<p>ಚಿಕ್ಕಮಗಳೂರು: ‘ಸಾಮಾನ್ಯ ಜನರಿಗೆ ಸರಳ ಜೀವನ ನಡೆಸಲು ಪ್ರಧಾನಿ ಮೋದಿ ಅವರು ಕರೆ ಕೊಟ್ಟಿರುವುದು ಖಂಡನೀಯ’ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಹೇಳಿದರು.</p>.<p>‘ಚಿನ್ನ ಖರೀದಿ ಮಾಡಬೇಡಿ, ಪೆಟ್ರೋಲ್, ಡೀಸೆಲ್ ಬಾಟಲಿಯಲ್ಲಿ ತೆಗೆದುಕೊಳ್ಳಬೇಡಿ ಎಂದು ಕರೆ ಕೊಟ್ಟಿದ್ದಾರೆ. ಇದನ್ನು ನೋಡಿದಾಗ ಭಾರತ ದಿವಾಳಿಯಾಗುತ್ತಿದೆ ಎಂಬುದು ಗೊತ್ತಾಗುತ್ತಿದೆ. ಪ್ರಧಾನಿಯೊಬ್ಬರು ಈ ರೀತಿಯ ಕರೆ ಕೊಟ್ಟಿರುವುದು ದೇಶದಲ್ಲಿ ಇದೇ ಮೊದಲು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುವಲ್ಲಿ ವಿಫವಾಗಿದೆ. ರೈತರು ಗೊಬ್ಬರ ಬಳಸಬಾರದು ಎಂದು ಹೇಳುತ್ತಾರೆ. ರೈತರಿಗೆ ಯಾವುದೇ ನಿರ್ಬಂಧ ಹಾಕಬಾರದು. ರೈತರ ಜೀವನ ಅಧೋಗತಿಯತ್ತ ಹೋದರೆ ದೇಶದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಕೆಡಿಪಿ ಸದಸ್ಯ ಸಂತೋಷ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್, ಹಿರೇಮಗಳೂರು ರಾಮಚಂದ್ರ, ಕಾಂಗ್ರೆಸ್ ಮುಖಂಡ ಶಾಂತಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-1741521740</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ‘ಸಾಮಾನ್ಯ ಜನರಿಗೆ ಸರಳ ಜೀವನ ನಡೆಸಲು ಪ್ರಧಾನಿ ಮೋದಿ ಅವರು ಕರೆ ಕೊಟ್ಟಿರುವುದು ಖಂಡನೀಯ’ ಎಂದು ಕೆಪಿಸಿಸಿ ವಕ್ತಾರ ಎಚ್.ಎಚ್. ದೇವರಾಜ್ ಹೇಳಿದರು.</p>.<p>‘ಚಿನ್ನ ಖರೀದಿ ಮಾಡಬೇಡಿ, ಪೆಟ್ರೋಲ್, ಡೀಸೆಲ್ ಬಾಟಲಿಯಲ್ಲಿ ತೆಗೆದುಕೊಳ್ಳಬೇಡಿ ಎಂದು ಕರೆ ಕೊಟ್ಟಿದ್ದಾರೆ. ಇದನ್ನು ನೋಡಿದಾಗ ಭಾರತ ದಿವಾಳಿಯಾಗುತ್ತಿದೆ ಎಂಬುದು ಗೊತ್ತಾಗುತ್ತಿದೆ. ಪ್ರಧಾನಿಯೊಬ್ಬರು ಈ ರೀತಿಯ ಕರೆ ಕೊಟ್ಟಿರುವುದು ದೇಶದಲ್ಲಿ ಇದೇ ಮೊದಲು’ ಎಂದು ಬುಧವಾರ ಸುದ್ದಿಗೋಷ್ಠಿಯಲ್ಲಿ ಹೇಳಿದರು.</p>.<p>ಬಿಜೆಪಿ ನೇತೃತ್ವದ ಸರ್ಕಾರ ಆಡಳಿತ ನಡೆಸುವಲ್ಲಿ ವಿಫವಾಗಿದೆ. ರೈತರು ಗೊಬ್ಬರ ಬಳಸಬಾರದು ಎಂದು ಹೇಳುತ್ತಾರೆ. ರೈತರಿಗೆ ಯಾವುದೇ ನಿರ್ಬಂಧ ಹಾಕಬಾರದು. ರೈತರ ಜೀವನ ಅಧೋಗತಿಯತ್ತ ಹೋದರೆ ದೇಶದ ಆರ್ಥಿಕತೆ ಮೇಲೆ ದೊಡ್ಡ ಪರಿಣಾಮ ಬೀರಲಿದೆ ಎಂದು ಎಚ್ಚರಿಸಿದರು.</p>.<p>ಸುದ್ದಿಗೋಷ್ಠಿಯಲ್ಲಿ ಕೆಡಿಪಿ ಸದಸ್ಯ ಸಂತೋಷ್, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ರಮೇಶ್, ಹಿರೇಮಗಳೂರು ರಾಮಚಂದ್ರ, ಕಾಂಗ್ರೆಸ್ ಮುಖಂಡ ಶಾಂತಕುಮಾರ್ ಉಪಸ್ಥಿತರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260514-126-1741521740</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>