<p><strong>ಬೆಂಗಳೂರು:</strong> ಮುಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದರೆ ಹೈಕೋರ್ಟ್ ಮೆಟ್ಟಿಲೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.</p><p>ಮುಖ್ಯಮಂತ್ರಿ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಚಿವರ ಜೊತೆಗಿನ ಉಪಾಹಾರ ಕೂಟದಲ್ಲಿ ಈ ವಿಚಾರ ಚರ್ಚೆಯಾಗಿದೆ. ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆಯೂ ಸಮಾಲೋಚನೆ ನಡೆದಿದೆ. ಈಗಾಗಲೇ ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯುವಂತೆ ಮನವಿ ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆಯೂ ಚರ್ಚೆಯಾಗಿದೆ.</p><p>ಸಚಿವ ಸಂಪುಟ ಸಭೆಯಲ್ಲಿಯೂ ಈ ವಿಷಯ ಚರ್ಚೆಯಾಗಲಿದೆ. ರಾಜ್ಯಪಾಲರ ನಡೆ ವಿರೋಧಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಕೂಡ ಉಪಾಹಾರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗೆ ಸಚಿವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.</p><p>ಸಂಪುಟ ಸಭೆಯ ಬಳಿಕ ರಾಜ್ಯಪಾಲರ ನಡೆ, ಸಂಪುಟ ಸಭೆಯ ನಿರ್ಣಯ, ಮುಂದಿನ ಕಾನೂನು ಹೋರಾಟ ಸೇರಿದಂತೆ ಹಲವು ವಿಚಾರಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.</p>.ಮುಖ್ಯಮಂತ್ರಿ ನಿವಾಸದಲ್ಲಿ ಸಚಿವರಿಗೆ ಉಪಾಹಾರ ಕೂಟ: ಮುಡಾ ವಿಚಾರ ಅನೌಪಚಾರಿಕ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಬೆಂಗಳೂರು:</strong> ಮುಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿಯ ಪ್ರಾಸಿಕ್ಯೂಷನ್ಗೆ ರಾಜ್ಯಪಾಲ ಥಾವರಚಂದ್ ಗೆಹಲೋತ್ ಅವರು ಅನುಮತಿ ನೀಡಿದರೆ ಹೈಕೋರ್ಟ್ ಮೆಟ್ಟಿಲೇರಲು ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂದಾಗಿದ್ದಾರೆ.</p><p>ಮುಖ್ಯಮಂತ್ರಿ ನಿವಾಸದಲ್ಲಿ ಗುರುವಾರ ಬೆಳಿಗ್ಗೆ ನಡೆದ ಸಚಿವರ ಜೊತೆಗಿನ ಉಪಾಹಾರ ಕೂಟದಲ್ಲಿ ಈ ವಿಚಾರ ಚರ್ಚೆಯಾಗಿದೆ. ಮುಖ್ಯಮಂತ್ರಿ ವಿರುದ್ಧ ಪ್ರಾಸಿಕ್ಯೂಷನ್ಗೆ ರಾಜ್ಯಪಾಲರು ಅನುಮತಿ ನೀಡುವ ಸಾಧ್ಯತೆಯ ಬಗ್ಗೆಯೂ ಸಮಾಲೋಚನೆ ನಡೆದಿದೆ. ಈಗಾಗಲೇ ನೀಡಿರುವ ನೋಟಿಸ್ ಅನ್ನು ವಾಪಸ್ ಪಡೆಯುವಂತೆ ಮನವಿ ಮಾಡಲು ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳುವ ಬಗ್ಗೆಯೂ ಚರ್ಚೆಯಾಗಿದೆ.</p><p>ಸಚಿವ ಸಂಪುಟ ಸಭೆಯಲ್ಲಿಯೂ ಈ ವಿಷಯ ಚರ್ಚೆಯಾಗಲಿದೆ. ರಾಜ್ಯಪಾಲರ ನಡೆ ವಿರೋಧಿಸಿ ಸಂಪುಟ ಸಭೆಯಲ್ಲಿ ನಿರ್ಣಯ ಕೈಗೊಳ್ಳಲು ಕೂಡ ಉಪಾಹಾರ ಸಭೆಯಲ್ಲಿ ತೀರ್ಮಾನಿಸಲಾಗಿದೆ. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗೆ ಸಚಿವರು ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದ್ದಾರೆ.</p><p>ಸಂಪುಟ ಸಭೆಯ ಬಳಿಕ ರಾಜ್ಯಪಾಲರ ನಡೆ, ಸಂಪುಟ ಸಭೆಯ ನಿರ್ಣಯ, ಮುಂದಿನ ಕಾನೂನು ಹೋರಾಟ ಸೇರಿದಂತೆ ಹಲವು ವಿಚಾರಗಳ ಕುರಿತು ಸಚಿವರು ಮಾಹಿತಿ ಹಂಚಿಕೊಳ್ಳಲಿದ್ದಾರೆ ಎಂದು ಮೂಲಗಳು ಹೇಳಿವೆ.</p>.ಮುಖ್ಯಮಂತ್ರಿ ನಿವಾಸದಲ್ಲಿ ಸಚಿವರಿಗೆ ಉಪಾಹಾರ ಕೂಟ: ಮುಡಾ ವಿಚಾರ ಅನೌಪಚಾರಿಕ ಚರ್ಚೆ.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>