<p><strong>ಬೆಂಗಳೂರು</strong>: ನಾಯಕತ್ವ ಮತ್ತು ಅಧಿಕಾರ ಹಂಚಿಕೆ ವಿಷಯದಲ್ಲಿ ವಿರುದ್ಧ ಧ್ರುವಗಳಂತೆ ಕಾಣಿಸಿಕೊಳ್ಳಲಾರಂಭಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಉಪಹಾರ’ದ ನೆವದಲ್ಲಿ ಒಟ್ಟಿಗೆ ಸೇರಲಿದ್ದಾರೆ. </p>.<p>ಶನಿವಾರ ಬೆಳಗಿನ ಉಪಹಾರಕ್ಕೆ ತಮ್ಮ ಮನೆಗೆ ಬರುವಂತೆ ಸಿದ್ದರಾಮಯ್ಯ ಅವರು ಶಿವಕುಮಾರ್ಗೆ ಆಮಂತ್ರಣ ನೀಡಿದ್ದಾರೆ. ವರಿಷ್ಠರ ಸೂಚನೆ ಅನ್ವಯ ಈ ಉಪಹಾರಕೂಟ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬಳಿಕ, ಅಧಿಕಾರ ಹಂಚಿಕೆ ವಿಷಯ ವಿವಾದದ ಸ್ವರೂಪ ಪಡೆದುಕೊಂಡಿತ್ತು. ನಾಯಕರ ಪರ ಆಯಾ ಸಮುದಾಯದ ನಾಯಕರು, ಸ್ವಾಮೀಜಿಗಳು ಬಹಿರಂಗ ಹೇಳಿಕೆ ನೀಡಿದ್ದರಿಂದಾಗಿ, ಕುರ್ಚಿ ಕುಸ್ತಿ ಬೀದಿಗೆ ಬಂದಿತ್ತು.</p>.<p>ಇಬ್ಬರು ನಾಯಕರ ಮಧ್ಯೆ ‘ಕೊಟ್ಟ ಮಾತು’ ಕುರಿತ ‘ಎಕ್ಸ್’ ವಾಗ್ವಾದವೂ ಶುರುವಾಗಿತ್ತು. ಏತನ್ಮಧ್ಯೆ, ಶಿವಕುಮಾರ್ ಅವರು ಶುಕ್ರವಾರವೇ ದೆಹಲಿಗೆ ತೆರಳಲಿದ್ದಾರೆ ಎಂಬ ವದಂತಿ ಹರಡಿತ್ತು. ದೆಹಲಿ ಯಾತ್ರೆ ರದ್ದಾಗಿದ್ದು, ಉಪಹಾರಕ್ಕೆ ಮುಹೂರ್ತ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು</strong>: ನಾಯಕತ್ವ ಮತ್ತು ಅಧಿಕಾರ ಹಂಚಿಕೆ ವಿಷಯದಲ್ಲಿ ವಿರುದ್ಧ ಧ್ರುವಗಳಂತೆ ಕಾಣಿಸಿಕೊಳ್ಳಲಾರಂಭಿಸಿದ್ದ ಮುಖ್ಯಮಂತ್ರಿ ಸಿದ್ದರಾಮಯ್ಯ ಹಾಗೂ ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್, ‘ಉಪಹಾರ’ದ ನೆವದಲ್ಲಿ ಒಟ್ಟಿಗೆ ಸೇರಲಿದ್ದಾರೆ. </p>.<p>ಶನಿವಾರ ಬೆಳಗಿನ ಉಪಹಾರಕ್ಕೆ ತಮ್ಮ ಮನೆಗೆ ಬರುವಂತೆ ಸಿದ್ದರಾಮಯ್ಯ ಅವರು ಶಿವಕುಮಾರ್ಗೆ ಆಮಂತ್ರಣ ನೀಡಿದ್ದಾರೆ. ವರಿಷ್ಠರ ಸೂಚನೆ ಅನ್ವಯ ಈ ಉಪಹಾರಕೂಟ ನಿಗದಿಯಾಗಿದೆ ಎಂದು ಮುಖ್ಯಮಂತ್ರಿ ಹೇಳಿದ್ದಾರೆ.</p>.<p>ಸರ್ಕಾರ ಎರಡೂವರೆ ವರ್ಷ ಪೂರೈಸಿದ ಬಳಿಕ, ಅಧಿಕಾರ ಹಂಚಿಕೆ ವಿಷಯ ವಿವಾದದ ಸ್ವರೂಪ ಪಡೆದುಕೊಂಡಿತ್ತು. ನಾಯಕರ ಪರ ಆಯಾ ಸಮುದಾಯದ ನಾಯಕರು, ಸ್ವಾಮೀಜಿಗಳು ಬಹಿರಂಗ ಹೇಳಿಕೆ ನೀಡಿದ್ದರಿಂದಾಗಿ, ಕುರ್ಚಿ ಕುಸ್ತಿ ಬೀದಿಗೆ ಬಂದಿತ್ತು.</p>.<p>ಇಬ್ಬರು ನಾಯಕರ ಮಧ್ಯೆ ‘ಕೊಟ್ಟ ಮಾತು’ ಕುರಿತ ‘ಎಕ್ಸ್’ ವಾಗ್ವಾದವೂ ಶುರುವಾಗಿತ್ತು. ಏತನ್ಮಧ್ಯೆ, ಶಿವಕುಮಾರ್ ಅವರು ಶುಕ್ರವಾರವೇ ದೆಹಲಿಗೆ ತೆರಳಲಿದ್ದಾರೆ ಎಂಬ ವದಂತಿ ಹರಡಿತ್ತು. ದೆಹಲಿ ಯಾತ್ರೆ ರದ್ದಾಗಿದ್ದು, ಉಪಹಾರಕ್ಕೆ ಮುಹೂರ್ತ ನಿಗದಿಯಾಗಿದೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>