ಗುರುವಾರ, 16 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀನಿವಾಸ ಪ್ರಸಾದ್ ನಿಧನ ಸಾಮಾಜಿಕ ನ್ಯಾಯದ ರಾಜಕೀಯ ಹೋರಾಟಕ್ಕೆ ಹಿನ್ನಡೆ: ಸಿಎಂ

Published 29 ಏಪ್ರಿಲ್ 2024, 3:02 IST
Last Updated 29 ಏಪ್ರಿಲ್ 2024, 3:02 IST
ಅಕ್ಷರ ಗಾತ್ರ

ಬೆಂಗಳೂರು: ಕೇಂದ್ರದ ಮಾಜಿ ಸಚಿವ, ಚಾಮರಾಜನಗರ ಸಂಸದ ವಿ. ಶ್ರೀನಿವಾಸ ಪ್ರಸಾದ್ ನಿಧನಕ್ಕೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸಂತಾಪ ವ್ಯಕ್ತಪಡಿಸಿದ್ದಾರೆ.

‘ದಲಿತ ದಮನಿತರ ಪರವಾದ ದಿಟ್ಟ ದನಿ ಮಾಜಿ ಸಚಿವ ಮತ್ತು ಹಿರಿಯ ಮುತ್ಸದ್ದಿ ನಾಯಕ ಶ್ರೀನಿವಾಸಪ್ರಸಾದ್ ಅವರ ಸಾವು ನನ್ನನ್ನು ಆಘಾತಕ್ಕೀಡುಮಾಡಿದೆ. ಅನ್ಯಾಯ-ಅಸಮಾನತೆಯ ವಿರುದ್ಧದ ಹೋರಾಟವನ್ನೇ ಬದುಕಾಗಿಸಿಕೊಂಡಿದ್ದ ಅವರ ಅಗಲಿಕೆ ರಾಜ್ಯದ ಸಾಮಾಜಿಕ ನ್ಯಾಯದ ಪರವಾದ ರಾಜಕೀಯ ಹೋರಾಟಕ್ಕೆ ದೊಡ್ಡ ಹಿನ್ನಡೆಯಾಗಿದೆ’ ಎಂದು ಸಿದ್ದರಾಮಯ್ಯ ತಮ್ಮ ಎಕ್ಸ್‌ ಖಾತೆಯಲ್ಲಿ ಬರೆದುಕೊಂಡಿದ್ದಾರೆ.

‘ದೀರ್ಘಕಾಲ ಕಾಂಗ್ರೆಸ್ ಪಕ್ಷದ ಪ್ರಮುಖ ನೇತಾರರಾಗಿ ಕೆಲಸ ಮಾಡಿದ್ದ ಶ್ರೀನಿವಾಸ ಪ್ರಸಾದ್ ಸಚಿವರಾಗಿ ಮತ್ತು ಲೋಕಸಭಾ ಸದಸ್ಯರಾಗಿ ದೀರ್ಘ ಕಾಲ ಜನ ಸೇವೆ ಮಾಡಿದ್ದಾರೆ. ಅವರೊಬ್ಬ ಪ್ರಗತಿಪರ ಚಿಂತನೆಯ ರಾಜಕೀಯ ನಾಯಕ’ ಎಂದರು.

‘ಹಳೆಮೈಸೂರು ಭಾಗದಲ್ಲಿ ಬಹಳಷ್ಟು ಕಾಲ ನಾವು ಬೇರೆ ಬೇರೆ ಪಕ್ಷಗಳಲ್ಲಿ ಕೆಲಸ ಮಾಡಿದ್ದರೂ ಪರಸ್ಪರ ಗೌರವಪೂರ್ಣ ಸಂಬಂಧವನ್ನು ಉಳಿಸಿಕೊಂಡಿದ್ದೆವು. ಇತ್ತೀಚೆಗಷ್ಟೇ ನಾನು ಭೇಟಿಯಾಗಿದ್ದ ಸಂದರ್ಭದಲ್ಲಿ ನಾವು ಹಳೆಯ ನೆನಪುಗಳನ್ನು ಮೆಲುಕು ಹಾಕಿಕೊಂಡೆವು. ಆಗ ಗೆಲುವಾಗಿದ್ದ ಪ್ರಸಾದ್ ಇಷ್ಟು ಶೀಘ್ರ ನಮ್ಮನ್ನು ಅಗಲಿ ಹೋಗುತ್ತಾರೆ ಎಂಬ ನಿರೀಕ್ಷೆಯೇ ಇರಲಿಲ್ಲ’ ಎಂದು ಹೇಳಿದರು.

‘ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ ಎಂದು ಪ್ರಾರ್ಥಿಸುತ್ತೇನೆ. ಅವರ ಕುಟುಂಬದ ಸದಸ್ಯರು ಮತ್ತು ಅಪಾರವಾದ ಅಭಿಮಾನಿ ಬಳಗದ ದು:ಖದಲ್ಲಿ ನಾನೂ ಭಾಗಿಯಾಗಿದ್ದೇನೆ ಎಂದು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT