<p>ಚಿಕ್ಕಮಗಳೂರು: ಕೊರೊನಾ ವೈರಸ್ ಎಲ್ಲೆಡೆ ತಲ್ಲಣ ಸೃಷ್ಟಿಸಿದ್ದು ಹೊರ ದೇಶ, ಹೊರ ರಾಜ್ಯ, ಹೊರ ಜಿಲ್ಲೆಗಳ ಪ್ರವಾಸಿಗರು ಸ್ವಯಂಪ್ರೇರಿತವಾಗಿ ಕಾಫಿನಾಡಿಗೆ ಪ್ರವಾಸಕ್ಕೆ ಬರಬಾರದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮನವಿ ಮಾಡಿದರು.</p>.<p>ಜಿಲ್ಲೆಯ ಜನರ ಹಿತದೃಷ್ಟಿಯಿಂದ ಏ.15ರವರೆಗೆ ಇಲ್ಲಿನ ಪ್ರವಾಸಿ ತಾಣಗಳ (ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ಕೆಮ್ಮಣ್ಣುಗುಂಡಿ, ಶೃಂಗೇರಿ...) ದರ್ಶನಕ್ಕೆ ಪ್ರವಾಸಿಗರು ಬರಬಾರದು ಎಂಬುದು ನಮ್ಮ ಕೋರಿಕೆ. ಸಮುದಾಯಕ್ಕೆ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಸಲಹೆಯನ್ನು ಪರಿಗಣಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಭದ್ರಾ ವನ್ಯಜೀವಿ ವಲಯದಲ್ಲೂ ಸಫಾರಿ, ಮೊದಲಾದವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಲಾಗುವುದು. ಕೊರೊನಾ ವೈರಸ್ ಸೋಂಕು ಶಂಕೆ ಮೇರೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ಎರಡೂ ಪ್ರಕರಣಗಳ ವರದಿ ಕೈಸೇರಿದೆ. ಸೋಂಕು ಇರುವುದು ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿಕ್ಕಮಗಳೂರು: ಕೊರೊನಾ ವೈರಸ್ ಎಲ್ಲೆಡೆ ತಲ್ಲಣ ಸೃಷ್ಟಿಸಿದ್ದು ಹೊರ ದೇಶ, ಹೊರ ರಾಜ್ಯ, ಹೊರ ಜಿಲ್ಲೆಗಳ ಪ್ರವಾಸಿಗರು ಸ್ವಯಂಪ್ರೇರಿತವಾಗಿ ಕಾಫಿನಾಡಿಗೆ ಪ್ರವಾಸಕ್ಕೆ ಬರಬಾರದು ಎಂದು ಜಿಲ್ಲಾಧಿಕಾರಿ ಡಾ.ಬಗಾದಿ ಗೌತಮ್ ಮನವಿ ಮಾಡಿದರು.</p>.<p>ಜಿಲ್ಲೆಯ ಜನರ ಹಿತದೃಷ್ಟಿಯಿಂದ ಏ.15ರವರೆಗೆ ಇಲ್ಲಿನ ಪ್ರವಾಸಿ ತಾಣಗಳ (ಮುಳ್ಳಯ್ಯನಗಿರಿ, ಬಾಬಾಬುಡನ್ಗಿರಿ, ಕೆಮ್ಮಣ್ಣುಗುಂಡಿ, ಶೃಂಗೇರಿ...) ದರ್ಶನಕ್ಕೆ ಪ್ರವಾಸಿಗರು ಬರಬಾರದು ಎಂಬುದು ನಮ್ಮ ಕೋರಿಕೆ. ಸಮುದಾಯಕ್ಕೆ ಸೋಂಕು ಹರಡದಂತೆ ತಡೆಗಟ್ಟುವ ನಿಟ್ಟಿನಲ್ಲಿ ಈ ಸಲಹೆಯನ್ನು ಪರಿಗಣಿಸಬೇಕು ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.</p>.<p>ಭದ್ರಾ ವನ್ಯಜೀವಿ ವಲಯದಲ್ಲೂ ಸಫಾರಿ, ಮೊದಲಾದವನ್ನು ತಾತ್ಕಾಲಿಕವಾಗಿ ಬಂದ್ ಮಾಡುವಂತೆ ಉಪ ಅರಣ್ಯಸಂರಕ್ಷಣಾಧಿಕಾರಿಗೆ ಸೂಚಿಸಲಾಗುವುದು. ಕೊರೊನಾ ವೈರಸ್ ಸೋಂಕು ಶಂಕೆ ಮೇರೆಗೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದ್ದ ಎರಡೂ ಪ್ರಕರಣಗಳ ವರದಿ ಕೈಸೇರಿದೆ. ಸೋಂಕು ಇರುವುದು ದೃಢಪಟ್ಟಿಲ್ಲ ಎಂದು ಸ್ಪಷ್ಟಪಡಿಸಿದರು.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>