‘ಗ್ಯಾರಂಟಿ ಯೋಜನೆಗಳು ರಾಜ್ಯದ ಎಲ್ಲ ಜನರನ್ನೂ ತಲುಪುತ್ತಿಲ್ಲ’ ಎಂಬ ವಿರೋಧ ಪಕ್ಷದ ನಾಯಕ ಆರ್. ಅಶೋಕ ಅವರ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ‘ಇದುವರೆಗೆ 1.17 ಕೋಟಿ ಮಹಿಳೆಯರು ಗೃಹಲಕ್ಷ್ಮಿ ಯೋಜನೆಯಡಿ ನೋಂದಣಿ ಮಾಡಿಕೊಂಡಿದ್ದು, 1.14 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿದೆ. ಇನ್ನೂ 3 ಲಕ್ಷ ಮಹಿಳೆಯರಿಗೆ ಸೌಲಭ್ಯ ತಲುಪಿಸಲಾಗುವುದು. ಗೃಹಲಕ್ಷ್ಮಿ ನೋಂದಾಯಿಸಿಕೊಂಡಿರುವವರಿಗೆ ಆಗಿರುವ ತಾಂತ್ರಿಕ ಸಮಸ್ಯೆಗಳನ್ನು ನೀಗಿಸಿ, ಡಿಸೆಂಬರ್ ಅಂತ್ಯದೊಳಗೆ ಹಣ ಒದಗಿಸಲು ಸೂಚನೆ ನೀಡಲಾಗಿದೆ’ ಎಂದರು.