<p>ಸಿರಿಗೆರೆ: ‘ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ಕೇಳಿದಷ್ಟು ಅನುದಾನ ನೀಡಿದ್ದರಿಂದ ಭರಮಸಾಗರ ಏತ ನೀರಾವರಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ತಾಲ್ಲೂಕಿನ 43 ಕೆರೆಗಳಲ್ಲಿ ನೀರು ತುಂಬಿದೆ’ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.</p>.<p>ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಅಭಿಮಾನೋತ್ಸವದ ಅಂಗವಾಗಿ ಮಂಗಳವಾರ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಯಡಿಯೂರಪ್ಪ ಅವರ ಕೊಡುಗೆ ಸ್ಮರಿಸುವುದು ಎಲ್ಲರ ಕರ್ತವ್ಯ. ಹೀಗಾಗಿ ಅಭಿಮಾನೋತ್ಸವಕ್ಕೆ ಈ ಭಾಗದ ಅಭಿಮಾನಿಗಳು ಸ್ವಯಂಪ್ರೇರಿತವಾಗಿ ಬರಬೇಕು’ ಎಂದು ಹೇಳಿದರು.</p>.<p>ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ. ಬಸವರಾಜ್, ಉಪಾಧ್ಯಕ್ಷ ಶೈಲೇಶ್ಕುಮಾರ್, ಮಂಜುನಾಥ, ಪ್ರವೀಣ್ಕುಮಾರ್, ಚಿಕ್ಕಬೆನ್ನೂರು ಗೌಡರ ತೀರ್ಥಪ್ಪ, ಕಲ್ಲೇಶ್, ಸಿದ್ದಬಸಣ್ಣ, ಕೆ.ಎನ್. ಮೋಹನ್, ರಾಜಣ್ಣ, ಪೆಟ್ರೋಲ್ ಬಸವರಾಜ್ ಹಾಗೂ ಭರಮಸಾಗರ ಮಂಡಲದ ಚುನಾಯಿತ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-44-10987902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಸಿರಿಗೆರೆ: ‘ಬಿ.ಎಸ್. ಯಡಿಯೂರಪ್ಪ ಅವರು ರಾಜ್ಯದ ಮುಖ್ಯಮಂತ್ರಿಯಾಗಿದ್ದ ವೇಳೆ ಕೇಳಿದಷ್ಟು ಅನುದಾನ ನೀಡಿದ್ದರಿಂದ ಭರಮಸಾಗರ ಏತ ನೀರಾವರಿ ಯೋಜನೆ ಯಶಸ್ವಿಯಾಗಿ ಜಾರಿಯಾಗಿದೆ. ತಾಲ್ಲೂಕಿನ 43 ಕೆರೆಗಳಲ್ಲಿ ನೀರು ತುಂಬಿದೆ’ ಎಂದು ಶಾಸಕ ಎಂ. ಚಂದ್ರಪ್ಪ ತಿಳಿಸಿದರು.</p>.<p>ಚಿತ್ರದುರ್ಗದಲ್ಲಿ ಮೇ 9ರಂದು ನಡೆಯಲಿರುವ ಅಭಿಮಾನೋತ್ಸವದ ಅಂಗವಾಗಿ ಮಂಗಳವಾರ ಭರಮಸಾಗರದ ಪ್ರವಾಸಿ ಮಂದಿರದಲ್ಲಿ ಆಯೋಜಿಸಿದ್ದ ಪೂರ್ವಭಾವಿ ಸಭೆಯಲ್ಲಿ ಮಾತನಾಡಿದರು.</p>.<p>‘ಯಡಿಯೂರಪ್ಪ ಅವರ ಕೊಡುಗೆ ಸ್ಮರಿಸುವುದು ಎಲ್ಲರ ಕರ್ತವ್ಯ. ಹೀಗಾಗಿ ಅಭಿಮಾನೋತ್ಸವಕ್ಕೆ ಈ ಭಾಗದ ಅಭಿಮಾನಿಗಳು ಸ್ವಯಂಪ್ರೇರಿತವಾಗಿ ಬರಬೇಕು’ ಎಂದು ಹೇಳಿದರು.</p>.<p>ಭರಮಸಾಗರ ಬಿಜೆಪಿ ಮಂಡಲ ಅಧ್ಯಕ್ಷ ಎನ್.ಟಿ. ಬಸವರಾಜ್, ಉಪಾಧ್ಯಕ್ಷ ಶೈಲೇಶ್ಕುಮಾರ್, ಮಂಜುನಾಥ, ಪ್ರವೀಣ್ಕುಮಾರ್, ಚಿಕ್ಕಬೆನ್ನೂರು ಗೌಡರ ತೀರ್ಥಪ್ಪ, ಕಲ್ಲೇಶ್, ಸಿದ್ದಬಸಣ್ಣ, ಕೆ.ಎನ್. ಮೋಹನ್, ರಾಜಣ್ಣ, ಪೆಟ್ರೋಲ್ ಬಸವರಾಜ್ ಹಾಗೂ ಭರಮಸಾಗರ ಮಂಡಲದ ಚುನಾಯಿತ ಪ್ರತಿನಿಧಿಗಳು ಹಾಗೂ ಪದಾಧಿಕಾರಿಗಳು ಹಾಜರಿದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260506-44-10987902</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>