<p>ಚಿತ್ರದುರ್ಗ: ‘ಮೀಸಲಾತಿಗಾಗಿ ನಾವು 40 ವರ್ಷ ಹೋರಾಟ ನಡೆಸಿದ್ದೇವೆ. ನಮಗೆ ಮೀಸಲಾತಿ ನೀಡಲು ಆಯೋಗದ ವರದಿ ಕೇಳುತ್ತಾರೆ. ಆದರೆ ಕೆಲವರಿಗೆ ಯಾವ ಹೋರಾಟವೂ ಇಲ್ಲದೇ, ಆಯೋಗದ ವರದಿಯೂ ಇಲ್ಲದೇ ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್) ಮೀಸಲಾತಿ ಕೊಟ್ಟಿದ್ದು ಏಕೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಶುಕ್ರವಾರ ನಡೆದ 16ನೇ ವರ್ಷದ ಪಾಳೆಗಾರರ ನೆನಪಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸಿ ಅದನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸಬೇಕಾಗಿದೆ. ನಾವು ಹಲವು ದಶಕಗಳಿಂದ ಹೋರಾಟ ನಡೆಸಿದರೂ ಇಲ್ಲಿಯವರೆಗೆ ನ್ಯಾಯ ಸಿಕ್ಕಿಲ್ಲ. ನ್ಯಾಯ ಸಿಗದಿದ್ದರೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ. ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸಲಾಗಿದ್ದು, ಅದು ಇಲ್ಲಿಯವರೆಗೂ ಜಾರಿಯಾಗಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನ್ಯಾಯ ಒದಗಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ ಮೀಸಲಾತಿ ತಡೆ ಹಿಡಿದಿಲ್ಲ. ನಾವು ಮೀಸಲಾತಿಗಾಗಿ ಒಗ್ಗಟ್ಟಿನ ಹೋರಾಟ ನಡೆಸುತ್ತಿದ್ದೇವೆ. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಸಮುದಾಯದ ಅಭಿವೃದ್ಧಿಗೆ ಸಹಕರಿಸಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ ಸಚಿವರು ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ. ಶೋಷಣೆ ವಿರುದ್ಧ ಹೋರಾಟಕ್ಕೆ ಕೈಜೋಡಿಸುವ ಅವಶ್ಯಕತೆ ಇದೆ’ ಎಂದರು.</p>.<p>‘ಹಲವು ವರ್ಷಗಳವರೆಗೆ ನಾವು ಶಿಕ್ಷಣದಿಂದ ವಂಚಿತರಾಗಿದ್ದೆವು. ಸ್ವಾತಂತ್ರ್ಯ ನಂತರ ಸಂವಿಧಾನದಿಂದ ಶೈಕ್ಷಣಿಕ ಅವಕಾಶಗಳು ದೊರೆತಿವೆ. ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಬೇಕು. ಸ್ವಾಮೀಜಿ ನೇತೃತ್ವದಲ್ಲಿ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕವಾಗಿ ಮುಂದುವರಿಯುತ್ತಾ ದಾಪುಗಾಲಿಡಬೇಕು’ ಎಂದು ಹೇಳಿದರು.</p>.<p>‘ಸಾಧನೆಗೆ ಪರಿಶ್ರಮ ಬಹಳ ಮುಖ್ಯ. ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಸಮಾಜದ ಕುರಿತು ಕಾಳಜಿ ಇಟ್ಟುಕೊಳ್ಳಬೇಕು. ಕೋಟೆನಾಡು ಇತಿಹಾಸ ಪ್ರಸಿದ್ಧ ಜಿಲ್ಲೆ. ಇತಿಹಾಸವನ್ನು ಹೊರ ತೆಗೆಯುವ ಪ್ರಯತ್ನವನ್ನು ಹಲವರು ಮಾಡಿಕೊಂಡು ಬಂದಿದ್ದಾರೆ. ಕಲ್ಲಿನಕೋಟೆ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕಿದೆ. ಸ್ವಾಮೀಜಿ ಪಾದಯಾತ್ರೆ ಮಾಡಿ ಸರ್ಕಾರದ ಗಮನ ಸೆಳೆದು ಸಮಾಜಕ್ಕೆ ನ್ಯಾಯ ಕೊಡಿಸಲು ಮುಂದಾದರು’ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಇದೇ ವೇಳೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕಪಡೆದ ಒಬ್ಬ ವಿದ್ಯಾರ್ಥಿಗೆ ಲ್ಯಾಪ್ಟಾಪ್, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ತಲಾ ಒಬ್ಬ ವಿದ್ಯಾರ್ಥಿಗೆ ₹ 10,000 ನಗದು, ಎಸ್ಎಸ್ಎಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಒಬ್ಬ ವಿದ್ಯಾರ್ಥಿಗೆ ₹ 11,000 ನಗದು ಬಹುಮಾನ ವಿತರಿಸಲಾಯಿತು.</p>.<p>ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ರಾಯಚೂರು ವಿ.ವಿ. ಕುಲಪತಿ ಹನುಮಂತಪ್ಪ, ಗುಡದೇಶ್ವರಪ್ಪ, ಸಂದೀಪ್, ಯೋಗೇಶ್ ಬಾಬು, ಸೊಂಡೆಕೆರೆ ಶಿವಣ್ಣ, ಎಂ.ಕೆ.ತಾಜ್ಪೀರ್, ಬೂತಯ್ಯ, ಪಾಪಯ್ಯ, ಪಾಲಾಕ್ಷಪ್ಪ, ಅಶೋಕ ಬೆಳಗಟ್ಟ ಬೋರಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-44-243350114</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>
<p>ಚಿತ್ರದುರ್ಗ: ‘ಮೀಸಲಾತಿಗಾಗಿ ನಾವು 40 ವರ್ಷ ಹೋರಾಟ ನಡೆಸಿದ್ದೇವೆ. ನಮಗೆ ಮೀಸಲಾತಿ ನೀಡಲು ಆಯೋಗದ ವರದಿ ಕೇಳುತ್ತಾರೆ. ಆದರೆ ಕೆಲವರಿಗೆ ಯಾವ ಹೋರಾಟವೂ ಇಲ್ಲದೇ, ಆಯೋಗದ ವರದಿಯೂ ಇಲ್ಲದೇ ಆರ್ಥಿಕವಾಗಿ ದುರ್ಬಲ ವರ್ಗದ (ಇಡಬ್ಲ್ಯುಎಸ್) ಮೀಸಲಾತಿ ಕೊಟ್ಟಿದ್ದು ಏಕೆ’ ಎಂದು ಸಚಿವ ಸತೀಶ್ ಜಾರಕಿಹೊಳಿ ಪ್ರಶ್ನಿಸಿದರು.</p>.<p>ನಗರದ ವಾಲ್ಮೀಕಿ ಭವನದಲ್ಲಿ ಶುಕ್ರವಾರ ನಡೆದ 16ನೇ ವರ್ಷದ ಪಾಳೆಗಾರರ ನೆನಪಿನೋತ್ಸವ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಉದ್ಘಾಟಿಸಿ ಮಾತನಾಡಿದರು.</p>.<p>‘ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ಮೀಸಲಾತಿ ಹೆಚ್ಚಿಸಿ ಅದನ್ನು ಸಂವಿಧಾನದ 9ನೇ ಶೆಡ್ಯೂಲ್ಗೆ ಸೇರಿಸಬೇಕಾಗಿದೆ. ನಾವು ಹಲವು ದಶಕಗಳಿಂದ ಹೋರಾಟ ನಡೆಸಿದರೂ ಇಲ್ಲಿಯವರೆಗೆ ನ್ಯಾಯ ಸಿಕ್ಕಿಲ್ಲ. ನ್ಯಾಯ ಸಿಗದಿದ್ದರೆ ನ್ಯಾಯಾಲಯದ ಮೊರೆ ಹೋಗುವುದು ಅನಿವಾರ್ಯ. ಪರಿಶಿಷ್ಟ ಪಂಗಡದ ಮೀಸಲಾತಿ ಪ್ರಮಾಣವನ್ನು ಶೇ 7ಕ್ಕೆ ಹೆಚ್ಚಿಸಲಾಗಿದ್ದು, ಅದು ಇಲ್ಲಿಯವರೆಗೂ ಜಾರಿಯಾಗಿಲ್ಲ. ಕೇಂದ್ರ ಸರ್ಕಾರ ನಮ್ಮ ರಾಜ್ಯದಲ್ಲಿ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳಿಗೆ ನ್ಯಾಯ ಒದಗಿಸಿಲ್ಲ’ ಎಂದು ಅಸಮಾಧಾನ ವ್ಯಕ್ತಪಡಿಸಿದರು.</p>.<p>‘ಕಾಂಗ್ರೆಸ್ ಸರ್ಕಾರ ಮೀಸಲಾತಿ ತಡೆ ಹಿಡಿದಿಲ್ಲ. ನಾವು ಮೀಸಲಾತಿಗಾಗಿ ಒಗ್ಗಟ್ಟಿನ ಹೋರಾಟ ನಡೆಸುತ್ತಿದ್ದೇವೆ. ಎಲ್ಲಾ ಸರ್ಕಾರಗಳ ಅವಧಿಯಲ್ಲೂ ಸಮುದಾಯದ ಅಭಿವೃದ್ಧಿಗೆ ಸಹಕರಿಸಲಾಗಿದೆ. ಪರಿಶಿಷ್ಟ ಪಂಗಡ ಸಮುದಾಯದ ಸಚಿವರು ಆ ನಿಟ್ಟಿನಲ್ಲಿ ಪ್ರಯತ್ನಿಸಿದ್ದಾರೆ. ಶೋಷಣೆ ವಿರುದ್ಧ ಹೋರಾಟಕ್ಕೆ ಕೈಜೋಡಿಸುವ ಅವಶ್ಯಕತೆ ಇದೆ’ ಎಂದರು.</p>.<p>‘ಹಲವು ವರ್ಷಗಳವರೆಗೆ ನಾವು ಶಿಕ್ಷಣದಿಂದ ವಂಚಿತರಾಗಿದ್ದೆವು. ಸ್ವಾತಂತ್ರ್ಯ ನಂತರ ಸಂವಿಧಾನದಿಂದ ಶೈಕ್ಷಣಿಕ ಅವಕಾಶಗಳು ದೊರೆತಿವೆ. ವಿದ್ಯಾರ್ಥಿಗಳು ಉನ್ನತ ಹುದ್ದೆ ಅಲಂಕರಿಸಬೇಕು. ಸ್ವಾಮೀಜಿ ನೇತೃತ್ವದಲ್ಲಿ ಶೈಕ್ಷಣಿಕ, ಸಾಮಾಜಿಕ, ರಾಜಕೀಯ ಮತ್ತು ಆರ್ಥಿಕವಾಗಿ ಮುಂದುವರಿಯುತ್ತಾ ದಾಪುಗಾಲಿಡಬೇಕು’ ಎಂದು ಹೇಳಿದರು.</p>.<p>‘ಸಾಧನೆಗೆ ಪರಿಶ್ರಮ ಬಹಳ ಮುಖ್ಯ. ವಿದ್ಯಾರ್ಥಿಗಳು ಚಿಕ್ಕಂದಿನಿಂದಲೇ ಸಮಾಜದ ಕುರಿತು ಕಾಳಜಿ ಇಟ್ಟುಕೊಳ್ಳಬೇಕು. ಕೋಟೆನಾಡು ಇತಿಹಾಸ ಪ್ರಸಿದ್ಧ ಜಿಲ್ಲೆ. ಇತಿಹಾಸವನ್ನು ಹೊರ ತೆಗೆಯುವ ಪ್ರಯತ್ನವನ್ನು ಹಲವರು ಮಾಡಿಕೊಂಡು ಬಂದಿದ್ದಾರೆ. ಕಲ್ಲಿನಕೋಟೆ ರಕ್ಷಣೆಗೆ ಎಲ್ಲರೂ ಕೈಜೋಡಿಸಬೇಕಿದೆ. ಸ್ವಾಮೀಜಿ ಪಾದಯಾತ್ರೆ ಮಾಡಿ ಸರ್ಕಾರದ ಗಮನ ಸೆಳೆದು ಸಮಾಜಕ್ಕೆ ನ್ಯಾಯ ಕೊಡಿಸಲು ಮುಂದಾದರು’ ಎಂದು ಶಾಸಕ ಟಿ.ರಘುಮೂರ್ತಿ ತಿಳಿಸಿದರು. ಇದೇ ವೇಳೆ ದ್ವಿತೀಯ ಪಿಯುಸಿ ವಿಜ್ಞಾನ ವಿಭಾಗದಲ್ಲಿ ಅತೀ ಹೆಚ್ಚು ಅಂಕಪಡೆದ ಒಬ್ಬ ವಿದ್ಯಾರ್ಥಿಗೆ ಲ್ಯಾಪ್ಟಾಪ್, ವಾಣಿಜ್ಯ ಮತ್ತು ಕಲಾ ವಿಭಾಗದಲ್ಲಿ ಅತಿ ಹೆಚ್ಚು ಅಂಕ ಪಡೆದ ತಲಾ ಒಬ್ಬ ವಿದ್ಯಾರ್ಥಿಗೆ ₹ 10,000 ನಗದು, ಎಸ್ಎಸ್ಎಲ್ಸಿಯಲ್ಲಿ ಅತೀ ಹೆಚ್ಚು ಅಂಕ ಪಡೆದ ಒಬ್ಬ ವಿದ್ಯಾರ್ಥಿಗೆ ₹ 11,000 ನಗದು ಬಹುಮಾನ ವಿತರಿಸಲಾಯಿತು.</p>.<p>ವಾಲ್ಮೀಕಿ ಗುರುಪೀಠದ ಪ್ರಸನ್ನಾನಂದ ಸ್ವಾಮೀಜಿ ಸಾನ್ನಿಧ್ಯ ವಹಿಸಿದ್ದರು. ಮಾಜಿ ಸಂಸದ ಬಿ.ಎನ್. ಚಂದ್ರಪ್ಪ, ರಾಯಚೂರು ವಿ.ವಿ. ಕುಲಪತಿ ಹನುಮಂತಪ್ಪ, ಗುಡದೇಶ್ವರಪ್ಪ, ಸಂದೀಪ್, ಯೋಗೇಶ್ ಬಾಬು, ಸೊಂಡೆಕೆರೆ ಶಿವಣ್ಣ, ಎಂ.ಕೆ.ತಾಜ್ಪೀರ್, ಬೂತಯ್ಯ, ಪಾಪಯ್ಯ, ಪಾಲಾಕ್ಷಪ್ಪ, ಅಶೋಕ ಬೆಳಗಟ್ಟ ಬೋರಯ್ಯ ಇದ್ದರು.</p>.<p><em>ಮೂಲತಃ ಪ್ರಜಾವಾಣಿ ಮುದ್ರಣ ಆವೃತ್ತಿಯಿಂದ ಇದನ್ನು ಪಡೆಯಲಾಗಿದೆ. ಎಐ ನೆರವಿನ ವರ್ಗೀಕರಣದಿಂದಾಗಿ ವಿಭಾಗ ಮತ್ತು ಬಳಸಿರುವ ಪ್ರಾತಿನಿಧಿಕ ಚಿತ್ರ ತಪ್ಪಾಗಿರಬಹುದು. ಸುದ್ದಿಯ ವಿಷಯದಲ್ಲಿ ಯಾವುದೇ ಬದಲಾವಣೆ ಇಲ್ಲ</em><br />260523-44-243350114</p>.<div><p><strong>ಪ್ರಜಾವಾಣಿ ಆ್ಯಪ್ ಇಲ್ಲಿದೆ: <a href="https://play.google.com/store/apps/details?id=com.tpml.pv">ಆಂಡ್ರಾಯ್ಡ್ </a>| <a href="https://apps.apple.com/in/app/prajavani-kannada-news-app/id1535764933">ಐಒಎಸ್</a> | <a href="https://whatsapp.com/channel/0029Va94OfB1dAw2Z4q5mK40">ವಾಟ್ಸ್ಆ್ಯಪ್</a>, <a href="https://www.twitter.com/prajavani">ಎಕ್ಸ್</a>, <a href="https://www.fb.com/prajavani.net">ಫೇಸ್ಬುಕ್</a> ಮತ್ತು <a href="https://www.instagram.com/prajavani">ಇನ್ಸ್ಟಾಗ್ರಾಂ</a>ನಲ್ಲಿ ಪ್ರಜಾವಾಣಿ ಫಾಲೋ ಮಾಡಿ.</strong></p></div>