<p><strong>ನವದೆಹಲಿ:</strong> 2019ನೇ ಸಾಲಿನ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಶಕ್ತಿ’ ಪುರಸ್ಕಾರಕ್ಕೆ ಪಾತ್ರವಾಗಿರುವ ರಾಜ್ಯದ ಆರು ಮಕ್ಕಳು ಮಂಗಳವಾರ ಇಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.</p>.<p>ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ರಾಜ್ಯದ ‘ರಂಗ ಕಹಳೆ’ ಸಂಸ್ಥೆಗೆ ‘ಬಾಲ ಕಲ್ಯಾಣ’ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ರಾಜ್ಯದ ಎ.ಯು.ನಚಿಕೇತ ಕುಮಾರ್, ಮಹಮ್ಮದ್ ಸುಹೇಲ್, ಚೀಣ್ಯ ಸಲೀಂಪಾಶಾ, ಬಿ.ಆರ್.ಪ್ರತ್ಯಕ್ಷಾ, ಅರುಣಿಮಾ ಸೇನ್, ನಿಖಿಲ್ ಜಿತೂರಿ ಹಾಗೂ ಎಂ.ವಿನಾಯಕ ಅವರು ‘ಬಾಲಶಕ್ತಿ’ ಪುರಸ್ಕಾರ ಸ್ವೀಕರಿಸಿದರು.</p>.<p>ಸಮಾಜಸೇವೆ, ವೈಜ್ಞಾನಿಕ ಆವಿಷ್ಕಾರ, ಶೌರ್ಯ, ಕಲೆ ಮತ್ತಿತರ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಮಾಡಿರುವ ರಾಷ್ಟ್ರದ ಒಟ್ಟು 26 ಮಕ್ಕಳು, ಇಬ್ಬರು ಹಿರಿಯರು ಹಾಗೂ ಮೂರು ಸಂಸ್ಥೆಗಳಿಗೆ ಪ್ರಸಕ್ತ ಸಾಲಿನ ಪುರಸ್ಕಾರ ದೊರೆತಿದೆ.</p>.<p>ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನೀಡುವ ಈ ಪುರಸ್ಕಾರದ ವೈಯಕ್ತಿಕ ವಿಭಾಗವು ಪದಕ, ₹ 1 ಲಕ್ಷ ನಗದು ಹಾಗೂ ಪ್ರಮಾಣಪತ್ರವನ್ನು, ಸಂಸ್ಥೆಗಳಿಗೆ ನೀಡುವ ಪುರಸ್ಕಾರವು ಪದಕ, ಪ್ರಮಾಣಪತ್ರ ಹಾಗೂ ₹ 5 ಲಕ್ಷ ನಗದು ಒಳಗೊಂಡಿದೆ.</p>.<p>ಪುರಸ್ಕತ ಮಕ್ಕಳು ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸುವ ಗೌರವ ಹೊಂದಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ನವದೆಹಲಿ:</strong> 2019ನೇ ಸಾಲಿನ ‘ಪ್ರಧಾನ ಮಂತ್ರಿ ರಾಷ್ಟ್ರೀಯ ಬಾಲ ಶಕ್ತಿ’ ಪುರಸ್ಕಾರಕ್ಕೆ ಪಾತ್ರವಾಗಿರುವ ರಾಜ್ಯದ ಆರು ಮಕ್ಕಳು ಮಂಗಳವಾರ ಇಲ್ಲಿ ನಡೆದ ಸಮಾರಂಭದಲ್ಲಿ ರಾಷ್ಟ್ರಪತಿ ರಾಮನಾಥ ಕೋವಿಂದ್ ಅವರಿಂದ ಪ್ರಶಸ್ತಿ ಸ್ವೀಕರಿಸಿದರು.</p>.<p>ಮಕ್ಕಳ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಸೇವೆ ಸಲ್ಲಿಸಿರುವ ರಾಜ್ಯದ ‘ರಂಗ ಕಹಳೆ’ ಸಂಸ್ಥೆಗೆ ‘ಬಾಲ ಕಲ್ಯಾಣ’ ಪುರಸ್ಕಾರ ನೀಡಿ ಗೌರವಿಸಲಾಯಿತು.</p>.<p>ರಾಜ್ಯದ ಎ.ಯು.ನಚಿಕೇತ ಕುಮಾರ್, ಮಹಮ್ಮದ್ ಸುಹೇಲ್, ಚೀಣ್ಯ ಸಲೀಂಪಾಶಾ, ಬಿ.ಆರ್.ಪ್ರತ್ಯಕ್ಷಾ, ಅರುಣಿಮಾ ಸೇನ್, ನಿಖಿಲ್ ಜಿತೂರಿ ಹಾಗೂ ಎಂ.ವಿನಾಯಕ ಅವರು ‘ಬಾಲಶಕ್ತಿ’ ಪುರಸ್ಕಾರ ಸ್ವೀಕರಿಸಿದರು.</p>.<p>ಸಮಾಜಸೇವೆ, ವೈಜ್ಞಾನಿಕ ಆವಿಷ್ಕಾರ, ಶೌರ್ಯ, ಕಲೆ ಮತ್ತಿತರ ಕ್ಷೇತ್ರಗಳಲ್ಲಿ ಅಮೋಘ ಸಾಧನೆ ಮಾಡಿರುವ ರಾಷ್ಟ್ರದ ಒಟ್ಟು 26 ಮಕ್ಕಳು, ಇಬ್ಬರು ಹಿರಿಯರು ಹಾಗೂ ಮೂರು ಸಂಸ್ಥೆಗಳಿಗೆ ಪ್ರಸಕ್ತ ಸಾಲಿನ ಪುರಸ್ಕಾರ ದೊರೆತಿದೆ.</p>.<p>ಕೇಂದ್ರದ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವಾಲಯ ನೀಡುವ ಈ ಪುರಸ್ಕಾರದ ವೈಯಕ್ತಿಕ ವಿಭಾಗವು ಪದಕ, ₹ 1 ಲಕ್ಷ ನಗದು ಹಾಗೂ ಪ್ರಮಾಣಪತ್ರವನ್ನು, ಸಂಸ್ಥೆಗಳಿಗೆ ನೀಡುವ ಪುರಸ್ಕಾರವು ಪದಕ, ಪ್ರಮಾಣಪತ್ರ ಹಾಗೂ ₹ 5 ಲಕ್ಷ ನಗದು ಒಳಗೊಂಡಿದೆ.</p>.<p>ಪುರಸ್ಕತ ಮಕ್ಕಳು ಜನವರಿ 26ರಂದು ನಡೆಯುವ ಗಣರಾಜ್ಯೋತ್ಸವ ಪರೇಡ್ನಲ್ಲಿ ಭಾಗವಹಿಸುವ ಗೌರವ ಹೊಂದಲಿದ್ದಾರೆ.</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>