<p>ಚಿತ್ರದುರ್ಗ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟದ ಬದುಕು ಸ್ತಬ್ಧಚಿತ್ರಗಳಲ್ಲಿ ಅನಾವರಣಗೊಳ್ಳಲಿದೆ. ಮೇ 8ರಂದು ಸಂಜೆ ಯಡಿಯೂರಪ್ಪ ಪುರ ಪ್ರವೇಶ ಮಾಡಲಿದ್ದಾರೆ’ ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ರಘು ಕೌಟಿಲ್ಯ ಹೇಳಿದರು.</p>.<p>‘ಮೈಸೂರು ದಸರಾ ಜಂಬೂ ಸವಾರಿ ಮಾದರಿಯಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಯಡಿಯೂರಪ್ಪ ಅವರಿಗೆ ಸ್ವಾಗತ ಕೋರಲಾಗುವುದು. ಕನಕ ವೃತ್ತದಿಂದ ಸ್ವಾಗತ ಮೆರವಣಿಗೆ ಆರಂಭವಾಗಲಿದ್ದು, ಎಐ ತಂತ್ರಜ್ಞಾನದ ವಿಡಿಯೊ ಪ್ರಸಾರ ಗಮನ ಸೆಳೆಯಲಿದೆ. ಜೊತೆಗೆ ಸಾಂಸ್ಕೃತಿಕ ತಂಡಗಳು ಬಿ.ಎಸ್. ಯಡಿಯೂರಪ್ಪ ಅವರ ಹೋರಾಟದ ಬದುಕನ್ನು ಅನಾವರಣಗೊಳಿಸಲಿವೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಯಡಿಯೂರಪ್ಪ ಪುರ ಪ್ರವೇಶದ ಸಿದ್ಧತೆಗಳು ಅಂತಿಮ ಹಂತಕ್ಕೆ ಬಂದಿವೆ. 1008 ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾರೆ. ರೈತ ಮಹಿಳೆಯರು, ನೇಗಿಲು ಹೊತ್ತ 500 ರೈತರು ಸೇರಿ 2,500 ರೈತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>‘ಮಂಡ್ಯ ಜಿಲ್ಲೆ ಬೂಕನಕೆರೆಯಿಂದ ಶಿಕಾರಿಪುರಕ್ಕೆ ಬಂದ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಮೂಲದಿಂದ ಕಟ್ಟುವ ಕೆಲಸ ಮಾಡಿದರು. ಜನಸಂಘದಿಂದ ರಾಜಕೀಯ ಜೀವನಕ್ಕೆ ಕಾಲಿಟ್ಟ ಅವರು ಹೋರಾಟದ ಬದುಕಿಗೆ ತಮ್ಮನ್ನು ತಾವು ಅರ್ಪಿಸಿಕೊಂಡರು. ಅಧಿಕಾರದಲ್ಲಿದ್ದಾಗ ಉತ್ತಮ ಆಡಳಿತ ನೀಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಟ್ಟರು. ಅಧಿಕಾರ ಇಲ್ಲದಿದ್ದಾಗಲೂ ಹೋರಾಟಗಳ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಿದರು’ ಎಂದು ಹೇಳಿದರು.</p>.<p>‘ಬಡವರು, ಶೋಷಿತರು, ಕೃಷಿಕರು, ಮಹಿಳೆಯರ ಪರ ಹೋರಾಡುತ್ತಾ ಅವರ ಕಷ್ಟಗಳಲ್ಲಿ ಭಾಗಿಯಾಗುತ್ತಾ ಸಾಗಿದ ಅವರು ಬಡವರ ಬಂಧು ಎನಿಸಿದ್ದಾರೆ. ಹೋರಾಟದಿಂದಲೇ ವಿಧಾನಸಭೆ ಪ್ರವೇಶಿಸಿದ ಏಕೈಕ ನಾಯಕ ಯಡಿಯೂರಪ್ಪ. ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ಅವರು ರೈತರಿಗಾಗಿ ಹಲವು ಉತ್ತಮ ಯೋಜನೆಗಳನ್ನು ಜಾರಿಗೊಳಿಸಿದರು’ ಎಂದರು.</p>.<p>‘ಜೀತ ವಿಮುಕ್ತಿ, ಬಗುರ್ಹುಕುಂ ಸಾಗುವಳಿದಾರರ ಪರ ನಡೆಸಿದ ಹೋರಾಟ ಯಡಿಯೂರಪ್ಪ ಅವರ ಬುದುಕಿನ ಪ್ರಮುಖ ಘಟ್ಟವಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಜೈಲು ವಾಸವನ್ನೂ ಅನುಭವಿಸಿದ್ದಾರೆ. ಅಧಿಕಾರ ಸಿಕ್ಕ ನಂತರ ಅವರು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದರು. ಬಡ ಮಕ್ಕಳಿಗೆ ಸೈಕಲ್ ವಿತರಿಸಿ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು. ಆರೋಗ್ಯ ಕವಚ ಯೋಜನೆ ಮೂಲಕ ಬಡವರಿಗೆ ಆರೋಗ್ಯಯುತ ಬದುಕು ನೀಡಿದರು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-788082533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಮಾಜಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರ ಹೋರಾಟದ ಬದುಕು ಸ್ತಬ್ಧಚಿತ್ರಗಳಲ್ಲಿ ಅನಾವರಣಗೊಳ್ಳಲಿದೆ. ಮೇ 8ರಂದು ಸಂಜೆ ಯಡಿಯೂರಪ್ಪ ಪುರ ಪ್ರವೇಶ ಮಾಡಲಿದ್ದಾರೆ’ ಎಂದು ಬಿಜೆಪಿ ಹಿಂದುಳಿದ ವರ್ಗಗಳ ರಾಜ್ಯ ಘಟಕದ ಅಧ್ಯಕ್ಷ ರಘು ಕೌಟಿಲ್ಯ ಹೇಳಿದರು.</p>.<p>‘ಮೈಸೂರು ದಸರಾ ಜಂಬೂ ಸವಾರಿ ಮಾದರಿಯಲ್ಲಿ ವಿವಿಧ ಕಲಾ ತಂಡಗಳೊಂದಿಗೆ ಯಡಿಯೂರಪ್ಪ ಅವರಿಗೆ ಸ್ವಾಗತ ಕೋರಲಾಗುವುದು. ಕನಕ ವೃತ್ತದಿಂದ ಸ್ವಾಗತ ಮೆರವಣಿಗೆ ಆರಂಭವಾಗಲಿದ್ದು, ಎಐ ತಂತ್ರಜ್ಞಾನದ ವಿಡಿಯೊ ಪ್ರಸಾರ ಗಮನ ಸೆಳೆಯಲಿದೆ. ಜೊತೆಗೆ ಸಾಂಸ್ಕೃತಿಕ ತಂಡಗಳು ಬಿ.ಎಸ್. ಯಡಿಯೂರಪ್ಪ ಅವರ ಹೋರಾಟದ ಬದುಕನ್ನು ಅನಾವರಣಗೊಳಿಸಲಿವೆ’ ಎಂದು ಗುರುವಾರ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.</p>.<p>‘ಯಡಿಯೂರಪ್ಪ ಪುರ ಪ್ರವೇಶದ ಸಿದ್ಧತೆಗಳು ಅಂತಿಮ ಹಂತಕ್ಕೆ ಬಂದಿವೆ. 1008 ಮಹಿಳೆಯರು ಪೂರ್ಣಕುಂಭ ಹೊತ್ತು ಮೆರವಣಿಗೆಯಲ್ಲಿ ಸಾಗಲಿದ್ದಾರೆ. ರೈತ ಮಹಿಳೆಯರು, ನೇಗಿಲು ಹೊತ್ತ 500 ರೈತರು ಸೇರಿ 2,500 ರೈತರು ಮೆರವಣಿಗೆಯಲ್ಲಿ ಪಾಲ್ಗೊಳ್ಳಲಿದ್ದಾರೆ’ ಎಂದು ತಿಳಿಸಿದರು.</p>.<p>‘ಮಂಡ್ಯ ಜಿಲ್ಲೆ ಬೂಕನಕೆರೆಯಿಂದ ಶಿಕಾರಿಪುರಕ್ಕೆ ಬಂದ ಯಡಿಯೂರಪ್ಪ ಅವರು ರಾಜ್ಯದಲ್ಲಿ ಬಿಜೆಪಿಯನ್ನು ಮೂಲದಿಂದ ಕಟ್ಟುವ ಕೆಲಸ ಮಾಡಿದರು. ಜನಸಂಘದಿಂದ ರಾಜಕೀಯ ಜೀವನಕ್ಕೆ ಕಾಲಿಟ್ಟ ಅವರು ಹೋರಾಟದ ಬದುಕಿಗೆ ತಮ್ಮನ್ನು ತಾವು ಅರ್ಪಿಸಿಕೊಂಡರು. ಅಧಿಕಾರದಲ್ಲಿದ್ದಾಗ ಉತ್ತಮ ಆಡಳಿತ ನೀಡುವ ಮೂಲಕ ಜನರಿಗೆ ಅನುಕೂಲ ಮಾಡಿಕೊಟ್ಟರು. ಅಧಿಕಾರ ಇಲ್ಲದಿದ್ದಾಗಲೂ ಹೋರಾಟಗಳ ಮೂಲಕ ಬಡವರ ಕಣ್ಣೀರು ಒರೆಸುವ ಕೆಲಸ ಮಾಡಿದರು’ ಎಂದು ಹೇಳಿದರು.</p>.<p>‘ಬಡವರು, ಶೋಷಿತರು, ಕೃಷಿಕರು, ಮಹಿಳೆಯರ ಪರ ಹೋರಾಡುತ್ತಾ ಅವರ ಕಷ್ಟಗಳಲ್ಲಿ ಭಾಗಿಯಾಗುತ್ತಾ ಸಾಗಿದ ಅವರು ಬಡವರ ಬಂಧು ಎನಿಸಿದ್ದಾರೆ. ಹೋರಾಟದಿಂದಲೇ ವಿಧಾನಸಭೆ ಪ್ರವೇಶಿಸಿದ ಏಕೈಕ ನಾಯಕ ಯಡಿಯೂರಪ್ಪ. ಕೃಷಿಗೆ ಪ್ರತ್ಯೇಕ ಬಜೆಟ್ ಮಂಡಿಸಿದ ಅವರು ರೈತರಿಗಾಗಿ ಹಲವು ಉತ್ತಮ ಯೋಜನೆಗಳನ್ನು ಜಾರಿಗೊಳಿಸಿದರು’ ಎಂದರು.</p>.<p>‘ಜೀತ ವಿಮುಕ್ತಿ, ಬಗುರ್ಹುಕುಂ ಸಾಗುವಳಿದಾರರ ಪರ ನಡೆಸಿದ ಹೋರಾಟ ಯಡಿಯೂರಪ್ಪ ಅವರ ಬುದುಕಿನ ಪ್ರಮುಖ ಘಟ್ಟವಾಗಿದೆ. ತುರ್ತು ಪರಿಸ್ಥಿತಿಯಲ್ಲಿ ಜೈಲು ವಾಸವನ್ನೂ ಅನುಭವಿಸಿದ್ದಾರೆ. ಅಧಿಕಾರ ಸಿಕ್ಕ ನಂತರ ಅವರು ಭಾಗ್ಯಲಕ್ಷ್ಮಿ ಯೋಜನೆ ಜಾರಿಗೊಳಿಸಿದರು. ಬಡ ಮಕ್ಕಳಿಗೆ ಸೈಕಲ್ ವಿತರಿಸಿ ವಿದ್ಯಾಭ್ಯಾಸಕ್ಕೆ ಅನುಕೂಲ ಮಾಡಿಕೊಟ್ಟರು. ಆರೋಗ್ಯ ಕವಚ ಯೋಜನೆ ಮೂಲಕ ಬಡವರಿಗೆ ಆರೋಗ್ಯಯುತ ಬದುಕು ನೀಡಿದರು’ ಎಂದು ತಿಳಿಸಿದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-788082533</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>