ಈ ಕಾರಣಕ್ಕೆ ಬೆಳಗಾವಿ ಅಧಿವೇಶನದಲ್ಲಿ ಮಂಡಿಸಿದ್ದ ನಾಲ್ಕು ಮತ್ತು ಬಜೆಟ್ ಅಧಿವೇಶನದಲ್ಲಿ ಮಂಡಿಸಿದ್ದ ಎರಡು ಸೇರಿ ಒಟ್ಟು ಆರು ಮಸೂದೆಗಳನ್ನು ರಾಜ್ಯಪಾಲರು ತಮ್ಮ ಬಳಿಯೇ ಇಟ್ಟುಕೊಂಡಿದ್ದರು. ಇನ್ನು ಮುಂದೆ ಹೀಗಾಗದಂತೆ ಕ್ರಮ ತೆಗೆದುಕೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಭರವಸೆ ನೀಡಿದ ಬಳಿಕ ಒಪ್ಪಿಗೆ ನೀಡಿದ್ದಾರೆ. ಅಲ್ಲದೆ, ಚುನಾವಣಾ ಆಯೋಗದಿಂದ ಅನುಮತಿ ಪಡೆದು ಗೆಜೆಟ್ ಹೊರಡಿಸುವಂತೆ ಕಾನೂನು ಮತ್ತು ಸಂಸದೀಯ ಇಲಾಖೆಯ ಕಾರ್ಯದರ್ಶಿಗೆ ಸೂಚಿಸಿದ್ದಾರೆ.