<p><strong>ಮೊಳಕಾಲ್ಮುರು</strong>: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಯಾವುದೇ ರೈತ, ಕಾರ್ಮಿಕ, ದಲಿತ ನಾಯಕರನ್ನು ಆಹ್ವಾನಿಸಿಲ್ಲ ಎಂದು ಸಂಘದ ರೈತಸಂಘ ಮತ್ತು ಹಸಿರುಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ದೂರಿದರು.</p>.<p>ಬುಧವಾರ ನಡೆದ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಅಭಿಮಾನೋತ್ಸವವು ಪಕ್ಷಾತೀತ, ಜಾತ್ಯತೀತ ಎಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿ ಮುಖಂಡರು ಮಾತ್ರ ಸಿದ್ಧತಾ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 2028ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಭಿಮಾನೋತ್ಸವ ಪೂರಕವಾಗಿದೆ ಎಂದು ಹೇಳುತ್ತಿದ್ದಾರೆ. ಈ ಕಾರ್ಯಕ್ರಮದ ಹಿಂದೆ ದೊಡ್ಡ ಪ್ರಮಾಣದ ರಾಜಕೀಯ ಉದ್ದೇಶ ಅಡಗಿದೆ ಎಂದು ಅವರು ಆರೋಪಿಸಿದರು.</p>.<p>ಭದ್ರಾಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ, ಮದಕರಿ ನಾಯಕ ಥೀಂ ಪಾರ್ಕ್ ಸ್ಥಾಪನೆಗೆ ಅಮಿತ್ ಶಾ ನೀಡಿದ್ದ ಭರವಸೆಗಳು ಹುಸಿಯಾಗಿವೆ ಎಂದು ಹೇಳಿದರು. ಸಂಘದ ಮರ್ಲಹಳ್ಳಿ ರವಿಕುಮಾರ್, ಎಸ್.ರಾಜಣ್ಣ, ತಿಪ್ಪೇಸ್ವಾಮಿ, ಪಾಪಣ್ಣ, ರಮೇಶ್, ಶ್ರೀನಿವಾಸ್, ಶಿವಕುಮಾರ್, ಪಿ.ಟಿ. ಹಟ್ಟಿ ನಿಂಗಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-1071168529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p><strong>ಮೊಳಕಾಲ್ಮುರು</strong>: ಮೇ 9ರಂದು ಚಿತ್ರದುರ್ಗದಲ್ಲಿ ನಡೆಯಲಿರುವ ಬಿಎಸ್ವೈ ಅಭಿಮಾನೋತ್ಸವ ಕಾರ್ಯಕ್ರಮಕ್ಕೆ ಯಾವುದೇ ರೈತ, ಕಾರ್ಮಿಕ, ದಲಿತ ನಾಯಕರನ್ನು ಆಹ್ವಾನಿಸಿಲ್ಲ ಎಂದು ಸಂಘದ ರೈತಸಂಘ ಮತ್ತು ಹಸಿರುಸೇನೆ ರಾಜ್ಯ ಘಟಕದ ಕಾರ್ಯಾಧ್ಯಕ್ಷ ಬೇಡರೆಡ್ಡಿಹಳ್ಳಿ ಬಸವರೆಡ್ಡಿ ದೂರಿದರು.</p>.<p>ಬುಧವಾರ ನಡೆದ ಸಂಘದ ಸಭೆಯಲ್ಲಿ ಮಾತನಾಡಿದ ಅವರು, ಅಭಿಮಾನೋತ್ಸವವು ಪಕ್ಷಾತೀತ, ಜಾತ್ಯತೀತ ಎಂದು ಹೇಳಲಾಗುತ್ತಿದೆ. ಆದರೆ, ಬಿಜೆಪಿ ಮುಖಂಡರು ಮಾತ್ರ ಸಿದ್ಧತಾ ಸಭೆಗಳಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. 2028ರಲ್ಲಿ ಬಿಜೆಪಿಯನ್ನು ಅಧಿಕಾರಕ್ಕೆ ತರಲು ಅಭಿಮಾನೋತ್ಸವ ಪೂರಕವಾಗಿದೆ ಎಂದು ಹೇಳುತ್ತಿದ್ದಾರೆ. ಈ ಕಾರ್ಯಕ್ರಮದ ಹಿಂದೆ ದೊಡ್ಡ ಪ್ರಮಾಣದ ರಾಜಕೀಯ ಉದ್ದೇಶ ಅಡಗಿದೆ ಎಂದು ಅವರು ಆರೋಪಿಸಿದರು.</p>.<p>ಭದ್ರಾಮೇಲ್ದಂಡೆ ಯೋಜನೆಗೆ ₹ 5,300 ಕೋಟಿ ಅನುದಾನ, ಮದಕರಿ ನಾಯಕ ಥೀಂ ಪಾರ್ಕ್ ಸ್ಥಾಪನೆಗೆ ಅಮಿತ್ ಶಾ ನೀಡಿದ್ದ ಭರವಸೆಗಳು ಹುಸಿಯಾಗಿವೆ ಎಂದು ಹೇಳಿದರು. ಸಂಘದ ಮರ್ಲಹಳ್ಳಿ ರವಿಕುಮಾರ್, ಎಸ್.ರಾಜಣ್ಣ, ತಿಪ್ಪೇಸ್ವಾಮಿ, ಪಾಪಣ್ಣ, ರಮೇಶ್, ಶ್ರೀನಿವಾಸ್, ಶಿವಕುಮಾರ್, ಪಿ.ಟಿ. ಹಟ್ಟಿ ನಿಂಗಣ್ಣ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260508-44-1071168529</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>