</p>.<p>ಕೊರೊನಾ ಚಿಕಿತ್ಸೆಗಾಗಿ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ 1700 ಹಾಸಿಗೆಗಳ ಪ್ರತ್ಯೇಕ ಘಟಕ ಘೋಷಣೆಯಾದ ಬೆನ್ನಲ್ಲೇ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಬೇಕಾದ ಎಲ್ಲ ಉಪಕರಣಗಳ ಸಿದ್ಧತೆಗೆ ಜನಪ್ರತಿನಿಧಿಗಳು ಕೂಡ ಕೈಜೋಡಿಸಿದ್ದಾರೆ.</p>.<p>ಕೊರೊನಾ ಎದುರಿಸಲು ರಾಜ್ಯ ಸರ್ಕಾರ ತೆಗೆದುಕೊಳ್ಳುತ್ತಿರುವ ಕ್ರಮಗಳನ್ನು ಶ್ಲಾಘಿಸಿರುವ ಮೋಹನ್, ಈಗಾಗಲೇ ರಾಜ್ಯ ಸರ್ಕಾರ 1700 ಹಾಸಿಗೆಗಳನ್ನೊಳಗೊಂಡ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಸಮುಚ್ಚಯವನ್ನು ಕೋವಿಡ್-19 ಸೋಂಕಿತರಿಗಾಗಿ ಪ್ರತ್ಯೇಕವಾಗಿರಿಸಿದ್ದು, ಈ ಆಸ್ಪತ್ರೆ ಸಮುಚ್ಚಯಗಳ ತೀವ್ರ ನಿಗಾ ಘಟಕಗಳಲ್ಲಿ ಅತ್ಯಾವಶ್ಯವಾಗಿರುವ ವೆಂಟಿಲೇಟರ್ ಸೌಲಭ್ಯ, ಎನ್-95 ರೆಸ್ಪಿರೇಟರ್ಸ್ ಮತ್ತು ಸರ್ಜಿಕಲ್ ಮಾಸ್ಕ್ ಸೇರಿದಂತೆ ಪರ್ಸನಲ್ ಪ್ರೊಟೆಕ್ಟೀವ್ ಉಪಕರಣಗಳೇ ಮೊದಲಾದ ಅಗತ್ಯ ಪರಿಕರಗಳನ್ನು ತುರ್ತಾಗಿ ಖರೀದಿಸುವಂತೆ ಸೂಚಿಸಿದರು.</p>.<p>ಪ್ರಸಕ್ತ ಬಿಕ್ಕಟ್ಟನ್ನು ಎದುರಿಸಲು ಸಾಧ್ಯವಿರುವ ಎಲ್ಲಾ ಸಹಕಾರವನ್ನು ತಾವು ಸರ್ಕಾರಕ್ಕೆ ನೀಡುವುದಾಗಿ ಭರವಸೆ ನೀಡಿದ್ದಾರೆ. ಈ ಸಂದರ್ಭದಲ್ಲಿ ಉಪಮುಖ್ಯಮಂತ್ರಿ ಅಶ್ವತ್ಥನಾರಾಯಣ, ಸಚಿವರುಗಳಾದ ಬಸವರಾಜ್ ಬೊಮ್ಮಾಯಿ, ಆರ್.ಅಶೋಕ, ಸುರೇಶ್ ಕುಮಾರ್, ಡಾ.ಕೆ. ಸುಧಾಕರ್ ಉಪಸ್ಥಿತರಿದ್ದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>