ವರದಿಯ ಪ್ರತಿಯನ್ನು ಮುಖ್ಯಮಂತ್ರಿಗಳ ಅಧಿಕೃತ ಫೇಸ್ಬುಕ್ ಪುಟದಲ್ಲಿ ಪ್ರಕಟಿಸಲಾಗಿದೆ. ಜತೆಗೆ, ‘ಬಾಲ್ಯವನ್ನು ಚಿವುಟುವ ಪ್ರಯತ್ನವನ್ನು ದಿಟ್ಟವಾಗಿ ಎದುರಿಸಿದ ಕಾವ್ಯಶ್ರೀ ಇತರರಿಗೆ ಮಾದರಿ. ಮಕ್ಕಳಿಗೆ ಯಾವುದೇ ತೊಂದರೆ ಎದುರಾದರೂ ಮಕ್ಕಳ ಸಹಾಯವಾಣಿ 1098ಕ್ಕೆ ಕರೆ ಮಾಡಿ. ಮಕ್ಕಳ ದಿನಾಚರಣೆಯಂದು ಸಮಸ್ತ ಜನರಲ್ಲಿ ಸವಿನಯ ಪ್ರಾರ್ಥನೆ, ಮಕ್ಕಳನ್ನು ಬದುಕಲು ಬಿಡಿ, ಬೆಳೆಯಲು ಬಿಡಿ, ಬೆಳಗಲು ಬಿಡಿ’ ಎಂದು ಬರೆಯಲಾಗಿದೆ.