ಈ ಬಾರಿಯ ಎಸ್ಎಸ್ಎಲ್ಸಿ ಪರೀಕ್ಷಾ ಕೊಠಡಿಯ ಒಳಗೆ ಸಿಸಿಟಿವಿ ಕ್ಯಾಮೆರಾ ಅಳವಡಿಸಿ, ಅಧಿಕಾರಿಗಳು ತಮ್ಮ ಕಚೇರಿಗಳಲ್ಲಿ ಕುಳಿತು ವೆಬ್ಕಾಸ್ಟ್ ಮೂಲಕ ವೀಕ್ಷಣೆ ಮಾಡುತ್ತಿದ್ದಾರೆ. ಇದರಿಂದ ಪರೀಕ್ಷೆ ಬರೆಯುವ ಮಕ್ಕಳು ಹಾಗೂ ಶಿಕ್ಷಕರು ಮಾನಸಿಕ ಒತ್ತಡಕ್ಕೆ ಒಳಗಾಗುತ್ತಿದ್ದಾರೆ. ಪರೀಕ್ಷಾ ಕೊಠಡಿಗಳ ಒಳಗೆ ಮಕ್ಕಳ ಸ್ನೇಹಿ ವಾತಾವರಣ ಇಲ್ಲವಾಗಿದೆ. ಇಷ್ಟೆಲ್ಲ ವ್ಯವಸ್ಥೆ ಇದ್ದರೂ ನಕಲು ಪ್ರಕರಣಗಳು ಹೇಗೆ ನಡೆಯುತ್ತಿವೆ ಎಂಬ ಪ್ರಶ್ನೆಗೆ ಉತ್ತರ ಕಂಡುಕೊಳ್ಳಬೇಕಿದೆ. ಇದರ ಆಧಾರದಲ್ಲಿ ಮುಂದಿನ ಪರೀಕ್ಷೆಗಳಲ್ಲಿ ಸುಧಾರಣೆ ತರಬಹುದಾಗಿದೆ. ಹಾಗಾಗಿ, ಪರೀಕ್ಷಾ ಕೇಂದ್ರಗಳಿಗೆ ಭೇಟಿ ನೀಡಬೇಕು ಎಂದು ‘ಚೈಲ್ಡ್ ರೈಟ್ ಟ್ರಸ್ಟ್’ ನಿರ್ದೇಶಕ ನರಸಿಂಹ ಜಿ. ರಾವ್ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗಕ್ಕೆ ಪತ್ರ ಬರೆದಿದ್ದರು.